
ಜಿಲ್ಲಾ ಸುದ್ದಿಗಳು

ಮೊಬೈಲ್ ಕೇವಲ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ವಸ್ತುವಾಗಬೇಕೇ ಹೊರತು, ಮಾರಕ ವಸ್ತುವಾಗಬಾರದು ಡಾ, ಲಕ್ಷ್ಮಣ್ ದಾಸ್
ತಿಪಟೂರು: ಮೊಬೈಲ್ ಕೇವಲ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ವಸ್ತುವಾಗಬೇಕೇ ಹೊರತು, ಮಾರಕ ವಸ್ತುವಾಗಬಾರದು ವಿದ್ಯಾರ್ಥಿಗಳು ಮೊಬೈಲ್ ಅನ್ನು ಪಕ್ಕಕ್ಕಿಟ್ಟು ಪುಸ್ತಕ ಹಿಡಿದು ಓದಬೇಕು. ಯಾವುದಾದರೂ ಸರಿಯೇ ಒಳ್ಳೆಯದನ್ನು ಕಲಿಯಬೇಕು ಎಂದು ಪ್ರಸಿದ್ಧ ರಂಗಭೂಮಿ ಕಲಾವಿದರು ಮತ್ತು ಕೇಂದ್ರಸಾಹಿತ್ಯ ನಾಟಕ ಅಕಾಡಮಿ ಪ್ರಶಸ್ತಿ ಪುರಸ್ಕೃತರಾದ ಡಾ|| ಲಕ್ಷ್ಮಣ ದಾಸ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25 ನೇ ಸಾಲಿನ ಕ್ರೀಡೆ, ಸಾಂಸ್ಕೃತಿಕ, ಎನ್.ಎಸ್.ಎಸ್., ಎನ್. ಸಿ. ಸಿ., ದಿ ಭಾರತ್ ಸ್ಕೌಟ್ಸ್ ಅಂಡ್…
ತುಮಕೂರು ಜಿಲ್ಲಾ ವಕೀಲರ ಸಂಘದಲ್ಲಿ ವಕೀಲರ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ
ತುಮಕೂರು:ನಗರದ ಜಿಲ್ಲಾ ವಕೀಲರ ಸಂಘದಲ್ಲಿ ಇಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಯಂತ್ ಕುಮಾರ್ ರವರು ವಕೀಲರ ದಿನಾಚರಣೆ ಪ್ರಯುಕ್ತ ವಕೀಲರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯನವರು ಇಂದು ಭಾರತದ ಪ್ರಥಮ ರಾಷ್ಟ್ರಪತಿ ಡಾ||ಬಾಬುರಾಜೇಂದ್ರಪ್ರಸಾದ್ ರವರ ಹುಟ್ಟುಹಬ್ಬದ ನಿಮಿತ್ತ ವಕೀಲರ ದಿನಾಚರಣೆಯನ್ನು ಪ್ರಪಂಚದಾದ್ಯಂತ ಆಚರಿಸುತ್ತಿದ್ದು,ವಕೀಲರು ದೇಶದ ಕಣ್ಣು ನೊಂದವರ ಕಣ್ಣೀರು ಒರೆಸಿ ನ್ಯಾಯಾಲಯದ ಮೂಲಕ ನ್ಯಾಯದಾನ ಒದಗಿಸುವಲ್ಲಿ ವಕೀಲರ…
ಮನುಷ್ಯರು ಮನುಷ್ಯರಾಗಿ ಬದುಕಲು ಅವಕಾಶ ಕಲ್ಪಿಸಿದ ವಿಶ್ವ ಮಾನವತಾವಾದಿ ಡಾ: ಬಿ.ಆರ್. ಅಂಬೇಡ್ಕರ್- ಅಪಾರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ
ತುಮಕೂರು: ಸಮಾಜದಲ್ಲಿ ಜಾತಿ, ಧರ್ಮಗಳ ಸಂಕೋಲೆಗಳಿಂದ ಮುಕ್ತರಾಗಿ ಸಂವಿಧಾನದ ಮೂಲಕ ಮನುಷ್ಯರು ಮನುಷ್ಯರಾಗಿ ಬದುಕಲು ಅವಕಾಶ ಕಲ್ಪಿಸಿದ ವಿಶ್ವ ಮಾನವತಾವಾದಿ ಡಾ: ಬಿ.ಆರ್. ಅಂಬೇಡ್ಕರ್ ಅವರು ನವ ಭಾರತದ ನಿರ್ಮಾಣಕ್ಕೆ ಶ್ರಮಿಸಿದವರಲ್ಲಿ ಅಗ್ರ ಪಂಕ್ತಿಯಲ್ಲಿ ನಿಲ್ಲುತ್ತಾರೆ ಎಂದು ಅಪಾರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಎಂಪ್ರೆಸ್ ಶಾಲಾ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ “ಭಾರತ ಸಂವಿಧಾನ ದಿನಾಚರಣೆ ಹಾಗೂ ವಿಶೇಷ…
ಗುಡುಗು-ಸಿಡಿಲು ಸಹಿತ ಮಳೆ : ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಿದ ಜಿಲ್ಲಾಧಿಕಾರಿ
ತುಮಕೂರು : ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ 5 ದಿನಗಳ ಕಾಲ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಮುಂಜಾಗ್ರತೆ ವಹಿಸಲು ಅಧಿಕಾರಿ ಸಿಬ್ಬಂದಿಗೆ ಸೂಚನೆ :- ಭಾರಿ ಮಳೆಯಿಂದ ಉಂಟಾಗಬಹುದಾದ ಪ್ರವಾಹದಿಂದ ಯಾವುದೇ ಜನ-ಜಾನುವಾರುಗಳ ಜೀವಹಾನಿಯಾಗದಂತೆ ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿದ್ದುಕೊಂಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿ ಹೊಂದಿರಬೇಕೆಂದು ಅಧಿಕಾರಿಗಳಿಗೆ ಸೂಚನೆ…
ಹಾಸನ ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಅಲ್ಲಿಗೆ ಹೋಗಿರದಿದ್ದರೆ ಇನ್ನು 25 ವರ್ಷ ಕಳೆದರೂ ಈ ಭಾಗಕ್ಕೆ ಎತ್ತಿನಹೊಳೆ ನೀರು ಹರಿಯುತ್ತಿರಲಿಲ್ಲ ಸಹಕಾರ ಸಚಿವ ಕೆ.ಎನ್. ರಾಜಣ್ಣ
*ಮಧುಗಿರಿ ನ್ಯೂಸ್* ಮಧುಗಿರಿ ನಗರದ ತಾ.ಪಂ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಲ್ಲಿನ ರಾಜಕೀಯ ಪರಿಸ್ಥಿತಿಯೇ ಬೇರೆ ರೀತಿ ಇದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವನಾಗಿ ಅಧಿಕಾರ ವಹಿಸಿಕೊಂಡಾಗಲೇ ಅಲ್ಲಿನ ಪರಿಸ್ಥಿತಿ ನನ್ನ ಗಮನಕ್ಕೆ ಬಂದದ್ದು, ದಕ್ಷ ಅಧಿಕಾರಿಗಳಿಗೆ ಅಲ್ಲಿ ಕೆಲಸ ಮಾಡಲು ಬಿಡುವುದೇ ಇಲ್ಲ. ಹಾಸನ ಡಿಸಿ ಸತ್ಯಭಾಮರವರು ಮತ್ತು ನಾನು ಇಲ್ಲದಿದ್ದರೆ ಈ ಭಾಗಕ್ಕೆ ಎತ್ತಿನಹೊಳೆ ನೀರು ಹರಿಸಲು ಸಾದ್ಯವಾಗುತ್ತಿರಲಿಲ್ಲ. ಹಾಸನ ಡಿಸಿ ಸತ್ಯಭಾಮರವರು ಎತ್ತಿನಹೊಳೆ ಯೋಜನೆಗೆ…
ರಾಜ್ಯಮಟ್ಟದ ಸುವರ್ಣ ಸಂಭ್ರಮ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ರಾಜ್ಯಧ್ಯಕ್ಷ ಶಿವಾನಂದತಗಡೂರು ಸಲಹೆ
ತುಮಕೂರು: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರತಿ ವರ್ಷವೂ ಪತ್ರಕರ್ತರಿಗಾಗಿ ಕ್ರೀಡಾಕೂಟಗಳನ್ನು ಆಯೋಜನೆ ಮಾಡುತ್ತಾ ಬಂದಿದ್ದು ಈ ಬಾರಿ ಕಲ್ಪತರು ನಗರಿ ತುಮಕೂರಿಗೆ ಈ ಕ್ರೀಡಾಕೂಟ ಆಯೋಜನೆ ಮಾಡುವ ಅವಕಾಶ ಸಿಕ್ಕಿದೆ ಈ ಹಿನ್ನೆಲೆಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ 50 ಎಂಬ ಘೋಷವಾಕ್ಯ ಅಡಿಯಲ್ಲಿ ಕ್ರೀಡಾಕೂಟವನ್ನು ಆ ಯೋಜನೆ ಮಾಡಲಾಗುತ್ತಿದ್ದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಈಗಾಗಲೇ ಹಲವು ಉಪಸಮಿತಿಗಳನ್ನ ರಚನೆ ಮಾಡಿಕೊಂಡ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಕರ್ನಾಟಕ…
ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಹೇಳೋರಿಲ್ಲ, ಕೇಳೋರಿಲ್ಲ : ಜಿಲ್ಲಾ ಉಸ್ತುವಾರಿ ಸಚಿವರ ಆಕ್ರೋಶ
ತುಮಕೂರು: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಡಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆ ತೀರಾ ಹದಗೆಟ್ಟ ಪರಿಸ್ಥಿತಿಯಲ್ಲಿದ್ದು, ಯಾರೂ ಹೇಳೋರು, ಕೇಳೋರಿಲ್ಲದಂತಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಮುಖ್ಯಮಂತ್ರಿಗಳ ಭೇಟಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಕೊರಟಗೆರೆ ತಾಲ್ಲೂಕು ಬಜ್ಜನಹಳ್ಳಿ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಸಾವಿಗೀಡಾಗಿರುವುದು ಅಧಿಕಾರಿಗಳ ವೈಫಲ್ಯ ಎದ್ದು ಕಾಣುತ್ತಿದೆ. ಕಚೇರಿಯಲ್ಲಿ ಕುಳಿತು ಪತ್ರಗಳಿಗೆ…
ಸಮಾಜದ ಎರಡು ಕಣ್ಣುಗಳ ನಡುವೆ ಬೆಂಕಿ ಹಚ್ಚಿದವರ್ಯಾರು ಸಾರ್ವಜನಿಕರ ಪ್ರಶ್ನೆ ?
ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಅನ್ಯಾಯಕ್ಕೆ ಒಳಗಾದ ಜನಸಾಮಾನ್ಯರಿಗೆ ನ್ಯಾಯ ಒದಗಿಸುವಂತಹ ನ್ಯಾಯವಾದಿಗಳ ಮತ್ತು ಜನರ ರಕ್ಷಣೆ ಮಾಡುವಂತಹ ಪೊಲೀಸ್ ಸಿಬ್ಬಂದಿಗಳ ನಡುವಿನ ವೈ ಮನಸ್ಸಿಗೆ ಕಾರಣವೇನೆಂಬುದು ಜನರ ಮನಸ್ಸಿನಲ್ಲಿ ಗೊಂದಲ ಸೃಷ್ಟಿಸಿರುವುದು ನಿಜಕ್ಕೂ ಆತಂಕಕಾರಿಯಾದ ವಿಷಯವಾಗಿದೆ ಎಂದು ತುಮಕೂರು ಜನತೆಯಲ್ಲಿ ಕೇಳಿ ಬರುತ್ತಿರುವ ಮಾತಾಗಿದೆ. ಪೋಲಿಸ್ ಸಿಬ್ಬಂದಿಗಳು ಹಾಗೂ ನ್ಯಾಯವಾದಿಗಳು ಒಂದೇ ನಾಣ್ಯದ ಎರಡು ಮುಖಗಳು ಜನಸಾಮಾನ್ಯರಿಗೆ ಏನಾದರೂ ಅನ್ಯಾಯವಾದರೆ ಮೊದಲು ಪೊಲೀಸ್ ಠಾಣೆಗೆ ಹೋಗಿ ತಮಗೆ ರಕ್ಷಣೆ ಪಡೆದು ನಂತರ ನ್ಯಾಯವಾದಿಗಳ ಬಳಿ ಹೋಗುವ ಮುಖಾಂತರ…
ಶ್ರೀ ಗುರು ರುದ್ರಮುನಿ ಸ್ವಾಮಿ ದೇವಾಂಗ ಮಠ ದೇವಸ್ಥಾನದ ಜೀರ್ಣೋದ್ಧಾರಕ್ಕೆ ದೇಣಿಗೆ ನೀಡಿದ ಪೂಜ್ಯ ವೀರೇಂದ್ರ ಹೆಗ್ಗಡಿಯವರಿಗೆ ಗ್ರಾಮಸ್ಥರ ಅಭಿನಂದನೆ
ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಕಲ್ಲೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಗುರು ರುದ್ರಮುನಿ ಸ್ವಾಮಿ ದೇವಾಂಗ ಮಠದ ಜೀರ್ಣೋದ್ಧಾರಕ್ಕೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ರೂ 2,00,000 ಮೊತ್ತದ ಪ್ರಸಾದ ರೂಪದ ಡಿಡಿ ಮಂಜೂರು ಮಾಡಿದ್ದು, ಗುಬ್ಬಿ ತಾಲೂಕಿನ ಯೋಜನಾಧಿಕಾರಿ ರಾಜೇಶ್ ಎಸ್ ರವರು ದೇವಸ್ಥಾನ ಸಮಿತಿಯ ಪದಾಧಿಕಾರಿಗಳಿಗೆ, ರೂ.200000 ಮೊತ್ತದ ಡಿ ಡಿ ಚೆಕ್ ಅನ್ನು ಹಸ್ತಾಂತರ ಮಾಡಿದರು, ಈ ಸಂದರ್ಭ ಡಿ ಡಿ ವಿತರಣೆ ಮಾಡಿ…
ಜಿಲ್ಲಾಡಳಿತದಿಂದ ಒನಕೆ ಓಬವ್ವ, ಕನಕದಾಸ ಜಯಂತಿಗೆ ಸಕಲ ಸಿದ್ಧತೆ : ಡಾ: ಎನ್.ತಿಪ್ಪೇಸ್ವಾಮಿ
ತುಮಕೂರು: ಜಿಲ್ಲಾಡಳಿತ ವತಿಯಿಂದ ನವೆಂಬರ್ ಮಾಹೆಯಲ್ಲಿ ಆಚರಿಸಲಾಗುತ್ತಿರುವ ಸಂತ ಶ್ರೇಷ್ಠ ವೀರರಾಣಿ ಒನಕೆ ಓಬವ್ವ ಜಯಂತಿ ಹಾಗೂ ಕನಕದಾಸರ ಜಯಂತಿಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ನವಂಬರ್ 11ರಂದು ವೀರರಾಣಿ ಒನಕೆ ಓಬವ್ವ ಜಯಂತಿ ಮತ್ತು ನವೆಂಬರ್ 18ರಂದು ಸಂತ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಒನಕೆ…