
ಜಿಲ್ಲಾ ಸುದ್ದಿಗಳು
ಅರವಿಂದ ಆಯುರ್ವೇದ ಚಿಕಿತ್ಸಾಲಯದಲ್ಲಿ ಉಚಿತ ಆರೋಗ್ಯ ತಪಾಸಣೆ
ತಿಪಟೂರು. ಅರವಿಂದ ಆಯುರ್ವೇದ ಚಿಕಿತ್ಸಾಲಯದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘ ಪರವಗೊಂಡನಹಳ್ಳಿ ಜಾನಕಿ ರಾಮ ಮಹಿಳಾ ಜ್ಞಾನ ವಿಕಾಸ ಕೇಂದ್ರದ 40 ಮಂದಿ ಮಹಿಳಾ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಬಿ.ಪಿ, ಶುಗರ್, ಹಾಗೂ ಆರೋಗ್ಯ ತಪಾಸಣೆ ಯಶಸ್ವಿಯಾಗಿ ನಡೆಸಲಾಯಿತು, ಈ ಸಂದರ್ಭದಲ್ಲಿ ಅರವಿಂದ ಆಯುರ್ವೇದದ ಅನುಭವಿ ವೈದ್ಯರ ತಂಡ ಭಾಗಿಯಾಗಿದ್ದರು. ಮಹಿಳೆಯರ ಆರೋಗ್ಯ ಸಂಬಂಧಿ ಕಾಯಿಲೆಗಳು ಹಾಗೂ ವೈದ್ಯಕೀಯ ಸಲಹೆ ಸೂಚನೆಗಳನ್ನು ಸಹ ನೀಡಲಾಗಿತ್ತು. ಈ ಸಂದರ್ಭದಲ್ಲಿ ಸುದ್ದಿಗೋಷ್ಠಿ…
ನಾಡಹಬ್ಬದಂತೆ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ: ಧನಪಾಲ್
ತುರುವೇಕೆರೆ: ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ಜೂನ್ 27ರಂದು ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯೋತ್ಸವವನ್ನು ಅದ್ದೂರಿಯಾಗಿ ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಪಿ.ಹೆಚ್.ಧನಪಾಲ್ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಜಾತ್ಯಾತೀತ ವ್ಯಕ್ತಿತ್ವದ ಎಲ್ಲಾ ಸಮುದಾಯದ ಪ್ರಗತಿಗೆ ಶ್ರಮಿಸಿದ ನಾಡಪ್ರಭು ಕೆಂಪೇಗೌಡರು. ಅಂತಹ ಮಹಾನ್ ಚೇತನರ ಜಯಂತ್ಯೋತ್ಸವವನ್ನು ಜಾತಿ, ಧರ್ಮದ ಭೇಧವಿಲ್ಲದೆ ಜಾತ್ಯಾತೀತ ಮನೋಭಾವದಲ್ಲಿ ಎಲ್ಲರೊಡಗೂಡಿ ನಾಡಹಬ್ಬದ ರೀತಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಬೇಕೆಂಬ ನಿಲುವನ್ನು ಸಂಘ ಕೈಗೊಂಡಿದೆ. ಇದಲ್ಲದೆ…
ಸರ್ಕಾರವೇ ಜನರ ಮನೆ ಬಾಗಿಲಿಗೆ : ಸಚಿವ ಕೆ.ಎನ್.ರಾಜಣ್ಣ
ತುಮಕೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸಾರ್ವಜನಿಕರ ಕುಂದು ಕೊರತೆ ಬಗೆಹರಿಸಲು ಸರ್ಕಾರವೇ ಜನರ ಮನೆ ಬಾಗಿಲಿಗೆ ತೆರಳುವಂತಹ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ತಿಳಿಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಆಡಳಿತ ಇವರ ಸಹಯೋಗದೊಂದಿಗೆ ಮಧುಗಿರಿ ಪುರಸಭೆ ಮಾಲಿಮರಿಯಪ್ಪ ರಂಗಮಂದಿರ ಆವರಣದಲ್ಲಿಂದು ಏರ್ಪಡಿಸಿದ್ದ ಜನಸ್ಪಂದನಾ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ಜನರು ಸರ್ಕಾರಿ ಕಚೇರಿಗಳಿಗೆ ಅಲೆಯಬಾರದು….
ಜೂನ್ 26ರಂದು ಜನಸ್ಪಂದನಾ, ಜೂನ್ 27ರಂದು ಕೆಂಪೇಗೌಡರ ಜಯಂತಿ/ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿ: ತಹಸೀಲ್ದಾರ್
ತುರುವೇಕೆರೆ: ಸಾರ್ವಜನಿಕರ ಕುಂದುಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರದ ಆದೇಶದಂತೆ ಜೂನ್ 26 ರಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ತಾಲ್ಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಹಸೀಲ್ದಾರ್ ರೇಣುಕುಮಾರ್ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಜೂನ್ ತಿಂಗಳ ಮೊದಲ ವಾರದಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಜಂಟಿಯಾಗಿ ತಾಲ್ಲೂಕು ಮಟ್ಟದಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ನಡೆಸಿ ಜುಲೈ 15 ರೊಳಗೆ ಜನಸ್ಪಂದನಾ…
ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ಯೋಜನೆ ಜಿಲ್ಲೆಯ ಪಾಲಿಗೆ ಮರಣಶಾಸನ
ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ಯೋಜನೆ ಜಿಲ್ಲೆಯ ಪಾಲಿಗೆ ಮರಣಶಾಸನ: ಮಸಾಲಾ ಜಯರಾಮ್/ ಗೋಲಿಬಾರ್ ನಡೆಸಿದರೂ ಹೆದರುವುದಿಲ್ಲ: ಎಂ.ಟಿ.ಕೃಷ್ಣಪ್ಪ ತುರುವೇಕೆರೆ: ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಹೋರಾಟ ಸಮಿತಿ ಕರೆ ನೀಡಿದ್ದ ತುಮಕೂರು ಜಿಲ್ಲೆ ಬಂದ್ ಗೆ ತುರುವೇಕೆರೆಯಲ್ಲೂ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ತುರುವೇಕೆರೆ ಬಂದ್ ಯಶಸ್ವಿಯಾಯಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಶಾಸಕ ಹಾಗೂ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಹೋರಾಟ ಸಮಿತಿ ಸಂಚಾಲಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ಹೇಮಾವತಿ ಎಕ್ಸ್…
ತೆಂಗಿನ ಬೆಳೆಗೂ ಸರಿಯಾದ ಪೋಷಕಾಂಶ ಒದಗಿಸಿ : ಟಿ.ಬಿ. ಜಯಚಂದ್ರ.
ತೆಂಗು ಬೆಳೆಯನ್ನು ಮೊದಲಿನಿಂದಲೂ ಯಾವುದೇ ರೀತಿಯ ಗೊಬ್ಬರವನ್ನು ಬಳಸದೆ ಬೆಳೆಸಿಕೊಂಡು ಬರಲಾಗುತ್ತಿದೆ. ಆದರೆ ಇತರೆ ಬೆಳೆಗಳಿಗೆ ನೀಡುವಂತೆ ತೆಂಗಿನ ಬೆಳೆಗೂ ಸಹ ಅವಶ್ಯಕ ಪೋಷಕಾಂಶಗಳನ್ನು ಒದಗಿಸಬೇಕು ಎಂದು ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅಭಿಪ್ರಾಯ ಪಟ್ಟರು. ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ತೆಂಗು ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ಶಿರಾ ತಾಲೂಕಿನ ಮುದುಗೆರೆ ತೋಟಗಾರಿಕಾ ಕ್ಷೇತ್ರದಲ್ಲಿಂದು ಆಯೋಜಿಸಿದ್ದ ತೆಂಗು ಸಂಯೋಜಿತ ಬೇಸಾಯ ಯೋಜನೆಯಡಿಯಲ್ಲಿ ತೆಂಗು ಬೆಳೆಗಾರರಿಗೆ ಪರಿಕರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು…
ಸ್ವಉದ್ಯೋಗ ಮಾಡುವುದರಿಂದ ಮಹಿಳೆಯರು ಆರ್ಥಿಕವಾಗಿ ಸಬಲೀಕರಣರಾಗಬಹುದು ಎಂದು ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಗೀತಾ ತಿಳಿಸಿದರು.
ಗುಬ್ಬಿ : ತಾಲೂಕಿನ ಹೊಸಕೆರೆ ವಲಯದ ಅರೇ ಹಳ್ಳಿ ಕಾರ್ಯಕ್ಷೇತ್ರದ ಉಗಮ ಜ್ಞಾನವಿಕಾಸ ಕೇಂದ್ರದಲ್ಲಿ ಸ್ವ ಉದ್ಯೋಗ ಪ್ರೇರಣ ಶಿಬಿರವನ್ನು ಉದ್ಘಾಟಿಸಿ ನಂತರ ಮಾತನಾಡಿದ ಅವರು ಮಹಿಳೆಯರು ಸ್ವಾವಲಂಬಿ ಆಗಬೇಕೆಂದು ತಿಳಿಸಿದರು. ತುಮಕೂರು ಜಿಲ್ಲೆಯ ನೀರು ಉಳಿಸಿ ಕಾರ್ಯಕ್ರಮದ ಮೇಲ್ವಿಚಾರಕ ಕೇಶವ ಮೂರ್ತಿ ಮಾತನಾಡಿ ಯೋಜನೆಯ ಕಾರ್ಯಕ್ರಮಗಳ ಪರಿಚಯ ಹಾಗೂ ನೀರು ಉಳಿಸಿ ಕಾರ್ಯಕ್ರಮದ ಮಹತ್ವದ ಬಗ್ಗೆ ತಿಳಿಸಿದರು. ಅನಿತಾ ಮಾತನಾಡಿ ಸ್ವ ಉದ್ಯೋಗ ಯಾಕೆ ಮಾಡಬೇಕು, ಸ್ವ ಉದ್ಯೋಗದಿಂದ…
ಸಾರ್ವಜನಿಕರ ಹಿತಕ್ಕಾಗಿ ಯೋಗ ತರಗತಿಗಳನ್ನು ನಡೆಸಲು ಸಿದ್ಧವಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಬೆಂಗಳೂರು ಪ್ರಾದೇಶಿಕ ನಿರ್ದೇಶಕ ಶೀನಪ್ಪ ಎಂ.
ಗುಬ್ಬಿ : ಪ್ರತಿನಿತ್ಯ ಯೋಗಾಭ್ಯಾಸಕ್ಕಾಗಿ ಕನಿಷ್ಠ ಸಮಯವನ್ನು ಮೀಸಲಿಟ್ಟಲ್ಲಿ ಉತ್ತಮ ಆರೋಗ್ಯ ಹಾಗೂ ಮಾನಶಾಂತಿಯನ್ನು ಪಡೆಯಲು ಸಾಧ್ಯವಾಗುವುದು.ಪತಂಜಲಿ ಯೋಗ ಸಂಸ್ಥೆಯು ಸಾರ್ವಜನಿಕರ ಹಿತಕ್ಕಾಗಿ ಯೋಗ ತರಗತಿಗಳನ್ನು ನಡೆಸಲು ಸಿದ್ಧವಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಬೆಂಗಳೂರು ಪ್ರಾದೇಶಿಕ ನಿರ್ದೇಶಕ ಶೀನಪ್ಪ ಎಂ. ತಿಳಿಸಿದರು. ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಾಗೂ ವಿವಿಧ ಸಂಘಗಳ…
ಶ್ರೀ ಮಾರಿಯಮ್ಮದೇವಿ 61ನೇ ವರ್ಷದ ಅದ್ದೂರಿ ಜಾತ್ರಾ ಮಹೋತ್ಸವ
ತುಮಕೂರು ನಗರದ ಹೃದಯ ಭಾಗದಲ್ಲಿರುವ ಮಾರಿಯಮ್ಮ ನಗರ ಬಾಳನಕಟ್ಟೆ, ಮಂಡಿಪೇಟೆಯ ಮಾರಿಯಮ್ಮ ದೇವಿ ತಾಯಿಯ ಜಾತ್ರಾ ಮಹೋತ್ಸವವನ್ನು ಮಾರಿಯಮ್ಮ ಯುವಕ ಸಂಘದಿಂದ 61ನೇ ವರ್ಷದ ಜಾತ್ರಾ ಮಹೋತ್ಸವನ್ನು ದಿನಾಂಕ:25-6-2024 ಮಂಗಳವಾರ ದಿಂದ ದಿನಾಂಕ:27-6-2024 ಗುರುವಾರದರವರಗೆ ಹಮ್ಮಿಕೊಳ್ಳಲಾಗಿದೆ. ಈ ಜಾತ್ರಾ ಮಹೋತ್ಸವದ ಮೊದಲನೇ ದಿನ ಅಂದರೇ ದಿನಾಂಕ:25-6-2024 ಮಂಗಳವಾರ ಬೆಳಗ್ಗೆ 7 ಗಂಟೆಗೆ ಕರಗವನ್ನು ಅಮಾನಿಕೆರೆಯಿಂದ ಪೂಜಿಸಿ ಮೆರವಣಿಗೆಯೊಂದಿಗೆ ಅಂಬಲಿ ಸೇವೆಯನ್ನು ನಡೆಸಿ, ದಿನಾಂಕ:26-6-2024 ಬುಧವಾರ ಮಧ್ಯಾಹ್ನ 1:30ಕ್ಕೆ ನಗರದ ರಾಜಬೀದಿಗಳಾದ ಮಂಡಿಪೇಟೆ,…
ಸಾಮರ್ಥ್ಯ ಅಭಿವೃದ್ಧಿ ತರಭೇತಿ ಕಾರ್ಯಗಾರಕ್ಕೆ ತಾ.ಪಂ ಇಓ ಪರಮೇಶ್ ಕುಮಾರ್ ಚಾಲನೆ
ಗುಬ್ಬಿ ಸುದ್ದಿ ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನೆ ಸಂಸ್ಥೆಯು ಕಳೆದ ಒಂದು ದಶಕದಿಂದ ರಾಜ್ಯದಲ್ಲಿ ಗ್ರಾಮೀಣ ಬಡ ಮತ್ತು ದುರ್ಬಲ ವರ್ಗದ ಮಹಿಳೆಯರಿಗೆ ಸ್ವಸಹಾಯ ಗುಂಪುಗಳು, ವಾರ್ಡ್, ಗ್ರಾಮ ಮತ್ತು ತಾಲ್ಲೂಕು ಪಂಚಾಯಿತಿ ಮಟ್ಟದ ಒಕ್ಕೂಟಗಳು, ವಿವಿಧ ಉತ್ಪಾದಕರ ಗುಂಪುಗಳಂತಹ ಸಮುದಾಯ ಆಧಾರಿತ ಸಂಸ್ಥೆಗಳನ್ನು ರಚಿಸಿಸುವ ಮೂಲಕ ಗಮನಾರ್ಹ ಸಾಧನೆಗಳನ್ನು ಮಾಡಿದೆ. ಈವರೆಗೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ…