ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದಲ್ಲಿ ಯಾವುದೇ ಮಕ್ಕಳು ಹೊರಗುಳಿಯದಂತೆ ಸಮೀಕ್ಷೆಗೆ ಒಳಪಡಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಸೂಚನೆ.
ತುಮಕೂರು: ಜಿಲ್ಲೆಯಲ್ಲಿ ಕೈಗೊಂಡಿರುವ ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದಲ್ಲಿ ಯಾವುದೇ ಮಕ್ಕಳು ಹೊರಗುಳಿಯದಂತೆ ಸಮೀಕ್ಷೆಗೆ ಒಳಪಡಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಗಣತಿದಾರರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಸಮೀಕ್ಷೆ ಕುರಿತು ಅಭಿಪ್ರಾಯ ಹಾಗೂ ಸಲಹೆ ಬಗ್ಗೆ ಚರ್ಚಿಸುವ ಸಲುವಾಗಿ ದಲಿತ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇದುವರೆಗೆ ಪ್ರತಿ ದಿನ ಸರಾಸರಿ 8207 ಕುಟುಂಬಗಳ ಸಮೀಕ್ಷೆ ನಡೆಸಲಾಗಿದ್ದು, ಶೇಕಡಾ 103ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ ಎಂದು…