
ಜಿಲ್ಲಾ ಸುದ್ದಿಗಳು
ಎಂ.ಸಿ.ವೇಣುಗೋಪಾಲ್ ರವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವಂತೆ ಎಸ್.ಟಿ.ಶ್ರೀನಿವಾಸ್ ಮನವಿ
ತುಮಕೂರು ಗ್ರಾಮಾಂತರ ಕ್ಷೇತ್ರದ ಮುಖಂಡ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಟಿ.ಶ್ರೀನಿವಾಸ್ ಅವರು ಎಂ.ಸಿ.ವೇಣುಗೋಪಾಲ್ ರವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನಿಡುವಂತೆ ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ತಮ್ಮ ಬೆಂಬಲಿಗರೊಂದಿಗೆ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಎಸ್.ಟಿ.ಶ್ರೀನಿವಾಸ್ ರವರು ಸಂವಿಧಾನದ ಆಶಯಗಳಿಗೆ ಬದ್ಧವಾಗಿ ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯ, ಸರ್ವರಿಗೂ ಸಮಾನ ಅಧಿಕಾರದ ಅವಕಾಶ ನೀಡುತ್ತಾ ಬಂದಿದೆ. ಕಾಂಗ್ರೆಸ್ ಪಕ್ಷದಿಂದ ಮಾತ್ರವೇ ಹಿಂದುಳಿದ ಸಮಾಜದವರು, ಸಾಮಾನ್ಯ ಕಾರ್ಯಕರ್ತರೂ ರಾಜಕೀಯ…
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪೊಲೀಸ್ ಇಲಾಖೆಯಿಂದ ಜನಸಂಪರ್ಕ ಸಭೆ
ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕಲ್ಲೂರು ಕ್ರಾಸ್, ಕಡಬ, ರಂಗನಾಥಪುರ, ಹಾಗೂ ಮಾದಪುರ ಗ್ರಾಮಗಳಲ್ಲಿ ಗುಬ್ಬಿ ತಾಲೂಕಿನ ವೃತ್ತ ನಿರಿಕ್ಷಕರು ಹಾಗೂ ಸಬ್ ಇನ್ಸ್ಪೆಕ್ಟರ್ ರವರ ನೇತೃತ್ವದಲ್ಲಿ ಜನಸಂಪರ್ಕ ಸಭೆ ನಡೆಸಲಾಯಿತು. ಜನಸಂಪರ್ಕ ಸಭೆಯಲ್ಲಿ ನೆರದಿದ್ದ ಸಾರ್ವಜನಿಕರಿಗೆ ಇತ್ತೀಚಿನ ದಿನಗಳಲ್ಲಿ ಜಾಲತಾಣದ ಅಪರಾಧಗಳು ಹೆಚ್ಚುತ್ತಿದ್ದು ಜನರು ಜಾಗರುಕತೆಯಿಂದ ಇರಬೇಕು ಅಂತಹ ಅಪರಾದಗಳು ಕಂಡು ಬಂದರೆ ಕೂಡಲೇ ಹತ್ತಿರದ ಪೋಲೀಸ್ ಠಾಣೆಗೆ ದೂರು ನೀಡುವ ಮೂಲಕ ಇಂತಹ ಪ್ರಕರಣಗಳು ಮರುಕಳಿಸದಂತೆ ತಡೆಯಲು ಸಹಕಾರಿಯಾಗುತ್ತದೆ ಎಂದು ಜನರಲ್ಲಿ ಜಾಗೃತಿ…
ಮೇ 30 : ಸಚಿವ ಡಾ.ಪರಮೇಶ್ವರ್ ಮನೆ ಮುಂಭಾಗ ಪ್ರತಿಭಟನೆ
ಹೇಮಾವತಿ ನಾಲಾ ವಲಯ ಗೊರೂರು ಜಲಾಶಯದಿಂದ ತುಮಕೂರಿಗೆ ಹಂಚಿಕೆಯಾದ ನೀರಿನಲ್ಲೇ , ಮಾಗಡಿ ಹಾಗೂ ರಾಮನಗರಕ್ಕೆ ಶ್ರೀರಂಗ ಯೋಜನೆ ಅಡಿ , ನೀರು ಸೆಳೆಯುವ ಹೇಮಾವತಿ ಎಕ್ಸ್ಪ್ರೆಸ್ ಚ್ಯಾಲನ್ ವಿರೋಧಿಸಿ , ನಡೆಯುತ್ತಿರುವ ಹೋರಾಟದ ಮುಂದಿನ ಹೆಜ್ಜೆಯ ಬಗ್ಗೆ ತುಮಕೂರು ನಗರದಲ್ಲಿಂದು ಶ್ರೀ ಮುರುಘ ರಾಜೇಂದ್ರ ಸಭಾಂಗಣದಲ್ಲಿ ಹೋರಾಟದ ನೇತೃತ್ವ ವಹಿಸಿರುವ ಮಾಜಿ ಸಚಿವ ಸೊಗಡು ಶಿವಣ್ಣನವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಹೇಮಾವತಿ ನೀರಿನ ತುಮಕೂರು ಜಿಲ್ಲೆಯ ಹಕ್ಕಿಗೆ ಬಗ್ಗೆ ಇದೇ ಮೇ 30 ರ…
ದಾರಿ ಕೇಳಿದ ಸೈನಿಕನ ಮೇಲೆ ಹಲ್ಲೆ ಪ್ರಕರಣ ದಾಖಲು
ದಾರಿ ಕೇಳಿದ ಸೈನಿಕನ ಮೇಲೆ ಹಲ್ಲೆ ಕೊರಟಗೆರೆ ಆಸ್ಪತ್ರೆಯಲ್ಲಿ ಸೈನಿಕನಿಗೆ ಚಿಕಿತ್ಸೆ.. ೫ಜನರ ಯುವಕರ ಮೇಲೆ ಪ್ರಕರಣ ದಾಖಲು. ಕೊರಟಗೆರೆ:- ಯೋಧನೋರ್ವ ತನ್ನ ಮನೆಗೆ ತೆರಳಲು ದಾರಿ ಕೇಳಿದ್ದಕ್ಕೆ ಸಿಟ್ಟಿಗೆದ್ದ ೫ ಜನ ಪುಡಿರೌಡಿಗಳ ತಂಡವೊಂದು ಬಿಯರ್ ಬಾಟಲಿನಿಂದ ಯೋಧನಿಗೆ ಹೊಡೆದು ಕೊಲೆಗೆ ಯತ್ನಿಸಿರುವ ಘಟನೆ ಮೇ.೨೧ರ ಮಂಗಳವಾರ ತಡರಾತ್ರಿ ಬೈರೇನಹಳ್ಳಿಯ ಎನ್ಟಿಆರ್ ಕಂಪರ್ಟ್ ಮತ್ತು ರೆಸ್ಟೋರೆಂಟ್ನಲ್ಲಿ ನಡೆದಿದೆ. ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅರಸಾಪುರ ಗ್ರಾಪಂ ವ್ಯಾಪ್ತಿಯ ಬೈರೇನಹಳ್ಳಿಯ ಎನ್ಟಿಆರ್ ಕಂಪರ್ಟ್ ಮತ್ತು ಬಾರ್ ಅಂಡ್…
ವಿಜೃಂಭಣೆಯಿಂದ ನಡೆದ ಎಲೇರಾಂಪುರ ಜಾತ್ರಾ ಮಹೋತ್ಸವ
ತಾಲೂಕಿನ ಕೋಳಾಲ ಹೋಬಳಿಯ ಎಲೇರಾಂಪುರದಲ್ಲಿ ಮೂರು ವರ್ಷಕ್ಕೊಮ್ಮೆ ನಡೆಯುವ ಹಗಲು ಮತ್ತು ರಾತ್ರಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು .ಹಾಗೂ ಜಾತ್ರಾ ಮಹೋತ್ಸವವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ. ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು. ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯಗಳನ್ನು ವಿಶೇಷವಾಗಿ ಹೂವಿನ ಅಲಂಕಾರದಿಂದ ಶೃಂಗಾರ ಮಾಡಲಾಗಿತ್ತು ಜಾತ್ರೆಯಲ್ಲಿ ವಿಶೇಷವಾಗಿ ವೀರಭದ್ರ ಕುಣಿತ. ಕರಡಿ ವಾದ್ಯ. ಕಿಲುಕುದುರೆ. ತಮಟೆ. ವಾದ್ಯ. ಡೋಲು. ಹರೇ. ಸಿಡಿಮದ್ದು. ಹೆಣ್ಣು ಮಕ್ಕಳ ತ್ರಿಶೂಲ ಕುಣಿತ. ಜಾನಪದ ಕಲಾತಂಡ. ಆರ್ಕೆಸ್ಟ್ರಾ. ಮುಂತಾದ ಕಾರ್ಯಕ್ರಮಗಳು ಗಮನ…
ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ,ವತಿಯಿಂದ ಭಗವನ್ ಬುದ್ದ ಜಯಂತಿ ಆಚರಣೆ
ತುಮಕೂರು:ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ, ತುಮಕೂರು ಜಿಲ್ಲಾ ಶಾಖೆವತಿಯಿಂದ ಶಾಂತಿ ಮತ್ತು ಕರುಣೆಯನ್ನು ಜಗತ್ತಿಗೆ ಬೋಧಿಸಿದ ಭಗವಾನ್ ಬುದ್ದನ ೨೫೬೮ನೇ ಜನ್ಮ ಜಯಂತಿಯನ್ನು ಅಮಾನಿಕೆರೆಯ ಅರಳಿ ವೃಕ್ಷದ ಬಳಿ ಸರಳವಾಗಿ ಆಚರಿಸಲಾಯಿತು. ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಎನ್.ಕೆ.ನಿಧಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಬುದ್ದದೇವನ ೨೫೬೮ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಬುದ್ದನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು. ಈ ವೇಳೆ ಮಾತನಾಡಿದ ಅಖಿಲ ಭಾರತ…
ಮುಖ್ಯಮಂತ್ರಿಗಳಿಂದ ಬರ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಪರಿಶೀಲನಾ ಸಭೆ
ಮುಖ್ಯಮಂತ್ರಿಗಳಿಂದ ಬರ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ಜಿಲ್ಲೆಯ ಬರ ನಿರ್ವಹಣೆ, ಪೂರ್ವ ಮುಂಗಾರು ಪರಿಸ್ಥಿತಿ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ರಾಜ್ಯದಲ್ಲಿನ ಬರಪರಿಸ್ಥಿತಿ, ಪೂರ್ವ-ಮುಂಗಾರು ಮತ್ತು ಮುಂಗಾರು ಋತುಮಾನ ಪರಿಸ್ಥಿತಿ ಮತ್ತು ಮಳೆಯಿಂದ ಉಂಟಾದ ಹಾನಿ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೇಸ್ವಾನ್ ಮೂಲಕ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭಾಗವಹಿಸಿ ಜಿಲ್ಲೆಯ ಬರಪರಿಸ್ಥಿತಿ, ಮುಂಗಾರು ಋತುಮಾನ ಪರಿಸ್ಥಿತಿ ಹಾಗೂ ಮಳೆಯಿಂದ…
ಮಳೆ ಹಾನಿಯಿಂದಾದ ಸಮಸ್ಯೆ ಪರಿಹಾರಕ್ಕೆ : ಸಹಾಯವಾಣಿ ಸ್ಥಾಪನೆ
ತುಮಕೂರು: ಮುಂದಿನ ದಿನಗಳಲ್ಲಿ ಮಳೆಯಿಂದಾಗಿ ಯಾವುದೇ ತೊಂದರೆಯುಂಟಾದಲ್ಲಿ ತುಮಕೂರು ಮಹಾನಗರ ಪಾಲಿಕೆಯ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ: 9449872599ಕ್ಕೆ ಕರೆ ಮಾಡಿ ದೂರು ದಾಖಲಿಸಲು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ. ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಉಪ್ಪಾರಹಳ್ಳಿ, ಅಂತರಸನಹಳ್ಳಿ, ದಿಬ್ಬೂರು, ಸದಾಶಿವನಗರ, ಅಮಾನಿಕೆರೆ ಕೋಡಿಹಳ್ಳ, ಶೆಟ್ಟಿಹಳ್ಳಿ, ಶಾಂತಿನಗರ ಹಾಗೂ ಎಲ್ಲಾ ಅಂಡರ್ ಪಾಸ್ಗಳು ಮತ್ತು ಇತರೆ ಸ್ಥಳಗಳಲ್ಲಿ ಮಳೆಯಿಂದಾಗಿ ಉಂಟಾದ ಪ್ರವಾಹ/ಹಾನಿಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಸಾರ್ವಜನಿಕರಿಂದ ಬಂದ ದೂರುಗಳ ಬಗ್ಗೆ ಕ್ರಮಕೈಗೊಂಡು ಪಾಲಿಕೆ ಸಿಬ್ಬಂದಿಗಳು ಜೆಸಿಬಿ, ಜಟ್ಟಿಂಗ್ ಮತ್ತು ಸಕ್ಕಿಂಗ್…
ಕುಣಾಘಟ್ಟ ಗ್ರಾಮದಲ್ಲಿ ಅದ್ದುರಿಯಾಗಿ ನೆಡೆದ ನರಸಿಂಹ ಜಯಂತಿ
ಗುಬ್ಬಿ ಸುದ್ದಿ ತಾಲೂಕಿನ ಕಡಬ ಹೋಬಳಿ ಕುಣಾಘಟ್ಟ ಗ್ರಾಮದಲ್ಲಿ ನರಸಿಂಹ ಜಯಂತಿಯನ್ನು ಶ್ರೀ ರಾಮಾನುಜಾ ಸೇವಾ ಸಮಿತಿ(ರಿ) ವತಿಯಿಂದ ಹಮ್ಮಿಕೊಳ್ಳಲಾಗಿದ್ದು. ಪ್ರತಿ ವರ್ಷದಂತೆ ಈ ಬಾರಿಯು ಶ್ರೀ ರಾಮಾನುಜ ಸೇವಾ ಸಮಿತಿಯು ನರಸಿಂಹ ಜಯಂತಿ ಅಂಗವಾಗಿ ಪುಣ್ಯಾಹ, ಸ್ವಾಮಿಯವರಿಗೆ ಪಂಚಾಮೃತ ಅಭಿಷೇಕವನ್ನು ನೆರವೇರಿಸಿ ಶಾಂತಿ ಹೋಮ, ನರಸಿಂಹ ಹೋಮ, ಗಣ ಹೋಮವನ್ನು ಲೋಕ ಕಲ್ಯಾಣಾರ್ಥಕ್ಕಾಗಿ ಅಪಾರ ಭಕ್ತರ ಸಮುಖದಲ್ಲಿ ನೆರವೇರಿಸಿ ನಂತರ ಪೂರ್ಣಹೂತಿಯೊಂದಿಗೆ ಹೋಮವನ್ನು ಮುಕ್ತಾಯ ಗೋಳಿಸಲಾಯಿತು. ಅರಿಶಿನ ಅಲಂಕಾರದೊಂದಿಗೆ ಸ್ವಾಮಿಯವರು ಕಂಗೊಳಿಸುತ್ತಿದ್ದನ್ನು ಕಂಡ ಬಂದ ಭಕ್ತರು…
ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸೂಚನೆ
ತುಮಕೂರು: ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ರೈತರು ಏಕಕಾಲದಲ್ಲಿ ಮುಂಗಾರು ಹಂಗಾಮಿನ ಬಿತ್ತನೆಯನ್ನು ಪ್ರಾರಂಭಿಸುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಸಂಜೆ ಮುಂಗಾರು ಹಂಗಾಮಿನ ಸಿದ್ಧತೆ ಕುರಿತು ಕೃಷಿ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ರೈತರ ಬೇಡಿಕೆಗನುಗುಣವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ದಾಸ್ತಾನು…