
ಜಿಲ್ಲಾ ಸುದ್ದಿಗಳು
ಡಾ.ಲಕ್ಷ್ಮೀ ಸಾಗರ್ ಅವರಿಗೆ ಶ್ರೇಷ್ಠ ವೈದ್ಯ ಪ್ರಶಸ್ತಿ ಸಾರ್ವಜನಿಕರಿಂದ ಅಭಿನಂದನೆ
ಕಡಬ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಲಕ್ಷ್ಮೀ ಸಾಗರ್ ಅವರಿಗೆ ಸರ್ಕಾರ ಶ್ರೇಷ್ಠ ವೈದ್ಯ ಪ್ರಶಸ್ತಿ ನೀಡಿರುವ ಹಿನ್ನೆಲೆಯಲ್ಲಿ ಕಡಬ ಸುತ್ತಮುತ್ತಲ ಸಾರ್ವಜನಿಕರು ಅವರಿಗೆ ಅಭಿನಂದನೆ ಸಲ್ಲಿಸಿದರು ಕಡಬ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಂದ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ ಬಿಂದು ಮಾಧವ್ ಸರ್ಕಾರಿ ಆಸ್ಪತ್ರೆಗಳೆಂದರೆ ಜನರು ಮೂಗು ಮುರಿಯುತ್ತಾರೆ. ಇಂತಹ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲೂ ಸಹ ಉತ್ತಮ ವೈದ್ಯರಿದ್ದು ಗ್ರಾಮೀಣ ಭಾಗದ ಜನತೆಗೆ ಗುಣಮಟ್ಟದ…
ಉದ್ಯೋಗ, ಅಧಿಕಾರ ಯಾವತ್ತೂ ಅಳತೆಗೋಲಾಗಬಾರದು. ಎಲ್ಲರನ್ನೂ ಸಮಾನವಾಗಿ ಕಾಣಬೇಕು ಶ್ರೀ ಸಿದ್ದಲಿಂಗ ಸ್ವಾಮೀಜಿ
ತುಮಕೂರು- ಉದ್ಯೋಗ, ಅಧಿಕಾರ ಯಾವತ್ತೂ ಕೂಡ ಅಳತೆಗೋಲಾಗಬಾರದು. ಎಲ್ಲರನ್ನೂ ಸಮಾನವಾಗಿ ಕಾಣಬೇಕು ಎಂದು ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಕರೆ ನೀಡಿದರು. ನಾವು ಮಾಡುವ ಉದ್ಯೋಗದಲ್ಲಿ ದಿವಾನ ಆದರೂ ಸರಿ, ಜವಾನ ಆದರೂ ಸರಿ ಎಲ್ಲರಿಗೂ ಸಮಾನವಾದಂತಹ ಅವಕಾಶ ಕಲ್ಪಿಸಿಕೊಟ್ಟಾಗ ಮಾತ್ರ ಬಸವಣ್ಣನ ಸಮಾನತೆ ಸಂದೇಶ ಸಾರ್ಥಕತೆ ಪಡೆಯುತ್ತದೆ ಎಂದು ಅವರು ಹೇಳಿದರು. ನಗರದ ಎಸ್ಐ ಟಿ ಯ ಬಿರ್ಲಾ ಆಡಿಟೋರಿಯಂನಲ್ಲಿ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದ ಬೋಧಕೇತರ ಸಂಘದ ವತಿಯಿಂದ ಏರ್ಪಡಿಸಿದ್ದ ಬಸವ…
ಎಲ್ಲಾ ಕಲೆಗಳ ತಾಯಿಬೇರು ಜನಪದ ಕಲೆ ಡಾ.ಲಕ್ಷ್ಮಣದಾಸ್
ತುಮಕೂರು:ವಿದ್ಯಾರ್ಥಿ,ಯುವಜನರಿಗೆ ಎಲ್ಲಾ ಕಲೆಗಳ ತಾಯಿಬೇರಾಗಿರುವ ಜನಪದ ಕಲೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಶ್ರೀವಿನಾಯಕ ಕಲಾ ಸಂಘ ಹಮ್ಮಿಕೊಂಡಿರುವ ಜನಪದ ಸಂಭ್ರಮ ಅತ್ಯಂತ ಅರ್ಥಪೂರ್ಣವಾಗಿದೆ ಎಂದು ಕಲಾಶ್ರೀ ಡಾ.ಲಕ್ಷ್ಮಣದಾಸ್ ತಿಳಿಸಿದ್ದಾರೆ. ತುಮಕೂರು ತಾಲೂಕು ಸ್ವಾಂದೇನಹಳ್ಳಿ ಗ್ರಾಮದಲ್ಲಿ ಶ್ರೀವಿನಾಯಕ ಸಾಂಸ್ಕøತಿಕ ಕಲಾ ಸಂಘ(ರಿ),ಬೆಜ್ಜಿಹಳ್ಳಿ,ಶಿರಾ ತಾಲೂಕು ಇವರು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ತುಮಕೂರು ವಿವಿ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜನಪದ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ತುಮಕೂರು…
ನೂತನ ಸಂಸದರು ಹಾಗೂ ಕೇಂದ್ರ ಸಚಿವ ವಿ ಸೋಮಣ್ಣನವರಿಗೆ ಎನ್.ಡಿ. ಎ ಪಕ್ಷದ ಕಾರ್ಯಕರ್ತರಿಂದ ಅಭಿನಂದನೆ
ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಹೇರೂರು ಬಳಿಯಿರುವ ಬಾಲಾಜಿ ಕಲ್ಯಾಣ ಮಂಟಪದಲ್ಲಿ ತುಮಕೂರು ಜಿಲ್ಲೆಯ ನೂತನ ಸಂಸದರು ಹಾಗೂ ಕೇಂದ್ರ ಜಲಶಕ್ತಿ ಮತ್ತು ರಾಜ್ಯ ರೈಲ್ವೆ ಸಚಿವರಾದ ವಿ.ಸೋಮಣ್ಣ ನವರಿಗೆ ಎನ್.ಡಿ. ಎ ಪಕ್ಷದ ಕಾರ್ಯ ಕರ್ತರು ಹಾಗೂ ಮತದಾರರಿಂದ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪ್ರತಿ ಶನಿವಾರ ಮತ್ತು ಭಾನುವಾರ ತುಮಕೂರಿನಲ್ಲಿ ಇರುತ್ತೇನೆ. ರೈತರು ಮತ್ತು ಜನ ಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ ಅವರ ಕುಂದು ಕೊರತೆಗಳನ್ನು…
ಪೊಲೀಸರ ಹತ್ಯೆಯ ನಂತರ ತಲೆ ಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
ಪಾವಗಡ ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರನ್ನು ಹತ್ಯೆಗೈದಿದ್ದ ಮಾಜಿ ನಕ್ಸಲೈಟ್ ವ್ಯಕ್ತಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 2005ರ ಫೆಬ್ರವರಿ 10ರಂದು ಪಾವಗಡ ತಾಲ್ಲೂಕು ತಿರುಮಣಿ ಪೊಲೀಸ್ ಠಾಣೆಯ ವ್ಯಾಪ್ತಿಯ ವೆಂಕಟಮ್ಮನಹಳ್ಳಿಯ ಶಾಲೆಯಲ್ಲಿ ಭದ್ರತೆಗೆ ನೇಮಕವಾಗಿದ್ದ 9ಜನ ಪೊಲೀಸರನ್ನು ಹತ್ಯೆ ಮಾಡಿ ತಲೆ ಮರೆಸಿಕೊಂಡಿದ್ದ ಆಂಧ್ರಪ್ರದೇಶದ ಮಾಜಿ ನಕ್ಸಲ್ ಬಂದೆಲ ಬಾಯನ್ನನ ಮಗನಾದ ಚಂದ್ರ ಮುತ್ಯಾಲು ಅಲಿಯಾಸ್ ಬಂದೆಲ ಮುತ್ಯಾಲುನನ್ನು ಪಾವಗಡ ಗ್ರಾಮಾಂತರ ವೃತ್ತದ ಸಿ ಗಿರೀಶ್, ಎಎಸ್ಐ ಗೋವಿಂದರಾಜು ಮತ್ತು ಸಿಬ್ಬಂದಿಗಳಾದ ಧರ್ಮಪಾಲನಾಯ್ಕ,…
ಕಾರ್ಗಿಲ್ 25 ನೇ ವಿಜಯೋತ್ಸವ ಆಚರಣೆ ಸಿದ್ದತೆಗೆ ಸ್ಥಳ ಪರಿಶೀಲಿಸಿದ ಮುರುಳಿಧರ ಹಾಲಪ್ಪ
ತುಮಕೂರು: ಕಾರ್ಗಿಲ್ ೨೫ನೇ ವಿಜಯೋತ್ಸವ ಆಚರಣೆ ಸಂಬಂಧಪಟ್ಟಂತೆ ನಗರದ ಅಮಾನಿಕೆರೆಯಲ್ಲಿ ಹಾಲಪ್ಪ ಪ್ರತಿಷ್ಠಾನದ ವತಿಯಿಂದ ಆಯೋಜಿಸುವ ಕಾರ್ಯಕ್ರಮದ ಸಂಬಂಧ ಇಂದು ಮುರುಳೀಧರ ಹಾಲಪ್ಪ ಮತ್ತು ಟೂಡಾ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ತುಮಕೂರು ಅಮಾನಿಕೆರೆಯ ಧ್ವಜ ಸ್ತಂಭ ಮತ್ತು ಹುತಾತ್ಮರ ಸ್ಮಾರಕದ ಬಳಿ ಜುಲೈ ೨೫ ರಂದು ವಿವಿಧ ಕಾರ್ಯಕ್ರಮಗಳನ್ನು ಎನ್.ಸಿ.ಸಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದು, ಸದರಿ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ದಪಡಿಸುವ ಸಲುವಾಗಿ ಟೂಡಾ ಆಯುಕ್ತರಾದ ಡಾ.ಬಸಂತಿ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮುರುಳೀಧರ ಹಾಲಪ್ಪ ಸ್ಥಳ…
ಎಲ್ಲಾ ಆಡಳಿತ ಇಲಾಖೆಗಳ ತಾಯಿ ಕಂದಾಯ ಇಲಾಖೆ ತಹಶೀಲ್ದಾರ್ ಆರತಿ ಬಿ
ಗುಬ್ಬಿ ಸುದ್ದಿ ಕಂದಾಯ ಇಲಾಖೆಯು ರಾಜ್ಯದ ಆಡಳಿತ ವ್ಯವಸ್ಥೆಗೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿದ್ದು, ಕಂದಾಯ ಇಲಾಖೆಯನ್ನು ಸಾಮಾನ್ಯವಾಗಿ ಎಲ್ಲಾ ಆಡಳಿತ ಇಲಾಖೆಗಳ ತಾಯಿ ಎಂದು ಕರೆಯಲಾಗುತ್ತದೆ ಎಂದು ತಹಶೀಲ್ದಾರ್ ಆರತಿ ಬಿ. ತಿಳಿಸಿದರು. ಕಂದಾಯ ಇಲಾಖೆಯು ನಾಗರಿಕರ ಜೀವನದ ಬಹುತೇಕ ಎಲ್ಲಾ ಅಂಶಗಳನ್ನು ಸ್ಪರ್ಶಿಸುವ ಮೂಲಕ ವ್ಯಾಪಕವಾಗಿದ್ದು, ಸಾಮಾಜಿಕ ಅಭಿವೃದ್ಧಿಗೆ ಇಲಾಖೆಯ ಕೊಡುಗೆ ಅಪಾರ. ಶ್ರೀಸಾಮಾನ್ಯನ ಬದುಕಿನ ಪ್ರತಿಯೊಂದು ರಂಗದಲ್ಲೂ ಕಂದಾಯ ಇಲಾಖೆಯ ಪಾತ್ರ ಬಹುಮುಖ್ಯ ಎಂದು ತಿಳಿಸಿದರು. …
ಗುಬ್ಬಿ ಸಾರ್ವಜನಿಕ ಅಸ್ಪತ್ರೆಯಲ್ಲಿ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಚಾಲನೆ
ಗುಬ್ಬಿ ಸುದ್ದಿ ಗುಬ್ಬಿ ಸಾರ್ವಜನಿಕ ಅಸ್ಪತ್ರೆಯಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ಜಿಲ್ಲಾ ಆರೋಗ್ಯ ಇಲಾಖೆ, ಗುಬ್ಬಿ ತಾಲೂಕು ಆರೋಗ್ಯ ಇಲಾಖೆ ಹಾಗೂ ಶಂಕರ ಕಣ್ಣಿನ ಆಸ್ಪತ್ರೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಆರೋಗ್ಯ ತುಮಕೂರು ಅಭಿಯಾನದಡಿಯಲ್ಲಿ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆಯ ಜಿಲ್ಲಾ ಅಧಿಕಾರಿ ರವೀಂದ್ರ ನಾಯಕ್ ಚಾಲನೆ ನೀಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ತಾಲೂಕು ವೈದ್ಯಾಧಿಕಾರಿ ಡಾ.ಬಿಂದು ಮಾಧವ ಮಾತನಾಡಿ ವಯಸ್ಸು ಹೆಚ್ಚಾದಂತೆ ಕಣ್ಣಿಗೆ ಪೊರೆ…
ಸರ್ಕಾರಿ ದಾಖಲೆಗಳನ್ನು ಮನೆಗಳಲ್ಲಿ ಇಟ್ಟುಕೊಂಡವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ :ಟಿ.ಬಿ.ಜಯಚಂದ್ರ
ತುಮಕೂರು: ಅಧಿಕಾರಿಗಳು ನಿವೃತ್ತಿಯಾದ ನಂತರವೂ ಸರ್ಕಾರಿ ದಾಖಲೆಗಳನ್ನು ಮನೆಗಳಲ್ಲಿ ಇಟ್ಟುಕೊಂಡರೆ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡುವಂತೆ ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಕಚೇರಿ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿಂದು ನಡೆದ ಸಿರಾ ತಾಲ್ಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ತಾಲ್ಲೂಕು ಕಚೇರಿ ಮಾಹಿತಿಯನ್ವಯ ಶಿರಾ ತಾಲೂಕಿನಲ್ಲಿ ಜೂನ್ 24ರಂದು ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ 347 ಅರ್ಜಿಗಳು ಸಲ್ಲಿಕೆಯಾಗಿದ್ದು, 47…
2 ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ವಿದ್ಯುತ್ ಉಪಸ್ಥಾವರಗಳ ಲೋಕಾರ್ಪಣೆ
ತುಮಕೂರು: ಸುಮಾರು 2 ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಜಿಲ್ಲೆಯ ಕೊರಟಗೆರೆ ತಾಲ್ಲೂಕು ಐ.ಕೆ.ಕಾಲೋನಿ ಹಾಗೂ ತುಂಬಾಡಿ ಗ್ರಾಮಗಳ ವಿದ್ಯುತ್ ಉಪಸ್ಥಾವರಗಳನ್ನು ಸೋಮವಾರ ಸಚಿವತ್ರಯರು ಲೋಕಾರ್ಪಣೆಗೊಳಿಸಿದರು. ಕೊರಟಗೆರೆ ತಾಲ್ಲೂಕಿನ ತುಂಬಾಡಿ ಗ್ರಾಮದಲ್ಲಿಂದು ಸಂಕೇನಹಳ್ಳಿ(ಐ.ಕೆ.ಕಾಲೋನಿ) ಹಾಗೂ ಭೈರೇನಹಳ್ಳಿ(ತುಂಬಾಡಿ) ಗ್ರಾಮಗಳಲ್ಲಿ ನೂತನವಾಗಿ ನಿರ್ಮಿಸಿರುವ 2*8 ಎಂ.ವಿ.ಎ., 66/11 ಕೆ.ವಿ. ಉಪಸ್ಥಾವರಗಳನ್ನು ಲೋಕಾರ್ಪಣೆಗೊಳಿಸಲಾಯಿತು. ನಂತರ ಮಾತನಾಡಿದ ಗೃಹ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ತಾಲ್ಲೂಕಿನ ಸಂಕೇನಹಳ್ಳಿ ಹಾಗೂ ಭೈರೇನಹಳ್ಳಿ ಭಾಗದ ರೈತರಿಗೆ…