
ಜಿಲ್ಲಾ ಸುದ್ದಿಗಳು
ಚಿನ್ನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನೂತನ ಅಧ್ಯಕ್ಷರಾಗಿ ಎ,ವಿಜಯ ಅವಿರೋದ ಆಯ್ಕೆ*
ಕೊರಟಗೆರೆ :- ಕೋಳಾಲ ಹೋಬಳಿಯ ಚಿನ್ನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ನೂತನ ಅಧ್ಯಕ್ಷರನ್ನಾಗಿ ತಾಲೂಕಿನ ದಂಡಾಧಿಕಾರಿ ಮಂಜುನಾಥ್ ರವರು ಚುನಾವಣಾ ವೀಕ್ಷಕರಾಗಿ ಚುನಾವಣೆ ನೆಡೆಸಿದರು. ಚುನಾವಣೆಯಲ್ಲಿ ಓಟ್ಟು 14 ಸದಸ್ಯರ ಪೈಕಿ ತಿಮ್ಮಸಂದ್ರ ಗ್ರಾಮದ ಪಂಚಾಯ್ತಿ ಸದಸ್ಯರಾದ ಎ.ವಿಜಯ ರವರು ಅಧ್ಯಕ್ಷರ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ರು. ಇವರನ್ನು ಬಿಟ್ಟು ಯಾರೂ ಕೂಡ ನಾಮಪತ್ರವನ್ನು ಸಲ್ಲಿಸದೆ ಇರುವುದರಿಂದ. ತಿಮ್ಮಸಂದ್ರ ಗ್ರಾಮದ ಎ. ವಿಜಯ ರವರನ್ನು ತಾಲೂಕಿನ ದಂಡಾಧಿಕಾರಿ ಮಂಜುನಾಥ್…
ಕೆರೆ ಹೂಳು ತೆಗೆಯಲು ಮಾಹಿತಿ ಪತ್ರ ಕಡ್ಡಾಯ. ಸಿ ಇ ಓ ಜಿ ಪ್ರಭು
ತುಮಕೂರು: ರೈತರು ತಮ್ಮ ಜಮೀನುಗಳಿಗೆ ಕೆರೆಯಿಂದ ಮಣ್ಣು ತೆಗೆಯುವ ಮುನ್ನ ಸಂಬಂಧಿಸಿದ ಗ್ರಾಮ ಪಂಚಾಯತಿಗೆ ಕಡ್ಡಾಯವಾಗಿ ಮಾಹಿತಿ ಪತ್ರವನ್ನು ಸಲ್ಲಿಸಿರಬೇಕು. ಮಾಹಿತಿ ಪತ್ರ ಸಲ್ಲಿಸಿದವರಿಗೆ ಮಾತ್ರ ಕೆರೆ ಮಣ್ಣು ತೆಗೆಯಲು ಅನುಮತಿ ನೀಡಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ವಿವಿಧ ಕೆರೆಗಳ ಹೂಳು ತೆಗೆಯುವ ಹಾಗೂ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಎಲ್ಲ ತಾಲೂಕು ತಹಶೀಲ್ದಾರ್, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡೀಯೋ ಕಾನ್ಫರೆನ್ಸ್…
ಎರಡನೇ ಬಾರಿಗೆ ಲೋಕಾಯುಕ್ತರಿಗೆ ಬಲಿಯಾದ ಕಂದಾಯ ನಿರೀಕ್ಷಕ
ಗುಬ್ಬಿ ಸುದ್ದಿ ಸಿ ಎಸ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಿ ಎಸ್ ಪುರ ನಾಡ ಕಚೇರಿಯಲ್ಲಿ ರೈತ ನಾಗರಾಜ್ ಬಳಿ 10ಸಾವಿರ ಹಣವನ್ನು ಕಂದಾಯ ನಿರೀಕ್ಷಕ ನರಸಿಂಹಮೂರ್ತಿ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರಿಂದ ಟ್ರಾಪ್ ಮಾಡಲಾಗಿದೆ. 2023 ರಲ್ಲಿ ತುಮಕೂರು ಟೂಡದಲ್ಲಿ ಕಂದಾಯ ನಿರೀಕ್ಷಕನಾಗಿ ಕರ್ತವ್ಯ ನಿರ್ವಹಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿದ್ದ ಅಧಿಕಾರಿ ಇಂದು ತಾಲೂಕಿನ ಸಿ ಎಸ್ ಪುರ ನಾಡ ಕಚೇರಿಯಲ್ಲಿ ಗದ್ದೆಹಳ್ಳಿ ರೈತ ನಾಗರಾಜ್ ಅವರ ಬಳಿ 10 ಸಾವಿರ ಹಣವನ್ನು…
ಕಾಂಗ್ರೇಸ್ ಪಕ್ಷಕ್ಕೆ ದ್ರೋಹ ಬಗೆಯುವ ಕೆಲಸ ಮಾಡುತ್ತಿದ್ದಾರೆ ಹಾಲನೂರು ಲೇಪಾಕ್ಷ್ ರಘು ಕುಮಾರ್ ಆರೋಪ
ತುಮಕೂರು : ಕಾಂಗ್ರೆಸ್ ಪಕ್ಷವು ನಮ್ಮ ಭಾರತ ದೇಶದಲ್ಲಿ ಅತ್ಯಂತ ಪುರಾತನ ಪಕ್ಷವಾಗಿದ್ದು ಅದಕ್ಕೇ ತನ್ನದೇ ಆದಂತಹ ಸಿದ್ಧಾಂತ, ಶಿಸ್ತು, ಸಾಮಾಜಿಕ ಕಳಕಳಿ ಹಾಗೂ ಪ್ರಜಾಪ್ರಭುತ್ವವನ್ನು ರಕ್ಷಿಸುವಂತಹ ಪಕ್ಷವಾಗಿದೆ ಅದನ್ನು ಇತ್ತೀಚೆಗೆ ಹಾಳು ಮಾಡುವಂತಹ ಕಾರ್ಯ ನಡೆಯುತ್ತಿರುವುದು ನಮಗೆ ಬೇಸರ ತಂದಿದೆ ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ರಘು ಕುಮಾರ್ರವರು ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಳೆದ ವರ್ಷ ನವೆಂಬರ್ ಡಿಸೆಂಬರ್ ತಿಂಗಳಲ್ಲಿ ಜೆಡಿಎಸ್ ಪಕ್ಷದಿಂದ ಮಾಜಿ ಶಾಸಕರಾದ ಡಿ.ಸಿ.ಗೌರಿಶಂಕರ್ರವರ ನೇತೃತ್ವದಲ್ಲಿ ನೂರಾರು ಜನ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ…
ಸಾಂಕ್ರಾಮಿಕ ರೋಗ ಹರಡಲು ಸಾಕ್ಷಿಯಾಗುವುದೇ ? ಸರಕಾರಿ ಬಸ್ ನಿಲ್ದಾಣ
ತಿಪಟೂರು ತಾಲೂಕಿನ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಹಲವಾರು ವರ್ಷಗಳಿಂದ ಮಳೆಗಾಲ ಬಂತೆಂದರೆ, ಸುದ್ದಿ ಪತ್ರಿಕೆಗಳ ಮತ್ತು ನ್ಯೂಸ್ ಚಾನಲ್ ಗಳ ಬಾಯಿಗೆ ತುತ್ತಾಗುವುದು ಸರ್ವೇ ಸಾಮಾನ್ಯವಾಗಿದೆ. ಕೆಲವು ವರ್ಷಗಳ ಹಿಂದೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿ, ನವೀಕರಣಗೊಳಿಸಲಾಗಿರುವ ತಿಪಟೂರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಕೆಲವೊಂದಷ್ಟು ಮೂಲಭೂತ ಸೌಕರ್ಯಗಳನ್ನು ಹೊಂದಿದೆ. ಹೊಸದುರ್ಗ, ಚಿಕ್ಕನಾಯಕನಹಳ್ಳಿ, ಅರಸೀಕೆರೆ,ಚನ್ನರಾಯಪಟ್ಟಣ, ತುರುವೇಕೆರೆ,ಹುಳಿಯಾರು ಹಾಸನ ಹೀಗೆ ಹಲವಾರು ನಗರ ಪ್ರದೇಶದ ಜನ,ಗ್ರಾಮೀಣ ಭಾಗದ ಜನರು ಮತ್ತು ವಿದ್ಯಾರ್ಥಿಗಳು ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ತಿಪಟೂರು…
ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತೋತ್ಸವ ಹಾಗೂ ಹುಟ್ಟುಹಬ್ಬ ಆಚರಣೆ
ತಿಪಟೂರು: ಬಸವ ಜಯಂತಿ ಅಂಗವಾಗಿ,ತಿಪಟೂರು ತಾಲೂಕು ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷರು ಹಾಗೂ ಪತ್ರಕರ್ತರಾದ ಬಿ.ಟಿ. ಕುಮಾರ್ ಹುಟ್ಟು ಹಬ್ಬದ ಅಂಗವಾಗಿ ಇವರ,ಸೇವಾರ್ಥದಲ್ಲಿ ಕ ಲಾಕೃತಿ (ರಿ,) ತಿಪಟೂರು ಇವರ ವತಿಯಿಂದ ನಿತ್ಯ ನಡೆಯುತ್ತಿರುವ ಅನ್ನಪೂರ್ಣ ಸಂಚಾರಿ ಅನ್ನ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿದ್ದು, ತಿಪಟೂರು ನಗರದ ಕೆ.ಆರ್. ಬಡಾವಣೆಯಲ್ಲಿರುವ ಯಶಸ್ವಿನಿ ವೃದ್ಧಾಶ್ರಮ ಮತ್ತು ಕೋಟೆಯ ಶ್ರೀ ಶಾರದಾಂಬ ಹಿರಿಯರ ಮನೆ (ವೃದ್ಧಾಶ್ರಮಕ್ಕೆ) ಊಟದ ವ್ಯವಸ್ಥೆ ಮಾಡಿ,ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಜಗಜ್ಯೋತಿ ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ,ವಿಶೇಷವಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರದಿಂದ ಗ್ರಾಮೀಣ ಭಾಗದ ಬಡ ಜನತೆಗೆ ಅನುಕೂಲ ಪಿ ಎಸ್ ಐ ಶಿವಕುಮಾರ್
ಗ್ರಾಮಾಂತರದ ಭಾಗದ ಜನರಿಗೆ ಇಂತಹ ವಿಶೇಷ ಉಚಿತ ಆರೋಗ್ಯ ತಪಾಸಣಾ ಶಿಬಿರ ಮಾಡುವುದರಿಂದ ಹೆಚ್ಚು ಅನುಕೂಲವಾಗಲಿದೆ ಎಂದು ಸಿ ಎಸ್ ಪುರ ಪೊಲೀಸ್ ಠಾಣೆಯ ಪಿ. ಎಸ್ ಐ ಶಿವಕುಮಾರ್ ತಿಳಿಸಿದರು. ಗುಬ್ಬಿ ತಾಲೂಕಿನ ಸಿ ಎಸ್ ಪುರ ಗ್ರಾಮದಲ್ಲಿ ಚಾಲುಕ್ಯ ಆಸ್ಪತ್ರೆ, ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ, ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಮಾಡಲಾಗಿತ್ತು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಚಾಲುಕ್ಯ ಆಸ್ಪತ್ರೆಯು ಇದುವರೆಗೂ ನೂರಾರು ಉಚಿತ ಆರೋಗ್ಯ…
ಎಸ್.ಎಸ್.ಎಲ್.ಸಿ. ಪರೀಕ್ಷೆ: ಸೇಂಟ್ ಮೇರಿಸ್ ಪ್ರೌಢಶಾಲೆಗೆ ಶೇ.100 ಫಲಿತಾಂಶ
ತುರುವೇಕೆರೆ: ತಾಲ್ಲೂಕಿನ ದೊಡ್ಡೇನಹಳ್ಳಿಯ ಸೇಂಟ್ ಮೇರಿಸ್ ಪ್ರೌಢಶಾಲೆಯು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ 100 ರಷ್ಟು ಪಲಿತಾಂಶ ಪಡೆದಿದೆ ಎಂದು ಶಾಲೆಯ ನೂತನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ಎಂ.ಎಸ್. ಗಂಗಾಧರ ದೇವರಮನೆ ತಿಳಿಸಿದರು. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪರೀಕ್ಷೆಯಲ್ಲಿ ಅಕ್ರಮ ತಡೆಗಟ್ಟುವ ಹಾಗೂ ಪಾರದರ್ಶಕತೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವ ಹೊಸ ತೀರ್ಮಾನ ಕೈಗೊಂಡಿದ್ದು, ಪರೀಕ್ಷಾ ಫಲಿತಾಂಶ ಎಲ್ಲರ ಗಮನ ಸೆಳೆದಿತ್ತು. ಮೊದಲ ಬಾರಿ ಸಿಸಿ ಕ್ಯಾಮೆರಾ ಕಣ್ಣಿನ ಕಣ್ಗಾವಲಿನಲ್ಲಿ ಪರೀಕ್ಷೆ…
ಗುಬ್ಬಿ ಬ್ಲಾಕ್ ಕಾಂಗ್ರೇಸ್ ನ ಪರಿಶಿಷ್ಟ ಪಂಗಡದ (ಎಸ್.ಟಿ) ಅಧ್ಯಕ್ಷರಾಗಿ ನರಸಿಂಹಮೂರ್ತಿ.ಎ ನೇಮಕ
ಗುಬ್ಬಿ : ತಾಲ್ಲೂಕು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ನರಸಿಂಹಮೂರ್ತಿ.ಎ ರವರನ್ನು ಗುಬ್ಬಿ ಬ್ಲಾಕ್ ಪರಿಶಿಷ್ಟ ಪಂಗಡದ (ಎಸ್.ಟಿ) ಅಧ್ಯಕ್ಷರಾಗಿ ನೇಮಕ ಮಾಡಿರುವ ಹಿನ್ನಲೆಯಲ್ಲಿ ಪಟ್ಟಣದ ನಾಯಕ ಸಮುದಾಯದವರು ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ನರಸಿಂಹಮೂರ್ತಿ ಯವರು ಜನಪ್ರಿಯ ಶಾಸಕ ಹಾಗೂ ಮಾಜಿ ಸಚಿವರಾದ ಎಸ್. ಆರ್ ಶ್ರೀನಿವಾಸ್ ರವರು ಸಂಘಟನಾ ಶಕ್ತಿಯನ್ನು ಗುರುತಿಸಿ ನನಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುವ ಜೊತೆಗೆ ಸಮುದಾಯದ ಶ್ರೇಯೋಭಿವೃದ್ಧಿಗೆ ಶ್ರಮಿಸಿ ಅಗತ್ಯವಿರುವ ಸೌಕರ್ಯಗಳನ್ನು ಪಡೆದುಕೊಳ್ಳಲು ಪ್ರಯತ್ನಿಸುವೆ ಎಂದ ಅವರು ಮುಂದಿನ…
ಶುಕ್ರವಾರ ರಾತ್ರಿ ಸುರಿದ ಮಳೆಯಿಂದಾಗಿ ತಾಲೂಕಿನ ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಗುಬ್ಬಿ: ತಾಲೂಕಿನಲ್ಲಿ ಶುಕ್ರವಾರ ರಾತ್ರಿ ಗುಡುಗು ,ಮಿಂಚು ,ಗಾಳಿಯಿಂದ ಕೂಡಿದ ಹದವಾದ ಮಳೆ ಬಿದ್ದಿರುವುದು ರೈತರಲ್ಲಿ ಹರ್ಷವನ್ನು ಉಂಟುಮಾಡಿದೆ. ಮುಂಗಾರು ಪ್ರಾರಂಭವಾಗಿ ಹಲವಾರು ತಿಂಗಳುಗಳಿಂದ ಮಳೆಇಲ್ಲದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ತಾಲೂಕಿನಲ್ಲಿ ಬರದ ತೀವ್ರತೆ ಹೆಚ್ಚಾಗಿದ್ದು ರೈತರು ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.ಪ್ರಾಣಿ ಪಕ್ಷಿಗಳ ಕುಡಿಯುವ ನೀರಿಗೂ ಕಷ್ಟ ಎದುರಾಗಿತ್ತು. ಭರಣಿ ಮಳೆಯ ಕೊನೆಯ ದಿನವಾದ ಶುಕ್ರವಾರ ರಾತ್ರಿ ಸುರಿದ ಮಳೆಯಿಂದಾಗಿ ತಾಲೂಕಿನ ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ರಾತ್ರಿ ಬೀಸಿದ ಮಳೆ ಗಾಳಿಯಿಂದಾಗಿ…