ಜನಪದ ಸಂಸ್ಕಾರದಿಂದ ಮಾತ್ರ ಸಂಸ್ಕೃತಿ ಉಳಿಯಲಿದೆ: ಕುಲಪತಿ ಪ್ರೊ. ಬಿ.ಕೆ. ರವಿ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ಶಿಕ್ಷಣ ವಿಭಾಗದಿಂದ ಆಯೋಜಿಸಿದ್ದ ಸುಗ್ಗಿ ಸಂಭ್ರಮ ಕಾರ್ಯಕ್ರಮಕ್ಕೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ (ಕೋಲಾರ) ಕುಲಪತಿಗಳಾದ ಪ್ರೊ. ಡಾ. ಬಿ.ಕೆ. ರವಿ ಅವರು ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸ್ನಾತಕೋತ್ತರ ವಿದ್ಯಾಭ್ಯಾಸ ಕೈಗೊಳ್ಳುತ್ತಿರುವ ಹಲವಾರು ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಿಂದ ಬಂದವರಾಗಿದ್ದು ನಮ್ಮ ನೆಲ, ಜಲದ ಸೊಗಡನ್ನು ಸಾರುವ ಈ ರೀತಿಯ ಕಾರ್ಯಕ್ರಮಗಳ ಆಯೋಜನೆ ಶ್ಲಾಘನೀಯ ಎಂದರು. ಪ್ರಸ್ತುತ ರಾಷ್ಟ್ರ ಉಳಿಯಬೇಕು ಹಾಗೂ ಭವಿಷ್ಯದ ಉತ್ತಮ ರಾಷ್ಟ್ರ ನಿರ್ಮಾಣ…