
ಜಿಲ್ಲಾ ಸುದ್ದಿಗಳು
ಸರ್ಕಾರದ ಸುತ್ತೋಲೆಯ ವಿರುದ್ಧ ಆಕ್ರೋಶ ಹೊರ ಹಾಕಿರುವ ಲೋಕೇಶ್ ತಾಳಿಕಟ್ಟೆ
ತುಮಕೂರು : ಇತ್ತೀಚಿಗೆ ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ನೀಟ್ ಪರೀಕ್ಷೆಯನ್ನು ಬರೆದಿದ್ದು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ, ಯಾಕೆಂದರೆ ಮೆಡಿಕಲ್ ಸೀಟ್ ಪಡೆಯಲು ನೀಟ್ ಪರೀಕ್ಷೆ ಸಹ ಅತ್ಯವಶ್ಯಕವಾಗಿದ್ದು ಯಾವ ವಿದ್ಯಾರ್ಥಿ ಸಿಇಟಿ ಪೋರ್ಟಲ್ನಲ್ಲಿ ನೊಂದಾಯಿಸಿಕೊಳ್ಳದೇ ಏಕಾಏಕಿ ನೀಟ್ ಪರೀಕ್ಷೆಯನ್ನು ಎದುರಿಸಿರುತ್ತಾರೋ ಅವರಿಗೆ ಮೆಡಿಕಲ್ ಸೀಟ್ ಹಂಚಿಕೆಯನ್ನು ಮಾಡಲು ಆಗುವುದಿಲ್ಲ ಎಂದು ರಾಜ್ಯ ಸರ್ಕಾರ ಸುತ್ತೋಲೆಯನ್ನು ಹೊರಡಿಸಿದೆ, ಇದರಿಂದ ನೀಟ್ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದಾರೆಂದು ರೂಪ್ಸಾ ಅಧ್ಯಕ್ಷರು ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿಯಾಗಿರುವ ಲೋಕೇಶ್…
ಡಾ.ಗುಬ್ಬಿ ವೀರಣ್ಣ ಟ್ರಸ್ಟ್ ವತಿಯಿಂದ 40 ದಿನಗಳ ಕಾಲ ಯಶಸ್ವಿಯಾಗಿ ನೆರವೇರಿದ ಮಕ್ಕಳ ಬೇಸಿಗೆ ಶಿಬಿರ
ಗುಬ್ಬಿ ಪಟ್ಟಣದ ಡಾ.ಗುಬ್ಬಿ ವೀರಣ್ಣ ರಂಗ ಮಂದಿರದಲ್ಲಿ ಡಾ.ಗುಬ್ಬಿ ವೀರಣ್ಣ ಟ್ರಸ್ಟ್ ವತಿಯಿಂದ 40 ದಿನಗಳ ಕಾಲ ಯಶಸ್ವಿಯಾಗಿ ನೆರವೇರಿದ ಮಕ್ಕಳ ಬೇಸಿಗೆ ಶಿಬಿರಕ್ಕೆ ಪ್ರಗತಿ ವಾಹಿನಿಯ ಸಿಇಓ ಟಿ ಎನ್ ಶಿಲ್ಪಾಶ್ರೀ ಹಾಗೂ ಸಂಗೀತಗಾರ್ತಿ ಮತ್ತು ಮಕ್ಕಳ ತಜ್ಞೆ ಡಾ. ಶ್ರಾವ್ಯ ರಾವ್ ಚಾಲನೆ ನೀಡಿದರು. ಖಾಸಗಿ ವಾಹಿನಿಯ ಸಿಇಓ ಟಿ ಎನ್ ಶಿಲ್ಪಾಶ್ರೀ ಮಾತನಾಡಿ ನಮ್ಮ ಊರಿನಲ್ಲಿಯೇ ನಮ್ಮ ಮಕ್ಕಳು ತಮ್ಮ ಪ್ರತಿಭೆಯನ್ನು ಹೊರ ತರುವ ಪ್ರಯತ್ನಕ್ಕೆ ಬೇಸಿಗೆ ಶಿಬಿರ ಮೂಲಕ ಸದಾವಕಾಶವನ್ನು ಮಾಡಿಕೊಟ್ಟಿರುವುದು…
ಇತಿಹಾಸದ ಮರು ಸೃಷ್ಟಿಯತ್ತ ದಿಟ್ಟ ಹೆಜ್ಜೆ: ಮಹೇಶ್ ಪದವಿ ಪೂರ್ವ ಕಾಲೇಜು
ಪದವಿ ಪೂರ್ವ ಶಿಕ್ಷಣ ವಿಭಾಗದಲ್ಲಿ ತನ್ನದೇ ಆದ ವಿಶಿಷ್ಟ ಶೈಕ್ಷಣಿಕ ಸುಧಾರಣೆಯಿಂದ ತುಮಕೂರು ಜಿಲ್ಲೆಯಾದ್ಯಂತ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿ ಇತಿಹಾಸ ಸೃಷ್ಟಿಸಿದ ಮಹೇಶ್ ಪಿಯು ಕಾಲೇಜು ಮತ್ತೆ ಇತಿಹಾಸದ ಮರು ಸೃಷ್ಟಿಯತ್ತ ದಿಟ್ಟ ಹೆಜ್ಜೆಯನ್ನು ಇಟ್ಟಿದೆ. 2012 ರಲ್ಲಿ ಕೇವಲ 173 ವಿದ್ಯಾರ್ಥಿಗಳ ಮೂಲಕ ಪ್ರಾರಂಭವಾದ ಮಹೇಶ್ ಪಿಯು ಕಾಲೇಜು 2019ರಲ್ಲಿ ತುಮಕೂರು ಜಿಲ್ಲೆಯಲ್ಲಿಯೇ 1200 ವಿದ್ಯಾರ್ಥಿಗಳನ್ನೊಳಗೊಂಡ ಎರಡು ಶಾಖೆಗಳು ಶೈಕ್ಷಣಿಕ ಕ್ರಾಂತಿಯನ್ನು ಮಾಡಿತು. ತದನಂತರದಲ್ಲಿ ಗುಪ್ತಗಾಮಿನಿಯಂತೆ ತನ್ನ ಸೇವೆಯನ್ನು ಮಾಡುತ್ತಾ…
ಕಾಯಕಯೋಗಿ ಬಸವಣ್ಣನವರ ಕಾಯಕಶ್ರದ್ಧೆ ಸರ್ವಕಾಲಕ್ಕೂ ಅನುಕರಣೀಯ :: ಡಾ.ಶಶಿಧರ್*
ತುರುವೇಕೆರೆ: ಕಾಯಕವೇ ಕೈಲಾಸ ಎಂದು ಕಾಯಕದಲ್ಲಿ ಭಗವಂತನ ಕಂಡ ಕಾಯಕಯೋಗಿ ಬಸವಣ್ಣನವರ ಕಾಯಕಶ್ರದ್ಧೆ ಸರ್ವಕಾಲಕ್ಕೂ ಅನುಕರಣೀಯವಾದು ಎಂದು ವೈದ್ಯ ಡಾ. ಎಂ.ಶಶಿಧರ್ ತಿಳಿಸಿದರು. ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿನ ಬೆಂಗಳೂರು ಕ್ಲಿನಿಕ್ ನಲ್ಲಿ ಆಯೋಜಿಸಿದ್ದ 891ನೇ ಬಸವಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಬಸವಣ್ಣನವರು ಭಾರತದ 12ನೇ ಶತಮಾನದ ಕನ್ನಡದ ಮಹಾ ತತ್ವಜ್ಞಾನಿಗಳು. ವಚನಗಳ ಮೂಲಕ ಜಾತಿ, ಮತ, ಪಂಥ, ಧರ್ಮಗಳ ನಡುವಿನ ತಾರತಮ್ಯವನ್ನು ಹೋಗಲಾಡಿಸಲು ಶ್ರಮಿಸಿದ ಮಹಾನ್ ಸಾಮಾಜಿಕ ಸುಧಾರಕರು….
ಡಾ ಅಂಬೇಡ್ಕರ್ ಪ್ರಚಾರ ಸಮಿತಿವತಿಯಿಂದ ಬಸವ ಜಯಂತಿಆಚರಣೆ
ತುಮಕೂರು : ಬಸವ ಜಯಂತಿ ಪ್ರಯುಕ್ತ ಇಂದು ಮಹಾನಗರ ಪಾಲಿಕೆಯ ಆವರಣದಲ್ಲಿ ಅಖಿಲ ಭಾರತ ಡಾ. ಬಿ.ಆರ್.ಅಂಬೇಡ್ಕರ್ ಪ್ರಚಾರ ಸಮಿತಿ ತುಮಕೂರು ಶಾಖೆ, ದಲಿತಪರ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳ ಒಕ್ಕೂಟ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪುಷ್ಪನಮನ ಸಲ್ಲಿಸಿ ಸಾರ್ವಜನಿಕರಿಗೆ ಸಿಹಿ ವಿತರಣೆ ಮಾಡಲಾಯಿತು. ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಎನ್.ಕೆ.ನಿಧಿ ಕುಮಾರ್ ಮಾತನಾಡುತ್ತಾ ೧೨ನೇ ಶತಮಾನದ ಮಹಾನಾಯಕ, ವಿಶ್ವ ಗುರು, ಕ್ರಾಂತಿಕಾರಕ, ಹಲವಾರು…
ತಾಲೂಕು ಆಡಳಿತದಿಂದ ಜಗಜ್ಯೋತಿ ಬಸವೇಶ್ವರ ಜಯಂತಿ ಹಾಗೂ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ
ಗುಬ್ಬಿ ತಾಲೂಕು ಆಡಳಿತ, ವೀರಶೈವ ಲಿಂಗಾಯತ ಮಹಾಸಭಾ, ವೀರಶೈವ ಸಮಾಜ ಮತ್ತು ಅಂಗ ಸಂಸ್ಥೆಗಳಿಂದ ಶ್ರೀಜಗಜ್ಯೋತಿ ಬಸವೇಶ್ವರ ಜಯಂತಿ ಹಾಗೂ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ತಾಲೂಕು ಕಚೇರಿಯ ಕೋರ್ಟ್ ಹಾಲ್ ನಲ್ಲಿ ಗ್ರೇಡ್ 02 ತಹಶೀಲ್ದಾರ್ ಶಶಿಕಲಾ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಒಬ್ಬ ಗೃಹಿಣಿಯಾಗಿ ಮನೆಯ ಎಲ್ಲ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದಲ್ಲದೇ ಸಮಾಜಕ್ಕೂ ಮಾದರಿಯಾಗಬಲ್ಲ ಕೆಲಸ ಮಾಡಿದ ಕೀರ್ತಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರಿಗೆ ಸಲ್ಲುತ್ತದೆ. ಮಲ್ಲಮ್ಮ ಅವರ ಸುತ್ತ ಸಾಕಷ್ಟು ಪವಾಡಗಳಿದ್ದರೂ ಅವರು ನಡೆದುಕೊಂಡ ಜೀವನ…
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ದಾಖಲೆ ಸೃಷ್ಟಿಸಿದ ಪ್ರಿಯಾ ಆಂಗ್ಲ ಶಾಲೆ/ ಸತತ 15 ನೇ ಬಾರಿ ಶೇ.100 ಫಲಿತಾಂಶ
ತುರುವೇಕೆರೆ: 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪಟ್ಟಣದ ಪ್ರಿಯಾ ಆಂಗ್ಲ ಪ್ರೌಢಶಾಲೆಯು ಸತತ 15 ನೇ ಬಾರಿ ಶೇ.100 ಫಲಿತಾಂಶ ಪಡೆದು ದಾಖಲೆ ನಿರ್ಮಿಸಿದೆ ಎಂದು ಶಾಲೆಯ ಕಾರ್ಯದರ್ಶಿ ಪುಷ್ಪಲತಾ ಚಂದ್ರೇಗೌಡ ತಿಳಿಸಿದರು. ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಶಾಲೆಯಿಂದ 28 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 8 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 8 ಮಂದಿ ಉನ್ನತ, 12 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಿಂಚನ…
ಜೆ.ಪಿ. ಆಂಗ್ಲಶಾಲೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.98.50 ಫಲಿತಾಂಶ
ತುರುವೇಕೆರೆ: 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪಟ್ಟಣದ ಜೆ.ಪಿ. ಆಂಗ್ಲ ಪ್ರೌಢಶಾಲೆಗೆ ಶೇ.98.50 ಫಲಿತಾಂಶ ಬಂದಿದೆ ಎಂದು ಪ್ರಾಂಶುಪಾಲ ತುಕಾರಾಮ್ ತಿಳಿಸಿದರು. ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಶಾಲೆಯಿಂದ 112 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 110 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 23 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 60 ಮಂದಿ ಪ್ರಥಮ, 22 ಮಂದಿ ದ್ವಿತೀಯ ಹಾಗೂ 5 ಮಂದಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕೆ.ಎ.ಗಾನವಿ(603), ಎಂ.ಜೆ. ಜಮುನಾ…
ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಜ್ವಲಂತ ಸಮಸ್ಯೆಗಳು ಇಂದಿಗೂ ಸಹ ಬಗೆಹರಿಯದೆ ಉಳಿದಿವೆ ಲೋಕೇಶ್ ತಾಳಿಕಟ್ಟೆ
ಶೈಕ್ಷಣಿಕ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆಗಾಗಿ ಶಿಕ್ಷಣ ತಜ್ಞರು ಹಾಗೂ ಶಿಕ್ಷಕರೊಂದಿಗೆ ಚರ್ಚಿಸಿ ಪ್ರಣಾಳಿಕೆ ಸಿದ್ದಪಡಿಸಲಾಗಿದೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ತಿಳಿಸಿದರು. ಅವರು ನಗರದ ಖಾಸಗೀ ಹೋಟೆಲ್’ನಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯ ತಮ್ಮ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿ ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಜ್ವಲಂತ ಸಮಸ್ಯೆಗಳು ಇಂದಿಗೂ ಸಹ ಬಗೆಹರಿಯದೆ ಉಳಿದಿದ್ದು, ಅವುಗಳ ನಿವಾರಣೆಗಾಗಿ ರಾಜ್ಯದ ಹಲವಾರು ಶಿಕ್ಷಣ ತಜ್ಞರು ಹಾಗೂ ಶಿಕ್ಷಕರೊಂದಿಗೆ ಸಂವಾದ ಹಾಗೂ ಚರ್ಚೆ ನಡೆಸಿ ಪ್ರಣಾಳಿಕೆ…
ಶ್ರೀ ಸಿದ್ದಗಿರಿ ಶನೇಶ್ವರ ಸ್ವಾಮಿಯ 16ನೇ ವರ್ಷದ ವಾರ್ಷಿಕೋತ್ಸವ ಹಾಗೂ ಬಸವ ಜಯಂತಿ ಕಾರ್ಯಕ್ರಮ
ಶ್ರೀ ಸಿದ್ದಗಿರಿ ಶನೇಶ್ವರ ಸ್ವಾಮಿಯ 16ನೇ ವರ್ಷದ ವಾರ್ಷಿಕೋತ್ಸವ ಹಾಗೂ ಬಸವ ಜಯಂತಿ ಕಾರ್ಯಕ್ರಮ ಆಯೋಜನೆ ಕಲ್ಪತರ ನಾಡು ಕಲಾವಿದರ ಬೀಡು ಎಂದು ಖ್ಯಾತಿ ಪಡೆದಿರುವ ತುಮಕೂರು ಧಾರ್ಮಿಕ ಶೈಕ್ಷಣಿಕ ಸಾಮಾಜಿಕ ಶಿಕ್ಷಣ ಅನ್ನದಾಸೋಹ ರಂಗ ಚಟುವಟಿಕೆ ಹಾಗೂ ಇನ್ನೂ ಅನೇಕ ಕ್ಷೇತ್ರಗಳಲ್ಲಿ ಹೆಸರುವಾಸಿಯಾಗಿರುವ ಈ ಕ್ಷೇತ್ರದಲ್ಲಿ ರಂಗ ಪರಂಪರೆಯನ್ನು ಉಳಿಸಿ ಬೆಳೆಸುವಂತಹ ಅನೇಕ ಕಾರ್ಯಕ್ರಮಗಳು ದಿನನಿತ್ಯ ಒಂದಲ್ಲ ಒಂದು ರೀತಿಯಾಗಿ ನಡೆಯುತ್ತಾ ಬಂದಿತ್ತು ಅದೇ ರೀತಿಯಾಗಿ ತುಮಕೂರು ತಾಲೂಕಿನ ಬೊಮ್ಮನಹಳ್ಳಿ ಕೆಸರುಮಡು ಗ್ರಾಮದಲ್ಲಿ ಶ್ರೀ ಸಿದ್ದಗಿರಿ…