ಪ್ರಮುಖ ಸುದ್ದಿಗಳು
ಡಾ ಅಂಬೇಡ್ಕರ್ ಪ್ರಚಾರ ಸಮಿತಿವತಿಯಿಂದ ಬಸವ ಜಯಂತಿಆಚರಣೆ
ತುಮಕೂರು : ಬಸವ ಜಯಂತಿ ಪ್ರಯುಕ್ತ ಇಂದು ಮಹಾನಗರ ಪಾಲಿಕೆಯ ಆವರಣದಲ್ಲಿ ಅಖಿಲ ಭಾರತ ಡಾ. ಬಿ.ಆರ್.ಅಂಬೇಡ್ಕರ್ ಪ್ರಚಾರ ಸಮಿತಿ ತುಮಕೂರು ಶಾಖೆ, ದಲಿತಪರ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳ ಒಕ್ಕೂಟ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪುಷ್ಪನಮನ ಸಲ್ಲಿಸಿ ಸಾರ್ವಜನಿಕರಿಗೆ ಸಿಹಿ ವಿತರಣೆ ಮಾಡಲಾಯಿತು. ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಎನ್.ಕೆ.ನಿಧಿ ಕುಮಾರ್ ಮಾತನಾಡುತ್ತಾ ೧೨ನೇ ಶತಮಾನದ ಮಹಾನಾಯಕ, ವಿಶ್ವ ಗುರು, ಕ್ರಾಂತಿಕಾರಕ, ಹಲವಾರು…
ತಾಲೂಕು ಆಡಳಿತದಿಂದ ಜಗಜ್ಯೋತಿ ಬಸವೇಶ್ವರ ಜಯಂತಿ ಹಾಗೂ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ
ಗುಬ್ಬಿ ತಾಲೂಕು ಆಡಳಿತ, ವೀರಶೈವ ಲಿಂಗಾಯತ ಮಹಾಸಭಾ, ವೀರಶೈವ ಸಮಾಜ ಮತ್ತು ಅಂಗ ಸಂಸ್ಥೆಗಳಿಂದ ಶ್ರೀಜಗಜ್ಯೋತಿ ಬಸವೇಶ್ವರ ಜಯಂತಿ ಹಾಗೂ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ತಾಲೂಕು ಕಚೇರಿಯ ಕೋರ್ಟ್ ಹಾಲ್ ನಲ್ಲಿ ಗ್ರೇಡ್ 02 ತಹಶೀಲ್ದಾರ್ ಶಶಿಕಲಾ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಒಬ್ಬ ಗೃಹಿಣಿಯಾಗಿ ಮನೆಯ ಎಲ್ಲ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದಲ್ಲದೇ ಸಮಾಜಕ್ಕೂ ಮಾದರಿಯಾಗಬಲ್ಲ ಕೆಲಸ ಮಾಡಿದ ಕೀರ್ತಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರಿಗೆ ಸಲ್ಲುತ್ತದೆ. ಮಲ್ಲಮ್ಮ ಅವರ ಸುತ್ತ ಸಾಕಷ್ಟು ಪವಾಡಗಳಿದ್ದರೂ ಅವರು ನಡೆದುಕೊಂಡ ಜೀವನ…
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ದಾಖಲೆ ಸೃಷ್ಟಿಸಿದ ಪ್ರಿಯಾ ಆಂಗ್ಲ ಶಾಲೆ/ ಸತತ 15 ನೇ ಬಾರಿ ಶೇ.100 ಫಲಿತಾಂಶ
ತುರುವೇಕೆರೆ: 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪಟ್ಟಣದ ಪ್ರಿಯಾ ಆಂಗ್ಲ ಪ್ರೌಢಶಾಲೆಯು ಸತತ 15 ನೇ ಬಾರಿ ಶೇ.100 ಫಲಿತಾಂಶ ಪಡೆದು ದಾಖಲೆ ನಿರ್ಮಿಸಿದೆ ಎಂದು ಶಾಲೆಯ ಕಾರ್ಯದರ್ಶಿ ಪುಷ್ಪಲತಾ ಚಂದ್ರೇಗೌಡ ತಿಳಿಸಿದರು. ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಶಾಲೆಯಿಂದ 28 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 8 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 8 ಮಂದಿ ಉನ್ನತ, 12 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಿಂಚನ…
ಜೆ.ಪಿ. ಆಂಗ್ಲಶಾಲೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.98.50 ಫಲಿತಾಂಶ
ತುರುವೇಕೆರೆ: 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪಟ್ಟಣದ ಜೆ.ಪಿ. ಆಂಗ್ಲ ಪ್ರೌಢಶಾಲೆಗೆ ಶೇ.98.50 ಫಲಿತಾಂಶ ಬಂದಿದೆ ಎಂದು ಪ್ರಾಂಶುಪಾಲ ತುಕಾರಾಮ್ ತಿಳಿಸಿದರು. ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಶಾಲೆಯಿಂದ 112 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 110 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 23 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 60 ಮಂದಿ ಪ್ರಥಮ, 22 ಮಂದಿ ದ್ವಿತೀಯ ಹಾಗೂ 5 ಮಂದಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕೆ.ಎ.ಗಾನವಿ(603), ಎಂ.ಜೆ. ಜಮುನಾ…
ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಜ್ವಲಂತ ಸಮಸ್ಯೆಗಳು ಇಂದಿಗೂ ಸಹ ಬಗೆಹರಿಯದೆ ಉಳಿದಿವೆ ಲೋಕೇಶ್ ತಾಳಿಕಟ್ಟೆ
ಶೈಕ್ಷಣಿಕ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆಗಾಗಿ ಶಿಕ್ಷಣ ತಜ್ಞರು ಹಾಗೂ ಶಿಕ್ಷಕರೊಂದಿಗೆ ಚರ್ಚಿಸಿ ಪ್ರಣಾಳಿಕೆ ಸಿದ್ದಪಡಿಸಲಾಗಿದೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ತಿಳಿಸಿದರು. ಅವರು ನಗರದ ಖಾಸಗೀ ಹೋಟೆಲ್’ನಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯ ತಮ್ಮ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿ ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಜ್ವಲಂತ ಸಮಸ್ಯೆಗಳು ಇಂದಿಗೂ ಸಹ ಬಗೆಹರಿಯದೆ ಉಳಿದಿದ್ದು, ಅವುಗಳ ನಿವಾರಣೆಗಾಗಿ ರಾಜ್ಯದ ಹಲವಾರು ಶಿಕ್ಷಣ ತಜ್ಞರು ಹಾಗೂ ಶಿಕ್ಷಕರೊಂದಿಗೆ ಸಂವಾದ ಹಾಗೂ ಚರ್ಚೆ ನಡೆಸಿ ಪ್ರಣಾಳಿಕೆ…
ಶ್ರೀ ಸಿದ್ದಗಿರಿ ಶನೇಶ್ವರ ಸ್ವಾಮಿಯ 16ನೇ ವರ್ಷದ ವಾರ್ಷಿಕೋತ್ಸವ ಹಾಗೂ ಬಸವ ಜಯಂತಿ ಕಾರ್ಯಕ್ರಮ
ಶ್ರೀ ಸಿದ್ದಗಿರಿ ಶನೇಶ್ವರ ಸ್ವಾಮಿಯ 16ನೇ ವರ್ಷದ ವಾರ್ಷಿಕೋತ್ಸವ ಹಾಗೂ ಬಸವ ಜಯಂತಿ ಕಾರ್ಯಕ್ರಮ ಆಯೋಜನೆ ಕಲ್ಪತರ ನಾಡು ಕಲಾವಿದರ ಬೀಡು ಎಂದು ಖ್ಯಾತಿ ಪಡೆದಿರುವ ತುಮಕೂರು ಧಾರ್ಮಿಕ ಶೈಕ್ಷಣಿಕ ಸಾಮಾಜಿಕ ಶಿಕ್ಷಣ ಅನ್ನದಾಸೋಹ ರಂಗ ಚಟುವಟಿಕೆ ಹಾಗೂ ಇನ್ನೂ ಅನೇಕ ಕ್ಷೇತ್ರಗಳಲ್ಲಿ ಹೆಸರುವಾಸಿಯಾಗಿರುವ ಈ ಕ್ಷೇತ್ರದಲ್ಲಿ ರಂಗ ಪರಂಪರೆಯನ್ನು ಉಳಿಸಿ ಬೆಳೆಸುವಂತಹ ಅನೇಕ ಕಾರ್ಯಕ್ರಮಗಳು ದಿನನಿತ್ಯ ಒಂದಲ್ಲ ಒಂದು ರೀತಿಯಾಗಿ ನಡೆಯುತ್ತಾ ಬಂದಿತ್ತು ಅದೇ ರೀತಿಯಾಗಿ ತುಮಕೂರು ತಾಲೂಕಿನ ಬೊಮ್ಮನಹಳ್ಳಿ ಕೆಸರುಮಡು ಗ್ರಾಮದಲ್ಲಿ ಶ್ರೀ ಸಿದ್ದಗಿರಿ…
ಕೊಲೆ ಪ್ರಕರಣದ ಆರೋಪಿ ಬಂಧನ
ದಿನಾಂಕ:03.05.2024 ರಂದು ಸಂಜೆ 4:30 ರಿಂದ 5:00 ಗಂಟೆ ಸಮಯದಲ್ಲಿ ಕೊಟ್ಟನಹಳ್ಳಿ ಗ್ರಾಮದ ತನ್ನ ವಾಸದ ಮನೆಯಲ್ಲಿ ಇದ್ದ ಸಿದ್ದನಂಜಮ್ಮ ರವರನ್ನು ಯಾರೋ ಕತ್ತು ಹಿಸುಕಿ ಕೊಲೆ ಮಾಡಿ. ಅವರ ಕೊರಳಿನಲ್ಲಿದ್ದ ಚಿನ್ನದ ಸರವನ್ನು ತೆಗೆದುಕೊಂಡು ಹೋಗಿರುತ್ತಾರೆ. ಪತ್ತೆ ಮಾಡಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ಮೊ.ಸಂ:116/2024, ಕಲಂ: 302 ಐ.ಪಿ.ಸಿ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತೆ. ಸದರಿ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿಯನ್ನು ಪತ್ತೆ…
ಮೈಕ್ರೋ ಫೈನಾನ್ಸ್ ಹಾಗೂ ಅನಧಿಕೃತ ಕೆರೆಯ ಮಣ್ಣಿನ ಬಗ್ಗೆ ಸಭೆ
ಗುಬ್ಬಿ ತಹಶೀಲ್ದಾರ್ ಆರತಿ ಬಿ. ಅಧ್ಯಕ್ಷತೆಯಲ್ಲಿ ಮೈಕ್ರೋ ಫೈನಾನ್ಸ್ ಹಾಗೂ ಅನಧಿಕೃತ ಕೆರೆಯ ಮಣ್ಣಿನ ಬಗ್ಗೆ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಳೆದ ವಾರದ ಹಿಂದೆ ಮೈಕ್ರೋ ಫೈನಾನ್ಸ್ ಕಂಪನಿಗಳ ಬಳಿ ಸಾಲ ಪಡೆದು ತೀರಿಸಲು ಸಾಧ್ಯವಾಗದೆ ಇರುವ ಕಾರಣ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಎಲ್ಲಾ ತಾಲೂಕು ಗಳಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ತಾಲೂಕಿನಲ್ಲಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಸಿಬ್ಬಂದಿಗಳ ಸಭೆಯನ್ನು ಕರೆದು RBI ನ ಯಾವ ನಿಯನದಡಿ ಫೈನಾನ್ಸ್ ಗಳು ಕರ್ತವ್ಯ ನಿರ್ವಹಿಸುತ್ತಿದೆ, ಕಂಪನಿ ಸಿಬ್ಬಂದಿಯೂ…
ಬರಗಾಲದ ಹಿನ್ನೆಲೆ, ಸಾಲ ಮರುಪಾವತಿಗೆ ಒತ್ತಡ ಹೇರಿದರೆ ಅಗತ್ಯ ಕ್ರಮ: ತಹಸೀಲ್ದಾರ್
ತುರುವೇಕೆರೆ: ಬರಗಾಲದ ಹಿನ್ನೆಲೆಯಲ್ಲಿ ಯಾವುದೇ ಬ್ಯಾಂಕ್, ಮೈಕ್ರೋಫೈನಾನ್ಸ್ ಗಳು ರೈತರಿಂದ ಸಾಲಮರುಪಾವತಿಗೆ ಮುಂದಿನ ಎರಡು ತಿಂಗಳ ಕಾಲ ಒತ್ತಡ ಹೇರಬಾರದು, ಆ ರೀತಿ ಒತ್ತಡ ಹೇರಿದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ರೇಣುಕುಮಾರ್ ಎಚ್ಚರಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಬರಗಾಲದ ಹಿನ್ನೆಲೆಯಲ್ಲಿ ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಬ್ಯಾಂಕ್, ಮೈಕ್ರೋಫೈನಾನ್ಸ್ ಗಳು ಸಾಲ ಮರುಪಾವತಿ ಮಾಡಲು ಒತ್ತಾಯ ಹೇರದಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ತಿಪಟೂರಿನಲ್ಲಿ ನಡೆದ ಘಟನೆ…
ಹಲಸಿನಕಾಯಿ ಕೀಳಲು ಮರ ಹತ್ತಿದ ಕೂಲಿ ಕಾರ್ಮಿಕ ಕಾಲು ಜಾರಿ ಕೆಳಗೆ ಬಿದ್ದು ಸಾವು
ಕೊರಟಗೆರೆ ತಾಲೂಕಿನ ನೀಲಗೊಂಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಳಸಂದ್ರ ಗ್ರಾಮದ ಸಮೀಪ ತೋಟದಲ್ಲಿ ನೆಡೆದ ದುರ್ಘಟನೆ. ಹಲಸಿನಕಾಯಿ ಕೀಳಲು ಹೇಳಿದ ತೋಟದ ಮಾಲಿಕ ಬಸವರಾಜು ಕೂಲಿ ಕಾರ್ಮಿಕ ಸತ್ತಿದ್ದಾನೆ ಎಂದ ಕೂಡಲೇ ಸ್ಥಳದಿಂದ ಪರಾರಿಯಾದ ಎಂದು ಗ್ರಾಮಸ್ಥರ ಆರೋಪ ಪ್ರತಿದಿನವೂ ಕೆಲಸಕ್ಕೆ ಬರುವುದಿಲ್ಲ ಎಂದರು ಬಲಂತವಾಗಿ ಕರೆದುಕೊಂಡು ಹೋಗಿ ಮಧ್ಯಪಾನ ಮಾಡಿಸಿ ತನ್ನ ತೋಟದ ಕೆಲಸ ಮಾಡಿಸಿಕೊಳ್ಳುತ್ತಿದ್ದ ತೋಟದ ಮಾಲೀಕ ಮರ ಹತ್ತಲು ಬರದಿದ್ದವನಿಗೆ ಮಧ್ಯಪಾನ ಮಾಡಿಸಿ ಮರ ಅತ್ತಲು ಹೇಳಿರುವ ತೋಟದ ಮಾಲೀಕ ಎಂದು ಕುಟುಂಬಸ್ಥರ…