ಪ್ರಮುಖ ಸುದ್ದಿಗಳು
ಗುತ್ತಿಗೆ ಆಧಾರದ ಅಡಿಯಲ್ಲಿ ನೇಮಕಗೊಂಡ ಸಿಬ್ಬಂದಿಗಳಿಂದ ಹಣ ವಸೂಲಿಗಿಳಿದ ಆರೋಗ್ಯ ಇಲಾಖೆ
ಡಿ ಹೆಚ್ ಓ ಸಾಹೇಬರೇ ಈ ಅಕ್ರಮಕ್ಕೆ ಕಡಿವಾಣ ಯಾವಾಗ ???? ತುಮಕೂರು ನಗರದ ಕೋತಿ ತೋಪಿನಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ತಪಾಸಣೆಗೆಂದು ಬರುವ ಸಾರ್ವಜನಿಕರಿಗೆ ಈ ಆರೋಗ್ಯ ಕೇಂದ್ರದಲ್ಲಿ ಬಿಪಿ ಪರೀಕ್ಷೆಗೆ ಹಣ ಕೊಡಬೇಕು ಮಧುಮೇಹ ಕಾಯಿಲೆಯ ರೋಗಿಗಳು ರಕ್ತಪರೀಕ್ಷೆ ಮಾಡಿಸಲು ಈ ಆರೋಗ್ಯ ಕೇಂದ್ರಕ್ಕೆ ಬಂದರೆ ಇಲ್ಲಿನ ಸಿಬ್ಬಂದಿಗಳು ಕೇಳಿದಷ್ಟು ಹಣ ನೀಡಬೇಕು ಇದು ಸರ್ಕಾರಿ ಆಸ್ಪತ್ರೆಯೋ ಅಥವಾ ಖಾಸಗಿ ಆಸ್ಪತ್ರೆಯೋ ಎಂಬ ಅನುಮಾನ ಇಲ್ಲಿನ ಸಾರ್ವಜನಿಕರಲ್ಲಿ ಗೊಂದಲ…
ಸಮಾಜದಲ್ಲಿ ಸಮಾನತೆ, ಸಂಘಟನೆ ಬೆಳೆದರೆ ಮಾತ್ರ ಯಶಸ್ವಿಗೆ ಮುನ್ನುಡಿ -ಸಾಣೇಹಳ್ಳಿ ಶ್ರೀ
ತಿಪಟೂರು ನ್ಯೋಸ್ ತಾಲೂಕಿನ ಹೊನ್ನವಳ್ಳಿ ಹೋಬಳಿಯ ಸಾರ್ಥವಳ್ಳಿ ಎಸ್.ಎಲ್.ಬಿ.ಎಸ್ ಪ್ರೌಢಶಾಲಾ ಆವರಣದಲ್ಲಿ ಶಿವ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ,ಲಿಂಗೈಕ್ಯ ಎಸ್.ಬಿ. ಗಂಗಾಧರ ಗೌಡರ ಶಿವಗಣಾರಧನೆ ಮತ್ತು ಧಾರ್ಮಿಕ ಸಮಾರಂಭದ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ,ಮಾತನಾಡಿದ ಶ್ರೀ ತರಳಬಾಳು ಶಾಖಾ ಮಠ ಸಾಣೇಹಳ್ಳಿಯ ಶ್ರೀ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿರವರು,ಗಂಗಾಧರ ಗೌಡರ ನಿಧನ ಇಡೀ ಸಮುದಾಯಕ್ಕೆ ತುಂಬಾ ದುಃಖಕರವಾಗಿದ್ದು,ಗ್ರಾಮೀಣ ಭಾಗದ ಜನರಿಗೆ ಅನುಕೂಲ ಮಾಡಿಕೊಟ್ಟು,ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ಸೃಷ್ಟಿ ಮಾಡಿಕೊಟ್ಟ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ.ಸಮಾಜದಲ್ಲಿ ಸಮಾನತೆ ಮತ್ತು ಸಂಘಟನೆ ಅಳವಡಿಸಿಕೊಂಡಾಗ ಯಶಸ್ವಿಗೆ…
ಬಾಬು ಜಗಜೀವನ ರಾಮ್ ಸಂಶೋಧನಾ ಕೇಂದ್ರ ಲೋಕಾರ್ಪಣೆಗೆ ಹೋರಾಟ ದಲಿತ ಮುಖಂಡರು
ತುಮಕೂರು: ಹಸಿರು ಕ್ರಾಂತಿಯ ಹರಿಕಾರ, ರಕ್ಷಣಾ ಕ್ಷೇತ್ರಕ್ಕೆ ತನ್ನದೇ ಆದ ನಿಲುವುಗಳನ್ನು ಕೊಟ್ಟ ಮಾಜಿ ಉಪ ಪ್ರಧಾನಿ ಡಾಕ್ಟರ್ ಬಾಬು ಜಗಜೀವನ್ ರಾಮ್ ಅವರ ಹೆಸರಿನಲ್ಲಿ ಬೆಂಗಳೂರು ಹೊರ ವರ್ತಲ ರಸ್ತೆಯಲ್ಲಿರುವ ಮಾಗಡಿ ರಸ್ತೆಯ ಸುಗ್ಗನಹಳ್ಳಿ ಸರ್ಕಲ್ ನಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದ ಬಳಿ ಸಂಶೋಧನ ಕೇಂದ್ರ ಉದ್ಘಾಟನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ವಿವಿಧ ದಲಿತಪರ ಸಂಘಟನೆಗಳ ಮುಖಂಡರುಗಳು ಉದ್ಘಾಟನಾ ಸಮಾರಂಭಕ್ಕೆ ತೆರಳಿದ ಹಿನ್ನೆಲೆಯಲ್ಲಿ ನಗರದ ಎಂ ಜಿ ರಸ್ತೆಯ ಅಂಬೇಡ್ಕರ್ ಭವನದ ಬಳಿ ಹಸಿರು…
ಬಿಜೆಪಿ ನಾಯಕರ ಹೋರಾಟ ತಡೆದ ಸರ್ಕಾರದ ಕ್ರಮಕ್ಕೆ ಖಂಡನೆ
ರಸ್ತೆ ತಡೆದು ಧರಣಿ ನಡೆಸಿ ಬಿಜೆಪಿ ಮುಖಂಡರ ಆಕ್ರೋಶ ತುಮಕೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ತೆರಳುತ್ತಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಶಾಸಕರು, ಮುಖಂಡರನ್ನು ಪೊಲಿಸರು ಮಾರ್ಗ ಮಧ್ಯೆ ತಡೆದು ಅವರನ್ನು ವಶಕ್ಕೆ ಪಡೆದ ಕ್ರಮ ಖಂಡಿಸಿ ಶುಕ್ರವಾರ ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ಬಿಜೆಪಿಯ ಪ್ರತಿಭಟನೆ ಹತ್ತಿಕ್ಕುವ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಗ್ರಾಮಾಂತರ ಕ್ಷೇತ್ರದ…
ನಗರ ಪ್ರದೇಶಗಳಿಗೆ ಸರಿಸಮಾನವಾಗಿ ಗ್ರಾಮೀಣ ಪ್ರದೇಶಗಳನ್ನು ಅಭಿವೃದ್ಧಿಪಡಿಸಬೇಕು : ಡಾ: ಜಿ. ಪರಮೇಶ್ವರ್
ತುಮಕೂರು: ಗ್ರಾಮೀಣ ಪ್ರದೇಶಗಳನ್ನು ನಗರ ಪ್ರದೇಶಗಳಿಗೆ ಸರಿಸಮಾನವಾಗಿ ಅಭಿವೃದ್ಧಿಪಡಿಸಿದಾಗ ಮಾತ್ರ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಕನಸು ನನಸಾಗುತ್ತದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಹೊರವಲಯದ ಹೆಗ್ಗೆರೆ ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಗುರುವಾರ ನಡೆದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳಿಗಾಗಿ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ ಆಶಯದಂತೆ ಸ್ಥಳೀಯ ಆಡಳಿತವನ್ನು ಬಲಗೊಳಿಸಲು ಗ್ರಾಮ…
ಶಾಸಕರಿಗೆ ಮನವಿ ಸಲ್ಲಿಸಿದ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು
ತುರುವೇಕೆರೆ: ಸರ್ಕಾರಿ ನೌಕರರ ಬೇಡಿಕೆಗಳಾದ ಹಳೇ ಪಿಂಚಣಿ ಜಾರಿ, 7ನೇ ವೇತನ ಆಯೋಗದ ವರದಿಯ ಅನುಷ್ಠಾನ, ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಮಾಡುವ ಬಗ್ಗೆ ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಚರ್ಚಿಸಿ ಕೂಡಲೇ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ಪಟ್ಟಣದ ತಾಲ್ಲೂಕು ಕಛೇರಿಯಲ್ಲಿ ಭೇಟಿಯಾಗಿ ಬೇಡಿಕೆ ಈಡೇರಿಕೆಗೆ ಮನವಿ ಸಲ್ಲಿಸಿದ ರಾಜ್ಯ ಸರ್ಕಾರಿ ನೌಕರರ ಸಂಘದ ತುರುವೇಕೆರೆ ತಾಲೂಕು ಘಟಕದ ಪದಾಧಿಕಾರಿಗಳನ್ನು ಕುರಿತು ಮಾತನಾಡಿದ ಅವರು, ಮಾರುಕಟ್ಟೆಯಲ್ಲಿ ಕೇಂದ್ರ…
ವಿಶ್ವಕರ್ಮ ಸಮಾಜದಿಂದ ಕೊಡಗೀಹಳ್ಳಿ ಗ್ರಾಪಂ ಅಧ್ಯಕ್ಷೆ ಶೋಭಾ ಸೀನಾಚಾರ್ ಗೆ ಸನ್ಮಾನ
ತುರುವೇಕೆರೆ: ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ ಕೊಡಗೀಹಳ್ಳಿ ಗ್ರಾಮ ಪಂಚಾಯ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶೋಭಾಸೀನಾಚಾರ್ ಅವರನ್ನು ಸನ್ಮಾನಿಸಲಾಯಿತು. ಪಟ್ಟಣದ ಬಾವಿಕೇರಿಯ ಶ್ರೀ ಕಾಳಿಕಾಂಬ ವಿಶ್ವಕರ್ಮ ಸಮುದಾಯ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಶೋಭಾ ಸೀನಾಚಾರ್ ಅವರನ್ನು ಶಾಲು ಹೊದಿಸಿ, ಫಲಪುಷ್ಪ ಕಾಣಿಕೆ ನೀಡಿ ಗೌರವಿಸಲಾಯಿತು. ಸಮಾರಂಭ ಕುರಿತು ವಿಶ್ವಕರ್ಮ ಸಮಾಜದ ತಾಲೂಕು ಅಧ್ಯಕ್ಷ ಟಿ.ಎನ್. ಅರುಣ್ ಕುಮಾರ್ ಮಾತನಾಡಿ, ಅಂದು ವಿಶ್ವಕರ್ಮ ಸಮುದಾಯ ಕೇವಲ ದೇವರ ವಿಗ್ರಹ, ಮರಗೆಲಸದಂತಹ…
ದುರುಪಯೋಗ ತಡೆಗಟ್ಟಲು ಹೈ ರೆಸ್ಯೂಲೆಷನ್ ಜಾಮರ್ ಅಳವಡಿಕೆ: ಗೃಹ ಸಚಿವ ಪರಮೇಶ್ವರ
ಬೆಂಗಳೂರು:-ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈ ರೆಸ್ಯೂಲೇಷನ್ ಜಾಮರ್ಗಳನ್ನು ಅಳವಡಿಸಿದ್ದರಿಂದ ನೆರೆಹೊರೆಯ ನಿವಾಸಿಗಳಿಗೆ ತೊಂದರೆಯಾಗಿದ್ದು, ಇದನ್ನು ನಿವಾರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ರಾಷ್ಟ್ರಪತಿಗಳ ಸುಧರಣಾ ಸೇವೆ ಪದಕ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರಧಾನ ಮತ್ತು ಸನ್ನಡತೆಯ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ಹಿಂದೆ ಜೈಲಿನ ಒಳಗೆ ಫೋನ್ ತಂದುಕೊಡುತ್ತಾರೆ. ಕೈದಿಗಳು…
ಡಾ.ಲಕ್ಷ್ಮೀ ಸಾಗರ್ ಅವರಿಗೆ ಶ್ರೇಷ್ಠ ವೈದ್ಯ ಪ್ರಶಸ್ತಿ ಸಾರ್ವಜನಿಕರಿಂದ ಅಭಿನಂದನೆ
ಕಡಬ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಲಕ್ಷ್ಮೀ ಸಾಗರ್ ಅವರಿಗೆ ಸರ್ಕಾರ ಶ್ರೇಷ್ಠ ವೈದ್ಯ ಪ್ರಶಸ್ತಿ ನೀಡಿರುವ ಹಿನ್ನೆಲೆಯಲ್ಲಿ ಕಡಬ ಸುತ್ತಮುತ್ತಲ ಸಾರ್ವಜನಿಕರು ಅವರಿಗೆ ಅಭಿನಂದನೆ ಸಲ್ಲಿಸಿದರು ಕಡಬ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಂದ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ ಬಿಂದು ಮಾಧವ್ ಸರ್ಕಾರಿ ಆಸ್ಪತ್ರೆಗಳೆಂದರೆ ಜನರು ಮೂಗು ಮುರಿಯುತ್ತಾರೆ. ಇಂತಹ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲೂ ಸಹ ಉತ್ತಮ ವೈದ್ಯರಿದ್ದು ಗ್ರಾಮೀಣ ಭಾಗದ ಜನತೆಗೆ ಗುಣಮಟ್ಟದ…
ಉದ್ಯೋಗ, ಅಧಿಕಾರ ಯಾವತ್ತೂ ಅಳತೆಗೋಲಾಗಬಾರದು. ಎಲ್ಲರನ್ನೂ ಸಮಾನವಾಗಿ ಕಾಣಬೇಕು ಶ್ರೀ ಸಿದ್ದಲಿಂಗ ಸ್ವಾಮೀಜಿ
ತುಮಕೂರು- ಉದ್ಯೋಗ, ಅಧಿಕಾರ ಯಾವತ್ತೂ ಕೂಡ ಅಳತೆಗೋಲಾಗಬಾರದು. ಎಲ್ಲರನ್ನೂ ಸಮಾನವಾಗಿ ಕಾಣಬೇಕು ಎಂದು ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಕರೆ ನೀಡಿದರು. ನಾವು ಮಾಡುವ ಉದ್ಯೋಗದಲ್ಲಿ ದಿವಾನ ಆದರೂ ಸರಿ, ಜವಾನ ಆದರೂ ಸರಿ ಎಲ್ಲರಿಗೂ ಸಮಾನವಾದಂತಹ ಅವಕಾಶ ಕಲ್ಪಿಸಿಕೊಟ್ಟಾಗ ಮಾತ್ರ ಬಸವಣ್ಣನ ಸಮಾನತೆ ಸಂದೇಶ ಸಾರ್ಥಕತೆ ಪಡೆಯುತ್ತದೆ ಎಂದು ಅವರು ಹೇಳಿದರು. ನಗರದ ಎಸ್ಐ ಟಿ ಯ ಬಿರ್ಲಾ ಆಡಿಟೋರಿಯಂನಲ್ಲಿ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದ ಬೋಧಕೇತರ ಸಂಘದ ವತಿಯಿಂದ ಏರ್ಪಡಿಸಿದ್ದ ಬಸವ…