208 ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವ

ತುಮಕೂರು : ನಗರದ ಅಮಾನಿಕೆರೆ ಉದ್ಯಾನವನದಲ್ಲಿ ಜನವರಿ ೦೧ ರಂದು ಸಂಜೆ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ವತಿಯಿಂದ ೨೦೮ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಅಮಾನಿಕೆರೆ ಉದ್ಯಾನವನದಲ್ಲಿರುವ ಯೋಧರ ಧ್ವಜ ಸ್ಥಂಭಕ್ಕೆ ಕ್ಯಾಂಡಲ್ ದೀಪ ಬೆಳಗಿಸಿ, ಪುಷ್ವರ್ಚನೆ ಮಾಡುವ ಮೂಲಕ ಆಚರಿಸಲಾಯಿತು. ಭೀಮಾ ಕೋರೆಗಾಂವ್ ಯುದ್ಧವು ಭಾರತೀಯ ಇತಿಹಾಸದಲ್ಲಿ, ಅದರಲ್ಲೂ ವಿಶೇಷವಾಗಿ ದಲಿತ ಸಮುದಾಯದ ಆತ್ಮಗೌರವ ಕೋರೆಗಾಂವ್ ಯುದ್ಧ. ಸಮಾನತೆ ಮತ್ತು ಸ್ವಾಭಿಮಾನದ ಅಮರ…

Read More

ಶಿಕ್ಷಣ ಕೇವಲ ಹಣ ಸಂಪಾದನೆ ಮಾಡುವ ಮಾರ್ಗವಲ್ಲ ಬದಲಾಗಿ ವ್ಯಕ್ತಿಯ ಜ್ಞಾನವನ್ನು ಬಲಪಡಿಸಬೇಕಿದೆ : ಗವಿಮಠದ ಶ್ರೀಗಳು

ಚೇಳೂರು : ಶಿಕ್ಷಣ ಸಂಸ್ಥೆಗಳು ಹಣ ಸಂಪಾದನೆ ಮಾಡುವ ಕಾಯಕವಾಗದೇ ಮಕ್ಕಳ ಬೌಧಿಕ ಮತ್ತುವ ಮಾನಸಿಕ ಜ್ಞಾನವನ್ನು ಬಲಪಡಿಸುವ ಮಾರ್ಗವಾದಾಗ ಮಾತ್ರ ಶಿಕ್ಷಣದ ಮೂಲ ಗುರಿಯನ್ನು ತಲುಪಿಸಲು ಸಾಧ್ಯ ಬೆಟ್ಟದಹಳ್ಳಿ ಗವಿಮಠದ ಶ್ರೀ ನಿ.ಪ.ಸ್ವ ಚಂದ್ರಶೇಖರ ಸ್ವಾಮೀಜಿಗಳು ತಿಳಿಸಿದರು. ಅವರು ಗ್ರಾಮದ ಶ್ರೀ ಮಲ್ಲಿಕಾರ್ಜುನ ಸಂಸ್ಕೃತ, ಪ್ರಾಥಮಿಕ ಮತ್ತು ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಹಾಗೂ ಪೋಷಕರ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಸುಮಾರು 35 ವರ್ಷಗಳಿಂದ ಮಕ್ಕಳ ಬೌಧಿಕ ಹಾಗೂ ಶಿಕ್ಷಣಿಕ ಚಟುವಟಿಕೆಗಳ ಮೂಲಕ…

Read More

ಜಾಗತೀಕರಣ ಯುಗದಲ್ಲಿ ಉತ್ತಮ ಕೃಷಿ ಪದ್ಧತಿಗಳ ಅಳವಡಿಕೆ ಅತ್ಯಗತ್ಯ

  ಗುಬ್ಬಿ : ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಭಾರತೀಯ ಉತ್ಪನ್ನಗಳಿಗೆ ಬೇಡಿಕೆ ಸೃಷ್ಟಿಸಲು ಮತ್ತು ಹೊಸ ಮಾರುಕಟ್ಟೆಗಳನ್ನು ಗುರುತಿಸಲು ಸಹಾಯ ಮಾಡುವ ಕಾರ್ಯವನ್ನು ಅಪೆಡಾ ಮಾಡುತ್ತಿದೆ ಎಂದು ಅಪೆಡಾ ವಲಯ ಸಹಾಯಕ ವ್ಯವಸ್ಥಾಪಕ ಯು.ಧರ್ಮರಾವ್ ತಿಳಿಸಿದರು.     ತಾಲ್ಲೂಕಿ ಸಿ.ಎಸ್ ಪುರ ಹೋಬಳಿಯ ನೆಟ್ಟೇಕೆರೆ ಗ್ರಾಮದಲ್ಲಿ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ (ಅಪೆಡಾ) ಮತ್ತು ತೋಟಗಾರಿಕೆ ಇಲಾಖೆ ತುಮಕೂರು ಇವರ ಸಹಯೋಗದೊಂದಿಗೆ ಏರ್ಪಡಿಸಿದ್ದ ಅಡಿಕೆ ಬೆಳೆಯಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ, ಸಮಗ್ರ…

Read More

ಉದ್ಘಾಟನೆಗೆ ಸಿದ್ಧಗೊಂಡ ಜಿಲ್ಲಾ ಬಂಜಾರ ಭವನ

ತುಮಕೂರು :- ಜಿಲ್ಲೆಯ ಲಂಬಾಣಿ (ಬಂಜಾರ) ಸಮುದಾಯ ಭವನದ ಕನಸು ಅನೇಕ ವರ್ಷಗಳ ಹೋರಾಟದ ಫಲವಾಗಿ, ತುಮಕೂರು ನಗರದ ಸರಸ್ವತಿಪುರಂನಲ್ಲಿ ಬೃಹತ್ ಮತ್ತು ಭವ್ಯವಾದ ಜಿಲ್ಲಾ ಬಂಜಾರ ಭವನ ನಿರ್ಮಾಣಗೊಳ್ಳುವುದರೊಂದಿಗೆ ಸಕಾರಗೊಂಡಿದೆ. ಸುಸಜ್ಜಿತ ಸಮುದಾಯ ಭವನ ಉದ್ಘಾಟನೆಗೆ ಸಿದ್ಧಗೊಂಡಿದೆ. ಜಿಲ್ಲೆಯಲ್ಲಿ ತನ್ನದೆಯಾದ ಆದ ವೈಶಿಷ್ಟತೆ ಹೊಂದಿರುವ ಲಂಬಾಣಿ ಸಮುದಾಯದ ಬುಡಕಟ್ಟು ಸಂಸ್ಕøತಿ, ಕಲೆ, ಪರಂಪರೆ ಮತ್ತು ಐತಿಹಾಸಿಕ ಹೆಗ್ಗಳಿಕೆಯನ್ನು ಉಳಿಸಿ ಬೆಳೆಸಲು ಭವನವು ಭದ್ರ ನೆಲೆಯಾಗಲಿದೆ. ಭಾರತದ ಶ್ರೀಮಂತ ಸಂಸ್ಕೃತಿಯಲ್ಲಿ ಬಂಜಾರ ಸಮುದಾಯವು ವಿಶಿಷ್ಟ ಸ್ಥಾನಪಡೆದುಕೊಂಡಿದೆ. ಸಮುದಾಯದ…

Read More

ಸವಿತಾ ಸಮಾಜದ ಅವಿವಾಹಿತರ ವಧು-ವರರ ಅನ್ವೇಷಣಾ ಕೇಂದ್ರ ಉದ್ಘಾಟನೆ.

ತುಮಕೂರು : ತುಮಕೂರು ನಗರದ ಗಾರ್ಡನ್ ರಸ್ತೆಯಲ್ಲಿರುವ ಸವಿತಾ ಸಮಾಜ ಜಿಲ್ಲಾ ಸಂಪರ್ಕ ಕೇಂದ್ರದ ವತಿಯಿಂದ ಇಂದು ಸವಿತಾ ಸಮಾಜದ ಅವಿವಾಹಿತರ ಅನುಕೂಲಕಕ್ಕಾಗಿ ವಧು-ವರರ ಅನ್ವೇಷಣಾ ಕೇಂದ್ರವನ್ನು ಇಂದು ಸವಿತಾ ಸಮಾಜ ಯುವಪಡೆಯ ಜಿಲ್ಲಾಧ್ಯಕ್ಷರಾದ ಕಟ್‍ವೆಲ್ ರಂಗನಾಥ್ ಅವರ ನೇತೃತ್ವದಲ್ಲಿ ಉದ್ಘಾಟನೆಯನ್ನು ಮಾಡಲಾಯಿತು. ಕಟ್‍ವೆಲ್ ರಂಗನಾಥ್‍ರವರು ಮಾತನಾಡುತ್ತಾ ಪ್ರಸ್ತುತದ ದಿನಗಳಲ್ಲಿ ನಮ್ಮ ಸಮಾಜದಲ್ಲಿ ವಿವಾಹದ ವಯಸ್ಸಿಗೆ ಬಂದಿರುವ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಜಾತಕ ಹೊಂದಾಣಿಕೆ, ಪರಸ್ಪರ ಅನ್ವೇಷಣೆ ಮಾಡುವುದು ತುಂಬಾ ಕಷ್ಟಕರವಾಗುತ್ತಿದೆ, ಸರಿಯಾದ ಜೋಡಿ ಸಿಗುವಲ್ಲಿ…

Read More

ಹುಳಿಯಾರಿನ ಪತ್ರಕರ್ತ ರಮೇಶ್ ರವರಿಗೆ ಆರ್ಥಿಕ ನೆರವು

ಹುಳಿಯಾರಿನ ಪತ್ರಕರ್ತ ರಮೇಶ್ ರವರಿಗೆ ತಿಪಟೂರಿನ ಕೆಪಿಸಿಸಿ ಸದಸ್ಯ ವಿ.ಯೋಗೇಶ್ ಮತ್ತು ಪತ್ರಕರ್ತ ಬಿ.ಟಿ.ಕುಮಾರ್ ನೆರವು. ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ಮತ್ತು ಆಕಸ್ಮಿಕ ದೃಷ್ಟಿ ಹೀನತೆಯಿಂದ ಬಳಲುತ್ತಿರುವ ಹುಳಿಯಾರಿನ ಪತ್ರಕರ್ತ ರಮೇಶ್ ರವರಿಗೆ ತಿಪಟೂರಿನ ಕೆಪಿಸಿಸಿ ಸದಸ್ಯ ವಿ.ಯೋಗೇಶ್ 25.000/-ರೂಗಳು ಮತ್ತು ಪತ್ರಕರ್ತ ಬಿ.ಟಿ.ಕುಮಾರ್ 5,000/-ರೂಗಳು ಆರ್ಥಿಕ ನೆರವು ನೀಡುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ.     ಹುಳಿಯಾರಿನ ಪತ್ರಕರ್ತ ರಮೇಶ್ ರವರಿಗೆ ಸುಮಾರು 5 ತಿಂಗಳಿಂದ ಇದ್ದಕ್ಕಿದ್ದಂತೆ ದೃಷ್ಟಿ ಹೀನತೆ ಸಮಸ್ಯೆ ಎದುರಾಗಿ ಕಣ್ಣು ಕಾಣದ…

Read More

ನಶ ಮುಕ್ತ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ ಸಬ್ ಇನ್ಸ್ಪೆಕ್ಟರ್ ಸುನಿಲ್ ಕುಮಾರ್

  ಗುಬ್ಬಿ : ತಾಲೂಕು ಕೇಂದ್ರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಮದ್ಯಾಹ್ನ ನಡೆದ ನಶ ಮುಕ್ತ ಭಾರತ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಬ್ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಮಾದಕ ವಸ್ತುಗಳ ದಾಸರಾಗಿದ್ದು, ಇದರ ಅತಿಯಾದ ಬಳಕೆಯಿಂದಾಗಿ ದೈಹಿಕ ಮತ್ತು ಮಾನಸಿಕ ಆರೋಗ್ಯ ತೊಂದರೆಗಳನ್ನು ಎದುರಿಸುತ್ತಿದ್ದು, ಜೀವನವನ್ನೇ ದುರಂತದ ಕಡೆಗೆ ಕೊಂಡೊಯ್ಯುತ್ತಿದ್ದಾರೆ ಎಂದು ತಿಳಿಸಿದರು. 2019 ರ ಅಂಕಿ ಅಂಶಗಳ ಮಾಹಿತಿ ಪ್ರಕಾರ ಭಾರತ ದೇಶದಲ್ಲಿ ಸುಮಾರು 7.2…

Read More

ಸಂವಿಧಾನ ಪಿತಾಮಹನಿಗೆ ಗೌರವ ನಮನ

    ಅಖಿಲ ಭಾರತ ಡಾಕ್ಟರ್ ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69ನೇ ಪರಿ ನಿಬ್ಬಾಣ ದಿನದ ಗೌರವ ಸಮರ್ಪಣೆ ತುಮಕೂರು: ಭಾರತ ದೇಶದಲ್ಲಿ ಎಲ್ಲರೂ ಸ್ವತಂತ್ರವಾಗಿ ಬದುಕುತ್ತಿದ್ದೇವೆ ಎಂದರೆ ಅದಕ್ಕೆ ಕಾರಣ ಡಾ. ಬಿ.ಆರ್ ಅಂಬೇಡ್ಕ‌ರ್. ಎಲ್ಲರೂ ಅವರು ಹಾಕಿ ಕೊಟ್ಟಿರುವ ದಾರಿಯಲ್ಲಿ ಸಾಗೋಣ ಎಂದು ಅಖಿಲ ಭಾರತ ಡಾ ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಎನ್, ಕೆ ನಿಧಿಕುಮಾರ್ ಅವರು…

Read More

ಅಬಕಾರಿ ಅಧಿಕಾರಿಗಳ ವಿರುದ್ಧ ಸುರೇಶ್‍ಗೌಡ ಗರಂ: ತನಿಖೆಗೆ ಒತ್ತಾಯ

ತುಮಕೂರು: ಅಬಕಾರಿ ಅಧಿಕಾರಿಗಳು ತುಮಕೂರು ತಾಲ್ಲೂಕಿನಲ್ಲಿ ಕಾನೂನು ಬಾಹೀರವಾಗಿ 29 ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಶಾಸಕ ಬಿ.ಸುರೇಶ್‍ಗೌಡರು ಒತ್ತಾಯಿಸಿದರು. ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತುಮಕೂರು ತಾಲ್ಲೂಕು ಮಟ್ಟದ ತ್ರೈ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಶಾಸಕರು, ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡುವಲ್ಲಿ ಅಕ್ರಮ ನಡೆದಿದೆ. ಯಾವ ನಿಯಮದಡಿಯಲ್ಲಿ ಮದ್ಯದಂಗಡಿಗಳಿಗೆ ಲೈಸೆನ್ಸ್ ನೀಡಿದಿರಿ ಎಂದು ಅಬಕಾರಿ ಅಧಿಕಾರಿಗಳ ವಿರುದ್ಧ…

Read More

ವಕೀಲರ ದಿನಾಚರಣೆ_ಆರೋಗ್ಯ ತಪಾಸಣಾ ಶಿಬಿರ ಜಿಲ್ಲಾ ವಕೀಲರ ಸಂಘದಿಂದ ವಕೀಲರ ದಿನ ಆಚರಣೆ

ತುಮಕೂರು: ವಕೀಲರ ದಿನಾಚರಣೆ ಅಂಗವಾಗಿ ಜಿಲ್ಲಾ ವಕೀಲರ ಸಂಘದಿಂದ ನ್ಯಾಯಾಲಯ ಆವರಣದ ವಕೀಲರ ಭವನದಲ್ಲಿ ಬುಧವಾರ ವಕೀಲರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಯಂತ್‍ಕುಮಾರ್ ಅವರು ಜ್ಯೋತಿ ಬೆಳಗಿ ಶಿಬಿರ ಉದ್ಘಾಟಿಸಿ, ನಾನೂ ವಕೀಲನಾಗಿ ವಕೀಲರ ದಿನಾಚರಣೆ ಸಂಭ್ರಮದಲ್ಲಿ ಭಾಗಿಯಾಗಿದ್ದೇನೆ, ಎಲ್ಲಾ ವಕೀಲರಿಗೂ ಶುಭಾಶಯಗಳು ಎಂದು ಹೇಳಿದರು.   ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್.ಕೆಂಪರಾಜಯ್ಯ ಮಾತನಾಡಿ, ದೈನಂದಿನ ಕೆಲಸದ ಒತ್ತಡ ವಕೀಲರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ…

Read More
error: Content is protected !!