ಜಿಲ್ಲಾ ಸುದ್ದಿಗಳು
ಪಾಲನಹಳ್ಳಿ ಮಠದ ಶ್ರೀ ಶನೇಶ್ಚರ ಸ್ವಾಮಿಯವರ ಜಾತ್ರಾ ಮತ್ತು ಶಿವರಾತ್ರಿ ಮಹೋತ್ಸವಕ್ಕೆ ಆಹ್ವಾನ
ರಾಮನಗರ ಜಿಲ್ಲೆ ಮಾಗಡಿ ತಾಲೂಕು ಸೋಲೂರು ಹೋಬಳಿಯ ಶ್ರೀ ಶನೇಶ್ಚರ ಸ್ವಾಮಿ ಕ್ಷೇತ್ರ ಪಾಲನಹಳ್ಳಿ ಮಠದ ಸಂಸ್ಥಾಪಕರು ಮಠ ಅಧ್ಯಕ್ಷರು ಆದ ಡಾ ಶ್ರೀ ಶ್ರೀ ಸಿದ್ದರಾಜು ಸ್ವಾಮೀಜಿಗಳು ಇದೇ ತಿಂಗಳು ದಿನಾಂಕ 15 ರಿಂದ 16 ರ ತನಕ ಶ್ರೀ ಕ್ಷೇತ್ರದಲ್ಲಿ ನಡೆಯುವ ಶ್ರೀ ಶನೇಶ್ಚರ ಸ್ವಾಮಿಯವರ ಜಾತ್ರಾ ಮತ್ತು ಶಿವರಾತ್ರಿ ಮಹೋತ್ಸವಕ್ಕೆ ತುಮಕೂರು ಜಿಲ್ಲೆಯ ಸಮಸ್ತ ಸಮುದಾಯದ ಭಕ್ತ ವೃಂದಕ್ಕೆ ಆಹ್ವಾನ ನೀಡಿದರು. ತುಮಕೂರಿನ ಖಾಸಗಿ ಹೋಟೆಲ್ ನಲ್ಲಿ ತುಮಕೂರಿನ ಹಲವಾರು ಸಮುದಾಯದ ಮುಖಂಡರೊಂದಿಗೆ…
ಡಿಜಿಟಲ್ ಆರ್ಥಿಕತೆಯ ಅರಿವು ಅಗತ್ಯ: ಎನ್. ಬಿ. ಪ್ರದೀಪ್ ಕುಮಾರ್
ವೈಸಿರಿ ಕಾಲೇಜಿನಲ್ಲಿ ‘ಬಿಟ್ಕಾಯಿನ್ ಮೂಲಭೂತ ಅಂಶಗಳು’ ಕುರಿತು ವಿಶೇಷ ಉಪನ್ಯಾಸ ತುಮಕೂರು: “ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಡಿಜಿಟಲ್ ಕರೆನ್ಸಿಗಳು ಮತ್ತು ಉದಯೋನ್ಮುಖ ಹಣಕಾಸು ತಂತ್ರಜ್ಞಾನಗಳ ಪಾತ್ರ ದಿನೇ ದಿನೇ ಹೆಚ್ಚುತ್ತಿದೆ. ಇಂದಿನ ಸ್ಪರ್ಧಾತ್ಮಕ ವಾಣಿಜ್ಯ ಜಗತ್ತಿನಲ್ಲಿ ವಿದ್ಯಾರ್ಥಿಗಳು ಇಂತಹ ನವೀನ ಹಣಕಾಸು ವ್ಯವಸ್ಥೆಗಳ ಬಗ್ಗೆ ಅರಿವು ಬೆಳೆಸಿಕೊಳ್ಳುವುದು ಅತ್ಯಗತ್ಯ,” ಎಂದು ವಿದ್ಯಾವಾಹಿನಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿಗಳಾದ ಎನ್. ಬಿ. ಪ್ರದೀಪ್ ಕುಮಾರ್ ಅವರು ಹೇಳಿದರು. ನಗರದ ವೈಸಿರಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಟೆಕ್ನಾಲಜಿಯಲ್ಲಿ ಎಂಬಿಎ ವಿಭಾಗದ…
ಶಿಕ್ಷಣದಜೊತೆ ಕಲೆ,ಸಂಗೀತ, ಸಾಹಿತ್ಯವಿರಲಿ ಕಂಬದರಂಗಯ್ಯ
ಗುಬ್ಬಿ : ಪೋಷಕರು ತಮ್ಮ ಮಕ್ಕಳಿಗೆ ಒಳ್ಳೆಯ ವಿದ್ಯೆಯನ್ನು ಕೊಡಿಸಿ ಅದರಲ್ಲಿ ಸಂಗೀತ, ಕಲೆ ದೈಹಿಕ ಚಟುವಟಿಕೆ ಜೊತೆಗೆ ಮಕ್ಕಳಿಗೆ ಯಾವುದರಲ್ಲಿ ಹೆಚ್ಚು ಆಸಕ್ತಿ ಇರುತ್ತದೊ ಅಂತಹ ಶಿಕ್ಷಣವನ್ನು ಕೊಡಿಸಿ ಎಂದು ಜ್ಹೀ ಕನ್ನಡ ಸರಿಗಮಪ ಖ್ಯಾತಿಯ ಗಾಯಕ ಕಂಬದರಂಗಯ್ಯ ಹೇಳಿದರು. ಅವರು ಗುರುವಾರ ಸಂಜೆ ನಡೆದ ಹೊಸಕೆರೆ ಸನ್ ರೈಸ್ ಇಂಟರ್ ನ್ಯಾಷನಲ್ ಶಾಲೆಯ ಸನ್ ರೈಸ್ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನನ್ನ ಜೀವನದ ಓದುವ ಸಮಯದಲ್ಲಿ ಕಷ್ಟವನ್ನು ಅನುಭವಿಸಿದ್ದೇನೆ, ಅಂತಹ ಕಾಲದಲ್ಲೂ…
208 ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವ
ತುಮಕೂರು : ನಗರದ ಅಮಾನಿಕೆರೆ ಉದ್ಯಾನವನದಲ್ಲಿ ಜನವರಿ ೦೧ ರಂದು ಸಂಜೆ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ವತಿಯಿಂದ ೨೦೮ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಅಮಾನಿಕೆರೆ ಉದ್ಯಾನವನದಲ್ಲಿರುವ ಯೋಧರ ಧ್ವಜ ಸ್ಥಂಭಕ್ಕೆ ಕ್ಯಾಂಡಲ್ ದೀಪ ಬೆಳಗಿಸಿ, ಪುಷ್ವರ್ಚನೆ ಮಾಡುವ ಮೂಲಕ ಆಚರಿಸಲಾಯಿತು. ಭೀಮಾ ಕೋರೆಗಾಂವ್ ಯುದ್ಧವು ಭಾರತೀಯ ಇತಿಹಾಸದಲ್ಲಿ, ಅದರಲ್ಲೂ ವಿಶೇಷವಾಗಿ ದಲಿತ ಸಮುದಾಯದ ಆತ್ಮಗೌರವ ಕೋರೆಗಾಂವ್ ಯುದ್ಧ. ಸಮಾನತೆ ಮತ್ತು ಸ್ವಾಭಿಮಾನದ ಅಮರ…
ಶಿಕ್ಷಣ ಕೇವಲ ಹಣ ಸಂಪಾದನೆ ಮಾಡುವ ಮಾರ್ಗವಲ್ಲ ಬದಲಾಗಿ ವ್ಯಕ್ತಿಯ ಜ್ಞಾನವನ್ನು ಬಲಪಡಿಸಬೇಕಿದೆ : ಗವಿಮಠದ ಶ್ರೀಗಳು
ಚೇಳೂರು : ಶಿಕ್ಷಣ ಸಂಸ್ಥೆಗಳು ಹಣ ಸಂಪಾದನೆ ಮಾಡುವ ಕಾಯಕವಾಗದೇ ಮಕ್ಕಳ ಬೌಧಿಕ ಮತ್ತುವ ಮಾನಸಿಕ ಜ್ಞಾನವನ್ನು ಬಲಪಡಿಸುವ ಮಾರ್ಗವಾದಾಗ ಮಾತ್ರ ಶಿಕ್ಷಣದ ಮೂಲ ಗುರಿಯನ್ನು ತಲುಪಿಸಲು ಸಾಧ್ಯ ಬೆಟ್ಟದಹಳ್ಳಿ ಗವಿಮಠದ ಶ್ರೀ ನಿ.ಪ.ಸ್ವ ಚಂದ್ರಶೇಖರ ಸ್ವಾಮೀಜಿಗಳು ತಿಳಿಸಿದರು. ಅವರು ಗ್ರಾಮದ ಶ್ರೀ ಮಲ್ಲಿಕಾರ್ಜುನ ಸಂಸ್ಕೃತ, ಪ್ರಾಥಮಿಕ ಮತ್ತು ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಹಾಗೂ ಪೋಷಕರ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಸುಮಾರು 35 ವರ್ಷಗಳಿಂದ ಮಕ್ಕಳ ಬೌಧಿಕ ಹಾಗೂ ಶಿಕ್ಷಣಿಕ ಚಟುವಟಿಕೆಗಳ ಮೂಲಕ…
ಜಾಗತೀಕರಣ ಯುಗದಲ್ಲಿ ಉತ್ತಮ ಕೃಷಿ ಪದ್ಧತಿಗಳ ಅಳವಡಿಕೆ ಅತ್ಯಗತ್ಯ
ಗುಬ್ಬಿ : ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಭಾರತೀಯ ಉತ್ಪನ್ನಗಳಿಗೆ ಬೇಡಿಕೆ ಸೃಷ್ಟಿಸಲು ಮತ್ತು ಹೊಸ ಮಾರುಕಟ್ಟೆಗಳನ್ನು ಗುರುತಿಸಲು ಸಹಾಯ ಮಾಡುವ ಕಾರ್ಯವನ್ನು ಅಪೆಡಾ ಮಾಡುತ್ತಿದೆ ಎಂದು ಅಪೆಡಾ ವಲಯ ಸಹಾಯಕ ವ್ಯವಸ್ಥಾಪಕ ಯು.ಧರ್ಮರಾವ್ ತಿಳಿಸಿದರು. ತಾಲ್ಲೂಕಿ ಸಿ.ಎಸ್ ಪುರ ಹೋಬಳಿಯ ನೆಟ್ಟೇಕೆರೆ ಗ್ರಾಮದಲ್ಲಿ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ (ಅಪೆಡಾ) ಮತ್ತು ತೋಟಗಾರಿಕೆ ಇಲಾಖೆ ತುಮಕೂರು ಇವರ ಸಹಯೋಗದೊಂದಿಗೆ ಏರ್ಪಡಿಸಿದ್ದ ಅಡಿಕೆ ಬೆಳೆಯಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ, ಸಮಗ್ರ…
ಉದ್ಘಾಟನೆಗೆ ಸಿದ್ಧಗೊಂಡ ಜಿಲ್ಲಾ ಬಂಜಾರ ಭವನ
ತುಮಕೂರು :- ಜಿಲ್ಲೆಯ ಲಂಬಾಣಿ (ಬಂಜಾರ) ಸಮುದಾಯ ಭವನದ ಕನಸು ಅನೇಕ ವರ್ಷಗಳ ಹೋರಾಟದ ಫಲವಾಗಿ, ತುಮಕೂರು ನಗರದ ಸರಸ್ವತಿಪುರಂನಲ್ಲಿ ಬೃಹತ್ ಮತ್ತು ಭವ್ಯವಾದ ಜಿಲ್ಲಾ ಬಂಜಾರ ಭವನ ನಿರ್ಮಾಣಗೊಳ್ಳುವುದರೊಂದಿಗೆ ಸಕಾರಗೊಂಡಿದೆ. ಸುಸಜ್ಜಿತ ಸಮುದಾಯ ಭವನ ಉದ್ಘಾಟನೆಗೆ ಸಿದ್ಧಗೊಂಡಿದೆ. ಜಿಲ್ಲೆಯಲ್ಲಿ ತನ್ನದೆಯಾದ ಆದ ವೈಶಿಷ್ಟತೆ ಹೊಂದಿರುವ ಲಂಬಾಣಿ ಸಮುದಾಯದ ಬುಡಕಟ್ಟು ಸಂಸ್ಕøತಿ, ಕಲೆ, ಪರಂಪರೆ ಮತ್ತು ಐತಿಹಾಸಿಕ ಹೆಗ್ಗಳಿಕೆಯನ್ನು ಉಳಿಸಿ ಬೆಳೆಸಲು ಭವನವು ಭದ್ರ ನೆಲೆಯಾಗಲಿದೆ. ಭಾರತದ ಶ್ರೀಮಂತ ಸಂಸ್ಕೃತಿಯಲ್ಲಿ ಬಂಜಾರ ಸಮುದಾಯವು ವಿಶಿಷ್ಟ ಸ್ಥಾನಪಡೆದುಕೊಂಡಿದೆ. ಸಮುದಾಯದ…
ಸವಿತಾ ಸಮಾಜದ ಅವಿವಾಹಿತರ ವಧು-ವರರ ಅನ್ವೇಷಣಾ ಕೇಂದ್ರ ಉದ್ಘಾಟನೆ.
ತುಮಕೂರು : ತುಮಕೂರು ನಗರದ ಗಾರ್ಡನ್ ರಸ್ತೆಯಲ್ಲಿರುವ ಸವಿತಾ ಸಮಾಜ ಜಿಲ್ಲಾ ಸಂಪರ್ಕ ಕೇಂದ್ರದ ವತಿಯಿಂದ ಇಂದು ಸವಿತಾ ಸಮಾಜದ ಅವಿವಾಹಿತರ ಅನುಕೂಲಕಕ್ಕಾಗಿ ವಧು-ವರರ ಅನ್ವೇಷಣಾ ಕೇಂದ್ರವನ್ನು ಇಂದು ಸವಿತಾ ಸಮಾಜ ಯುವಪಡೆಯ ಜಿಲ್ಲಾಧ್ಯಕ್ಷರಾದ ಕಟ್ವೆಲ್ ರಂಗನಾಥ್ ಅವರ ನೇತೃತ್ವದಲ್ಲಿ ಉದ್ಘಾಟನೆಯನ್ನು ಮಾಡಲಾಯಿತು. ಕಟ್ವೆಲ್ ರಂಗನಾಥ್ರವರು ಮಾತನಾಡುತ್ತಾ ಪ್ರಸ್ತುತದ ದಿನಗಳಲ್ಲಿ ನಮ್ಮ ಸಮಾಜದಲ್ಲಿ ವಿವಾಹದ ವಯಸ್ಸಿಗೆ ಬಂದಿರುವ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಜಾತಕ ಹೊಂದಾಣಿಕೆ, ಪರಸ್ಪರ ಅನ್ವೇಷಣೆ ಮಾಡುವುದು ತುಂಬಾ ಕಷ್ಟಕರವಾಗುತ್ತಿದೆ, ಸರಿಯಾದ ಜೋಡಿ ಸಿಗುವಲ್ಲಿ…
ಹುಳಿಯಾರಿನ ಪತ್ರಕರ್ತ ರಮೇಶ್ ರವರಿಗೆ ಆರ್ಥಿಕ ನೆರವು
ಹುಳಿಯಾರಿನ ಪತ್ರಕರ್ತ ರಮೇಶ್ ರವರಿಗೆ ತಿಪಟೂರಿನ ಕೆಪಿಸಿಸಿ ಸದಸ್ಯ ವಿ.ಯೋಗೇಶ್ ಮತ್ತು ಪತ್ರಕರ್ತ ಬಿ.ಟಿ.ಕುಮಾರ್ ನೆರವು. ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ಮತ್ತು ಆಕಸ್ಮಿಕ ದೃಷ್ಟಿ ಹೀನತೆಯಿಂದ ಬಳಲುತ್ತಿರುವ ಹುಳಿಯಾರಿನ ಪತ್ರಕರ್ತ ರಮೇಶ್ ರವರಿಗೆ ತಿಪಟೂರಿನ ಕೆಪಿಸಿಸಿ ಸದಸ್ಯ ವಿ.ಯೋಗೇಶ್ 25.000/-ರೂಗಳು ಮತ್ತು ಪತ್ರಕರ್ತ ಬಿ.ಟಿ.ಕುಮಾರ್ 5,000/-ರೂಗಳು ಆರ್ಥಿಕ ನೆರವು ನೀಡುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ. ಹುಳಿಯಾರಿನ ಪತ್ರಕರ್ತ ರಮೇಶ್ ರವರಿಗೆ ಸುಮಾರು 5 ತಿಂಗಳಿಂದ ಇದ್ದಕ್ಕಿದ್ದಂತೆ ದೃಷ್ಟಿ ಹೀನತೆ ಸಮಸ್ಯೆ ಎದುರಾಗಿ ಕಣ್ಣು ಕಾಣದ…
ನಶ ಮುಕ್ತ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ ಸಬ್ ಇನ್ಸ್ಪೆಕ್ಟರ್ ಸುನಿಲ್ ಕುಮಾರ್
ಗುಬ್ಬಿ : ತಾಲೂಕು ಕೇಂದ್ರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಮದ್ಯಾಹ್ನ ನಡೆದ ನಶ ಮುಕ್ತ ಭಾರತ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಬ್ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಮಾದಕ ವಸ್ತುಗಳ ದಾಸರಾಗಿದ್ದು, ಇದರ ಅತಿಯಾದ ಬಳಕೆಯಿಂದಾಗಿ ದೈಹಿಕ ಮತ್ತು ಮಾನಸಿಕ ಆರೋಗ್ಯ ತೊಂದರೆಗಳನ್ನು ಎದುರಿಸುತ್ತಿದ್ದು, ಜೀವನವನ್ನೇ ದುರಂತದ ಕಡೆಗೆ ಕೊಂಡೊಯ್ಯುತ್ತಿದ್ದಾರೆ ಎಂದು ತಿಳಿಸಿದರು. 2019 ರ ಅಂಕಿ ಅಂಶಗಳ ಮಾಹಿತಿ ಪ್ರಕಾರ ಭಾರತ ದೇಶದಲ್ಲಿ ಸುಮಾರು 7.2…