ಬರಗಾಲದ ಹಿನ್ನೆಲೆ, ಸಾಲ ಮರುಪಾವತಿಗೆ ಒತ್ತಡ ಹೇರಿದರೆ ಅಗತ್ಯ ಕ್ರಮ: ತಹಸೀಲ್ದಾರ್
ತುರುವೇಕೆರೆ: ಬರಗಾಲದ ಹಿನ್ನೆಲೆಯಲ್ಲಿ ಯಾವುದೇ ಬ್ಯಾಂಕ್, ಮೈಕ್ರೋಫೈನಾನ್ಸ್ ಗಳು ರೈತರಿಂದ ಸಾಲಮರುಪಾವತಿಗೆ ಮುಂದಿನ ಎರಡು ತಿಂಗಳ ಕಾಲ ಒತ್ತಡ ಹೇರಬಾರದು, ಆ ರೀತಿ ಒತ್ತಡ ಹೇರಿದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ರೇಣುಕುಮಾರ್ ಎಚ್ಚರಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಬರಗಾಲದ ಹಿನ್ನೆಲೆಯಲ್ಲಿ ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಬ್ಯಾಂಕ್, ಮೈಕ್ರೋಫೈನಾನ್ಸ್ ಗಳು ಸಾಲ ಮರುಪಾವತಿ ಮಾಡಲು ಒತ್ತಾಯ ಹೇರದಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ತಿಪಟೂರಿನಲ್ಲಿ ನಡೆದ ಘಟನೆ…