ಪ್ರಮುಖ ಸುದ್ದಿಗಳು
ವೈ.ಎ.ನಾರಾಯಣಸ್ವಾಮಿ ಶಿಕ್ಷಕರ ನಂಬಿಕೆಗೆ ಅರ್ಹರಾದವರಲ್ಲ ಲೋಕೇಶ್ ತಾಳಿಕಟ್ಟೆ
ಶಿಕ್ಷಕರು ಅಧಿಕಾರಕ್ಕೆ ಬಂದರೆ ಮಾತ್ರ ಶಿಕ್ಷಕರ ಅಭಿವೃದ್ಧಿ ಸಾಧ್ಯ – ದಿನೇ ದಿನೇ ಶಿಕ್ಷಕರ ಸ್ತಿತಿ ಶೋಚನೀಯವಾಗುತ್ತಿದೆ. ಈ ಬಾರಿ ನಡೆಯುತ್ತಿರುವ ಚುನಾವಣೆ ಧರ್ಮ ಮತ್ತು ಅಧರ್ಮದ ನಡುವೆ ನೆಡೆಯುತ್ತಿದೆ ಎಂದ ಲೋಕೇಶ್ ತಾಳಿಕಟ್ಟೆ ತಿಪಟೂರು ನಗರದ ಖಾಸಗಿ ಹೋಟೆಲ್ ಕಲ್ಪತರು ಗ್ರಾಂಡ್ ನಲ್ಲಿ ಆ ಯೋಜನೆ ಮಾಡಲಾಗಿದ್ದ, ಪತ್ರಿಕಾಗೋಷ್ಠಿಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ವಿರುದ್ಧ ಹರಿ ಹಾಯಿದರು. ಮೂರು ಬಾರಿ ಚುನಾವಣೆಯಲ್ಲಿ ಶಿಕ್ಷಕರ ಕ್ಷೇತ್ರದಿಂದ…
ಜೂ.1ರೊಳಗಾಗಿ ಮತ ಎಣಿಕಾ ಏಜೆಂಟ್ ನೇಮಕಕ್ಕೆ ಜಿಲ್ಲಾ ಚುನಾವಣಾ ಅಧಿಕಾರಿ ಶುಭ ಕಲ್ಯಾಣ ನಿರ್ದೇಶನ.
ತುಮಕೂರು: ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಜೂನ್ 4ರಂದು ನಡೆಯಲಿರುವ ಮತ ಎಣಿಕಾ ಕಾರ್ಯಕ್ಕೆ ಎಣಿಕಾ ಏಜೆಂಟರನ್ನು ನೇಮಿಸಿ, ಜೂನ್ 1ರೊಳಗಾಗಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸೋಮವಾರ ಸಭೆ ನಡೆಸಿ ಮಾತನಾಡಿದ ಅವರು ಜೂನ್ 4ರಂದು ನಗರದ ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜು ಹಾಗೂ ಸರ್ಕಾರಿ…
ನಾಲೆಯಲ್ಲಿ ನೀರು ಬಿಟ್ಟೆವಾದರೂ ಪೈಪ್ ಲೈನ್ ನಲ್ಲಿ ನೀರು ಬಿಡಲು ಒಲ್ಲೆವು – ಮಾಜಿ ಸಚಿವ ಸೊಗಡು ಶಿವಣ್ಣ*
ರಾಮನಗರ ಜಿಲ್ಲೆಯ ಮಾಗಡಿಯ ಶ್ರೀರಂಗ ಏತ ನೀರಾವರಿ ಯೋಜನೆಗೆ ಹೆಚ್ಚುವರಿ ನೀರನ್ನು ಹಂಚಿಕೆ ಮಾಡಿಕೊಂಡು ನಾಲೆಯಲ್ಲಿ ನೀರು ತೆಗೆದುಕೊಂಡು ಹೋಗಲು ನಮ್ಮ ವಿರೋಧವಿಲ್ಲ ಲಿಂಕ್ ಕೆನಾಲ್ ಮೂಲಕ ಪೈಪ್ ಲೈನ್ ನಲ್ಲಿ ನೀರು ಬಿಡಲು ಸುತಾರಾಮ್ ಒಪ್ಪುವುದಿಲ್ಲ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದರು. ಇಂದು ತುರುವೇಕೆರೆ ತಾಲ್ಲೂಕು ಸಿ ಎಸ್ ಪುರ ಹೋಬಳಿ ಚೆನ್ನೇನಹಳ್ಳಿ ಗ್ರಾಮದಲ್ಲಿ ರಾಮನಗರ ಜಿಲ್ಲೆಗೆ ಹೇಮಾವತಿ ನೀರು ಕೊಂಡೊಯ್ಯಲು ಪೈಪ್ ಲೈನ್ ಕಾಮಗಾರಿಗಾಗಿ ನಿರ್ಮಾಣ ಮಾಡಿರುವ ನಾಲೆಯನ್ನು ಜೆಸಿಬಿಗಳ ಮೂಲಕ…
ಶಂಕರಪ್ಪಬಳ್ಳೇಕಟ್ಟೆರವರಿಗೆ ರಾಷ್ಟ್ರೀಯ ಬಸವ ಪ್ರಶಸ್ತಿ ಪುರಸ್ಕಾರ*
ತಿಪಟೂರು: ಚೇತನ ಫೌಂಡೇಶನ್ ಕರ್ನಾಟಕ ಇವರು ಧಾರವಾಡದ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಬಸವ ಜಯಂತಿ ಅಂಗವಾಗಿ ವಚನ ವೈಭವ, ಉಪನ್ಯಾಸ ವಚನ ವಾಚನ ಕವಿಗೋಷ್ಠಿ ಹಾಗೂ ನಾಡಿನ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡು ,ತಿಪಟೂರಿನ ರೈತಕವಿ ಡಾ.ಪಿ.ಶಂಕರಪ್ಪ ಬಳ್ಳೇಕಟ್ಟೆ.ಇವರ ಸಾಹಿತ್ಯ ಮತ್ತು ಸಮಾಜ ಸೇವೆಯನ್ನು ಗುರುತಿಸಿ “ರಾಷ್ಟ್ರೀಯ ಬಸವ ಪ್ರಶಸ್ತಿ” ನೀಡಿ ಗೌರವಿಸಿದ್ದಾರೆ ಸಮಾರಂಭದಲ್ಲಿ ಶ್ರೀ ವೇ ಜ್ಞಾನ ಬ್ರಹ್ಮ ಚಿರಂತಯ್ಯ ಹಿರೇಮಠ ಸ್ವಾಮೀಜಿಯವರು ಕಾರ್ಯಕ್ರಮ ಉದ್ಘಾಟಿಸಿ; ದಿವ್ಯ ಸಾನಿದ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಡಾ….
ಭಾರಿ ಮಳೆಗೆ ಹೆಚ್.ಬೈರಾಪುರ ಗ್ರಾಮದ ಎರಡು ಸೇತುವೆಗಳು ಜಲಾವೃತ.
ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಹೆಚ್.ಬೈರಾಪುರ ಗ್ರಾಮದಲ್ಲಿ ಇಂದು ಬಿದ್ದ ಭಾರಿ ಮಳೆಗೆ,ತಿಪಟೂರು-ಹುಳಿಯಾರು ರಸ್ತೆ ಮಧ್ಯದ ಹೆಚ್.ಬೈರಾಪುರದ ಗ್ರಾಮದ ಮಧ್ಯಭಾಗದಲ್ಲಿರುವ ಎರಡು ಸೇತುವೆಗಳು ಆಪಿನಕಟ್ಟೆ ಹಳ್ಳ ಮತ್ತು ಕುನ್ನಿರಕಟ್ಟೆ ಹಳ್ಳದ ಬಳಿ ಹಳ್ಳದಿಂದ ನೀರು ಬರುತ್ತಿದ್ದು, ಹುಳಿಯಾರು ಮಾರ್ಗದ ರಸ್ತೆ ಸಂಪೂರ್ಣ ಜಲಾವೃತಿಯಾಗಿದ್ದು, ಈ ಎರಡು ಕೆರೆಯ ನೀರುಗಳು ಈ ಸೇತುವೆ ಮಾರ್ಗ ಬರುತ್ತಿರುವ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ಮತ್ತು ದಾರಿ ಸವಾರರಿಗೆ ತುಂಬಾ ತೊಂದರೆ ಉಂಟಾಗುತ್ತಿದ್ದು,ಈ ಭಾಗದಲ್ಲಿ ವಾಹನ ಸಂಪೂರ್ಣ ದಟ್ಟಣೆಯಾಗಿದ್ದು,ಈ ಸೇತುವೆಗಳು ತೀರ ಚಿಕ್ಕದಾಗಿದ್ದು,ಮಳೆ…
ಶಾಸಕ ಎಸ್ಆರ್ ಶ್ರೀನಿವಾಸ್ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ತಡೆಯಲಿ ಶಾಸಕ ಎಂ ಟಿ ಕೃಷ್ಣಪ್ಪ ಸವಾಲ್.
ಗುಬ್ಬಿ ಸುದ್ದಿ. ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ನನ್ನ ಬಗ್ಗೆ ಲಘುವಾಗಿ ಮಾತನಾಡಿದು ಧೈರ್ಯವಿದ್ದರೆ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯನ್ನು ನಿಲ್ಲಿಸಲು ಹೋರಾಟ ಮಾಡಲಿ ನಾವು ಸಹ ಬೆಂಬಲವನ್ನು ವ್ಯಕ್ತಪಡಿಸುತ್ತೇವೆ ಅದನ್ನು ಬಿಟ್ಟು ಗುಳ್ಳೆ ನರಿಯ ಆಟವನ್ನು ಆಡುವುದು ಸರಿಯಲ್ಲ ಹಾಗೂ ನನ್ನ ಬಗ್ಗೆ ಲಘುವಾಗಿ ಮಾತನಾಡುವುದು ಸೂಕ್ತವಲ್ಲ ಎಂದು ತುರುವೇಕೆರೆ ಕ್ಷೇತ್ರದ ಶಾಸಕ ಎಂ ಟಿ ಕೃಷ್ಣಪ್ಪ ಶಾಸಕ ಎಸ್ ಆರ್ ಶ್ರೀನಿವಾಸ್ ಹೇಳಿಕೆಗೆ ತಿರುಗೇಟು ನೀಡಿದರು. ಗುಬ್ಬಿ ತಾಲೂಕಿನ ಸಿ ಎಸ್…
ಧರ್ಮಸ್ಥಳ ಸಂಸ್ಥೆಯಿಂದ ನಮ್ಮೂರು ನಮ್ಮ ಕೆರೆ ಯೋಜನೆಯಲ್ಲಿ ಕಣತೂರು ಕೆರೆ ಅಭಿವೃದ್ಧಿ/ ಪೂರ್ವಭಾವಿ ಸಮಾಲೋಚನ
ತುರುವೇಕೆರೆ: ತಾಲೂಕಿನ ಕಣತೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಕೆರೆ ಹೂಳೆತ್ತುವ ಕಾಮಗಾರಿಗೆ ಪೂರ್ವಭಾವಿಯಾಗಿ ಗ್ರಾಮಸ್ಥರೊಡನೆ ಸಮಾಲೋಚನಾ ಸಭೆ ನಡೆಸಲಾಯಿತು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ಮಾತನಾಡಿ, ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದ ಬಗ್ಗೆ ಧರ್ಮಸ್ಥಳ ಯೋಜನೆಯ ಚಿಂತನೆ, ಕನಸೇನು ಎಂಬುದರ ಮಾಹಿತಿ ನೀಡಿದರು. ಕೆರೆಯ ಹೂಳೆತ್ತಿ ನೀರು ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸುವ ಈ ಯೋಜನೆಯಿಂದ ರೈತರ ಕೃಷಿ ಚಟುವಟಿಕೆಗೆ ಹೆಚ್ಚಿನ ಅನುಕೂಲವಾಗಲಿದೆ. ಈ…
ವರ್ಷದ ಮೊದಲ ಮಳೆಯು ತಾಲೂಕಿನಲ್ಲಿ ಅಬ್ಬರಿಸಿದ ಪರಿಣಾಮ ಮನೆಗಳ ಗೋಡೆ ಕುಸಿತ,
ಗುಬ್ಬಿ ಸುದ್ದಿ ಕಳೆದ ರಾತ್ರಿ ಸುರಿದ ವರ್ಷಧಾರೆ ಕೃತಿಕಾ ಮಳೆಯ ಪರಿಣಾಮ ತಾಲೂಕಿನ ಹಲವು ಕಡೆ ಮನೆಗಳ ಗೋಡೆ ಧರೆಗೆ ಉರುಳಿದರೆ, ನಗರದಲ್ಲಿ ರಸ್ತೆಯ ಮೇಲೆ ನೀರು ನಿಂತ ಪರಿಣಾಮ ಸಂಚಾರವು ಕೆಲವು ಕಾಲ ಸ್ಥಗಿತವಾಗಿದ್ದ ಘಟನೆ ತಾಲೂಕಿನಲ್ಲಿ ನಡೆದಿದೆ. ವರ್ಷದ ಮೊದಲ ಮಳೆಯು ತಾಲೂಕಿನಲ್ಲಿ ಅಬ್ಬರಿಸಿದ ಪರಿಣಾಮ ಮನೆಗಳ ಗೋಡೆ ಕುಸಿತ, ರಸ್ತೆಗಳು ಕೆಲವು ಕಾಲ ಸ್ಥಗಿತವಾದ ಘಟನೆ ಕಳೆದ ರಾತ್ರಿ ಗುಬ್ಬಿ ತಾಲೂಕಿನಲ್ಲಿ ನಡೆದಿದೆ. ವರ್ಷಧಾರೆ ಮಳೆಯು ಗುಬ್ಬಿ ನಗರದಲ್ಲೇ 112 ಮಿಲಿ ಮೀಟರ್…
ಪೋಷಕರೇ ಮಕ್ಕಳ ಜವಾಬ್ದಾರಿ ಯಾರ ಹೊಣೆ
ಸಾರ್ವಜನಿಕರೇ ಹಾಗೂ ಪೋಷಕರೇ ತಮ್ಮ ಮಕ್ಕಳಿಗೆ ಶಾಲಾ ಕಾಲೇಜು ಗಳಿಗೆ ಕಳುಹಿಸುವಾಗ ಎಚ್ಚರವಹಿಸಬೇಕಿದೆ. ಇವತ್ತಿನ ದಿನಗಳಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳನ್ನು ನೋಡಿದಾಗ , ಪೋಷಕರು ತಮ್ಮ ಮಕ್ಕಳಿಗೆ ಶಾಲಾ ಕಾಲೇಜು ಗಳಿಗೆ ಕಳುಹಿಸಲು ಆತಂಕ ಪಡುವಂತಹ ವಾತಾವರಣ ನಿರ್ಮಾಣವಾಗಿದೆ. ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ ಎಂಬ ಅಭದ್ರತೆ ಕಾಡುತ್ತಿದೆ. ಇದಕ್ಕೆ ಕಾರಣ ಯಾರು ? ಪೋಲಿಸರ ವೈಫಲ್ಯವೇ ? ಆಡಳಿತ ಸರ್ಕಾರದ ವೈಫಲ್ಯವೇ ? ಪೋಷಕರ ವೈಫಲ್ಯವೇ ? ಸರ್ಕಾರಿ ಶಾಲಾ ಕಾಲೇಜುಗಳಲ್ಲಿನ ಮುಖ್ಯಸ್ಥರ ಬೇಜವಾಬ್ದಾರಿತನವೇ ?…
ಪೂಜ್ಯ ವೀರೇಂದ್ರ ಹೆಗ್ಗಡೆಯವರಿಂದ ರೂ. 50,000/- ಮೊತ್ತದ ಪ್ರಸಾದ ರೂಪದ ಡಿಡಿ ಮಂಜೂರಾತಿ
ಗುಬ್ಬಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೊಪ್ಪ ವಲಯದ ಕೋಣೆ ಮಾದೇನಹಳ್ಳಿ ಗ್ರಾಮದಲ್ಲಿ ನಿರ್ಮಾಣ ವಾಗುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ದೇವಾಲಯ ಜೇಣೋದ್ಧಾರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ರೂ. 50,000/- ಮೊತ್ತದ ಪ್ರಸಾದ ರೂಪದ ಡಿಡಿ ಮಂಜೂರಾತಿ ನೀಡಿದ್ದು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ರಾಜೇಶ್. ಎಸ್ ರವರು ದೇವಾಲಯ ಸಮಿತಿಯ ಪದಾಧಿಕಾರಿಗಳಿಗೆ ಡಿಡಿ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಪಾತಯ್ಯ, ಹಾಗೂ ಎಲ್ಲ…