ನಿರೂಪಕರ ಜ್ಞಾನಮಟ್ಟದಿಂದ ಆ ಸುದ್ದಿವಾಹಿನಿಯ ಘನತೆ ನಿರ್ಧಾರವಾಗಿರುತ್ತದೆ” ಡಾ”ಎಂ, ಎಸ್, ರವಿಪ್ರಕಾಶ್

  ತುಮಕೂರು: ನಿರುಪಕರು ಒಂದು ಟಿವಿ ವಾಹಿನಿಯ ಪ್ರತಿನಿಧಿಯಂತೆ ಇದ್ದು ಸಮಾಜದಲ್ಲಿನ ಒಳಿತು ಕೆಡಕುಗಳ ಸುದ್ದಿಗಳನ್ನು ಜನರಿಗೆ ಮನಮುಟ್ಟುವಂತೆ ವಿವರಿಸುವಂತಹ ಕಾರ್ಯವನ್ನು ನಿರ್ವಹಿಸುತ್ತಾರೆ. ಇವರ ಜ್ಞಾನಮಟ್ಟದಿಂದ ಆ ವಾಹಿನಿಯ ಘನತೆ ನಿರ್ಧಾರವಾಗಿರುತ್ತದೆ ಎಂದು ಎಸ್ ಎಸ್ ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಎಸ್ ರವಿಪ್ರಕಾಶ್ ತಿಳಿಸಿದರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿರುವ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಿಂದ ಆಯೋಜಿಸಲಾಗಿದ್ದ 3 ದಿನಗಳ ಆ್ಯಂಕರಿಂಗ್ – ಸುದ್ದಿ ನಿರೂಪಣಾ ಕಾರ್ಯಗಾರವನ್ನು ಉಧ್ಘಾಟಿಸಿ ಮಾತನಾಡಿದ ಅವರು…

Read More

ಸಂವಿಧಾನದ ಆಶಯವನ್ನು ಭಾರತದ ಪ್ರತಿಯೊಬ್ಬ ವ್ಯಕ್ತಿಯೂ ಅರಿಯಬೇಕುಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು

ತುಮಕೂರು: ಸಂವಿಧಾನದ ಆಶಯಗಳನ್ನು ಭಾರತದ ಪ್ರತಿಯೊಬ್ಬ ಪ್ರಜೆಯೂ ಅರಿತುಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಜಾಪ್ರಭುತ್ವವು ಕೇವಲ ಮತದಾನಕ್ಕೆ ಸೀಮಿತವಾಗಿರದೆ, ಜನಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ಒತ್ತಿ ಹೇಳುತ್ತದೆ. ಪ್ರತೀ ನಾಗರಿಕನೂ ಪ್ರಜಾಪ್ರಭುತ್ವದ ಬಲವರ್ಧನೆಗೆ ತನ್ನ ಪಾತ್ರವನ್ನು ನಿರ್ವಹಿಸಬೇಕು ಎಂದು ಹೇಳಿದರು….

Read More

2006 ರಿಂದ 2009 ನೇ ಸಾಲಿನ ಬಿ.ಬಿ.ಎಂ. ವಿದ್ಯಾರ್ಥಿಗಳಿಂದ ಗುರುವಂದನೆ ಹಾಗೂ ಸ್ನೇಹ ಸಮಾಗಮ ಕಾರ್ಯಕ್ರಮ

ತುಮಕೂರು : ಪಾವಗಡ ತಾಲ್ಲೂಕಿನ ಶ್ರೀಮತಿ ಮತ್ತು ಶ್ರೀ ವೈ.ಇ.ಆರ್. ಪ್ರಥಮ ದರ್ಜೆ ಕಾಲೇಜಿನ 2006 ರಿಂದ 2009 ನೇ ಸಾಲಿನ ಬಿ.ಬಿ.ಎಂ. ವಿದ್ಯಾರ್ಥಿಗಳಿಂದ 16 ವರ್ಷಗಳ ನಂತರ ಗುರುವಂದನೆ ಹಾಗೂ ಸ್ನೇಹ ಸಮಾಗಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗುರುಗಳಿಗೆ ವಿಶೇಷ ಪುಷ್ಪನಮನ, ಪುಷ್ಪದಿಂದಲೇ ಅವರುಗಳನ್ನು ವೇದಿಕೆಯವರೆಗೆ ಭವ್ಯ ಸ್ವಾಗತವನ್ನು ನೀಡುವುದರ ಮೂಲಕ ವಿದ್ಯೆ ಕಲಿಸಿದ ಗುರುಗಳಿಗೆ ವಿಶೇಷ ಗೌರವವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಹೆಚ್.ಓ.ಡಿ ಆದ ಮಹಾಲಕ್ಷ್ಮೀ ಅವರು ವಹಿಸಿದ್ದರು.  …

Read More

ಹೇಮಾವತಿ ಲಿಂಕ್ ಕೆನಾಲ್ : ರೈತರಿಗೆ ಆತಂಕ ಬೇಡ – ಡಿ.ಕೆ.ಶಿವಕುಮಾರ್ ಅಭಯ

ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಯೋಜನೆಯ ಬಗ್ಗೆ ತುಮಕೂರು ಜಿಲ್ಲೆಯ ಯೋಜನೆ ವ್ಯಾಪ್ತಿ ಪ್ರದೇಶದ ರೈತರು ಗಾಬರಿಪಡುವ ಅಗತ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಸಣ್ಣ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ರೈತರಿಗೆ ಭರವಸೆ ನೀಡಿದ್ದಾರೆ.  ಗುಬ್ಬಿ ತಾಲೂಕಿನ ಸುಂಕಾಪುರದ ಟಿ.ಬಿ. ಕೆನಾಲ್ 70ನೇ ಕಿ.ಮೀ.ನಲ್ಲಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯ ಪರಿವೀಕ್ಷಣೆ ನಡೆಸಿದ ನಂತರ ಅವರು ಮಾತನಾಡಿದರು. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ತತ್ವದಲ್ಲಿ ನಮ್ಮ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ತುಮಕೂರು ಜಿಲ್ಲೆಯಲ್ಲಿ ಕೈಗೆತ್ತಿಳ್ಳಲಾಗಿರುವ ಹೇಮಾವತಿ ಲಿಂಕ್…

Read More

ಸಿದ್ದಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ: ಸಾಧಕರಿಗೆ ಸನ್ಮಾನ

ತುಮಕೂರು: ಶಿಕ್ಷಕರು ಕೇವಲ ಶೈಕ್ಷಣಿಕ ಜ್ಞಾನವನ್ನು ನೀಡುವುದಲ್ಲದೆ, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ, ಉತ್ತಮ ಮನುಷ್ಯರಾಗಿ ಮತ್ತು ದೇಶದ ಉತ್ತಮ ನಾಗರಿಕರಾಗಿ ಬೆಳೆಯಲು ಸಹಕರಿಸುತ್ತಾರೆ. ರಾಷ್ಟ್ರ ನಿರ್ಮಾಣದಲ್ಲಿ ಅವರ ಕೊಡುಗೆ ಅಪಾರ ಎಂದು ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ.ಬಿ.ಲಿಂಗೇಗೌಡ ಅವರು ಅಭಿಪ್ರಾಯಪಟ್ಟರು. ನಗರದ ಹೊರವಲಯದ ಅಗಳಕೋಟೆಯ ಶ್ರೀ ಸಿದ್ಧಾರ್ಥ ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆಯಲ್ಲಿ ‘ಸಾಧಕ ಶಿಕ್ಷಕನ್ನು’ ಸನ್ಮಾಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ದೇಶದ ಪ್ರಜೆಗಳಾಗಿರುವುದರಿಂದ ಶಿಕ್ಷಕರು ದೇಶದ ಭವಿಷ್ಯವನ್ನು ರೂಪಿಸುವ ಪ್ರಮುಖ ಪಾತ್ರವನ್ನು ವಹಿಸುತ್ತಾರೆ….

Read More

ಜಿಎಸ್‍ಟಿ ದರ ಪರಿಷ್ಕರಣೆ: ಬಿಜೆಪಿ ಸ್ವಾಗತ

ತುಮಕೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ದರಗಳನ್ನು ಪರಿಷ್ಕರಿಸುವ ಮೂಲಕ ತೆರಿಗೆ ಹೊರೆ ಕಡಿತಗೊಳಿಸಿ ಎಲ್ಲಾ ವರ್ಗದ ಜನರ ಬದುಕನ್ನು ಸರಳ ಹಾಗೂ ಸುಲಭಗೊಳಿಸಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಟಿ.ಆರ್.ಸದಾಶಿವಯ್ಯ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಜಿಎಸ್‍ಟಿ ಪರಿಷ್ಕರಣೆ ಜನಸಾನ್ಯರ ತೆರಿಗೆ ಹೊರೆ ಇಳಿಸುವ ಮೂಲಕ ಕೇಂದ್ರ ಸರ್ಕಾರ ಗರಿಷ್ಠ ವಸ್ತುಗಳ ಮೇಲೆ ಗಮನಾರ್ಹ ಪರಿಹಾರವನ್ನು ನೀಡಿದೆ. ರೈತರು, ವ್ಯಾಪಾರಿಗಳು ಮತ್ತು ವ್ಯವಹಾರಗಳಿಗೆ ಇದರಿಂದ ಪ್ರಯೋಜನವಾಗಿದೆ….

Read More

ಜಿಲ್ಲಾಡಳಿತದ ದಸರಾದಲ್ಲಿ ಲಕ್ಷಾಂತರ ರೂ. ಹಣ ದುರುಪಯೋಗ ಖರ್ಚು- ವೆಚ್ಚಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಒತ್ತಾಯ

ತುಮಕೂರು: ಸರ್ಕಾರದ ಅನುದಾನ ಹಾಗೂ ಸಾರ್ವಜನಿಕರ ತೆರಿಗೆ ಹಣ ಬಳಸಿಕೊಂಡು ಕಳೆದ ವರ್ಷ ಜಿಲ್ಲಾಡಳಿತ ನಗರದಲ್ಲಿ ಆಚರಿಸಿದ ದಸರಾ ಮಹೋತ್ಸವದಲ್ಲಿ ಲಕ್ಷಾಂತರ ರೂ. ಸಾರ್ವಜನಿಕರ ಹಣ ದುರುಪಯೋಗವಾಗಿದೆ. ಆಗಿನ ಲೆಕ್ಕ ನೀಡದೆ ಸಮಿತಿಯವರು ಯಾವ ಮುಖ ಹೊತ್ತು ಈ ಬಾರಿ ಮತ್ತೊಂದು ದಸರಾ ಉತ್ಸವ ಆಚರಿಸಲು ಹೊರಟಿದ್ದಾರೆ? ಎಂದು ತುಮಕೂರು ದಸರಾ ಸಮಿತಿ ಖಜಾಂಚಿ ಜಿ.ಎಸ್.ಬಸವರಾಜು ಪ್ರಶ್ನಿಸಿದರು. ಜಿಲ್ಲಾಡಳಿತ ಕಳೆದ ಬಾರಿ ನಡೆಸಿದ ದಸರಾ ಆಚರಣೆಯಲ್ಲಿ ಆಗಿರುವ ಹಣದ ಅಕ್ರಮಗಳ ಬಗ್ಗೆ ದಾಖಲಾತಿಗಳನ್ನು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ…

Read More

ನಾಳೆ ಎಸ್‌ಐಟಿ ಕಾಲೇಜಿನಲ್ಲಿ 16ನೇ ಪದವಿ ಪ್ರದಾನ ಸಮಾರಂಭ 

ತುಮಕೂರು: ಶ್ರೀ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದ 16ನೇ ಪದವಿ ಪ್ರದಾನ ಸಮಾರಂಭ ನಗರದ ಎಸ್‌ಐಟಿ ಕಾಲೇಜಿನ ಆವರಣದಲ್ಲಿ ಸೆ.6 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಸಿದ್ದಗಂಗಾ ಮಠದ ಹಿರಿಯ ಶ್ರೀಗಳಾದ ಲಿಂ. ಡಾ. ಶ್ರೀ ಶಿವಕುಮಾರ ಸ್ವಾಮೀಜಿರವರ ಕೃಪಾಶೀರ್ವಾದ ಹಾಗೂ ಸಿದ್ದಗಂಗಾ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ 16ನೇ ಪದವಿ ಪ್ರದಾನ ಸಮಾರಂಭಜರುಗಲಿದ್ದು, ಒಟ್ಟು 820 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ಶ್ರೀ ಸಿದ್ದಗಂಗಾ ಎಜುಕೇಶನ್‌ ಸೊಸೈಟಿಯ ಜಂಟಿ…

Read More

ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮಗಳನ್ನು ಬಹಳ ಎಚ್ಚರಿಕೆಯಿಂದ ಬಳಸಬೇಕು”

ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮಗಳನ್ನು ಬಹಳ ಎಚ್ಚರಿಕೆಯಿಂದ ಬಳಸಬೇಕು, ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷಟು ವಿಷಯಗಳು ಹರಿದಾಡುತ್ತದೆ ಆದರೆ ನಮಗೆ ಸರಿ ಎನಿಸಿದ ವಿಷಯಗಳನ್ನು ಮಾತ್ರ ಪಡೆದುಕೊಳ್ಳಬೇಕು ಸಾಮಾಜಿಕ ಮಾಧ್ಯಮಗಳಲ್ಲಿ ಯೂಟೂಬರ್ಗಳು ಎಚ್ಚರಿಕೆಯಿಂದ ಸಾಮಾಜಿಕ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ವಿಡಿಯೋಗಳನ್ನು ಮಾಡಬೇಕು ಎಂದು ಪ್ರಜಾಪ್ರಗತಿಯ ಸಂಪಾದಕರಾದ ಎಸ್ ನಾಗಣ್ಣ ಸಲಹೆ ನೀಡಿದರು. ನಗರದ ಶ್ರೀ ಸಿದ್ಧಾಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿದ್ದಾರ್ಥ ಸಂಕಲ್ಪ 2025 ಕಾರ್ಯಕ್ರಮದಲ್ಲಿ ತುಮಕೂರಿನಲ್ಲಿ ಹೆಸರು ಮಾಡಿರುವಂತಹ ಬ್ಲಾಗರ್ಸ್ ಗಳಿಗೆ ಸನ್ಮಾನಿಸಿ ಮಾತನಾಡಿದ ಅವರು ನಾಡಿನ ಸಾಮಾಜಿಕ ಸ್ವಾಸ್ಥ್ಯವನ್ನು…

Read More

ವಕೀಲ ಸುಧಾಕರ್ ಮೇಲಿನ ಹಲ್ಲೆಗೆ ವಕೀಲರ ಸಂಘ ಖಂಡನೆ

ವಕೀಲರ ರಕ್ಷಣಾ ಕಾಯಿದೆ ಕಠಿಣಗೊಳಿಸಲು ಸರ್ಕಾರಕ್ಕೆ ಒತ್ತಾಯ ತುಮಕೂರು: ಪಾವಗಡ ತಾಲ್ಲೂಕು ವಕೀಲ ಟಿ.ಹೆಚ್.ಸುಧಾಕರ್ ಮೇಲಿನ ಹಲ್ಲೆ ಖಂಡಿಸಿ, ಅವರ ವಿರುದ್ಧ ಪೊಲೀಸರು ದಾಖಲಿಸಿರುವ ಎಫ್‍ಐಆರ್ ರದ್ದುಪಡಿಸಲು ಒತ್ತಾಯಿಸಿ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ಸೋಮವಾರ ವಕೀಲರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ವಕೀಲ ಧರ್ಮ ಪಾಲನೆ ಮಾಡುವ ವಕೀಲರಿಗೆ ರಕ್ಷಣೆ ದೊರೆಯುತ್ತಿಲ್ಲ, ವಕೀಲರ ರಕ್ಷಣಾ ಕಾಯಿದೆಯನ್ನು ಕಠಿಣವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳು ಹಾಗೂ ಕಾನೂನು ಸಚಿವರಿಗೆ ಮನವಿಪತ್ರ ಸಲ್ಲಿಸಿದರು.  …

Read More
error: Content is protected !!