
ಜಿಲ್ಲಾ ಸುದ್ದಿಗಳು
ತಿಂಗಳಲ್ಲಿ ಒಳಮೀಸಲಾತಿ ಜಾರಿ ಮಾಡದಿದ್ದರೆ ಅಸಹಕಾರ ಚಳವಳಿ
ಆ.1ರಿಂದ ರಾಜ್ಯಾದ್ಯಂತ ಉಗ್ರ ಹೋರಾಟ: ಗೋವಿಂದ ಕಾರಜೋಳ ತುಮಕೂರು: ರಾಜ್ಯ ಸರ್ಕಾರ ಈ ತಿಂಗಳ ಅಂತ್ಯದೊಳಗೆ ಪರಿಶಿಷ್ಟ ಜಾತಿಗಳ ಜನಸಂಖ್ಯೆ ಆಧಾರದಲ್ಲಿ ಒಳಮೀಸಲಾತಿ ಜಾರಿಗೊಳಿಸದಿದ್ದರೆ ಆಗಸ್ಟ್ 1ರಿಂದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗುವುದು. ಆಗಸ್ಟ್ 15ರ ನಂತರ ಸರ್ಕಾರದ ವಿರುದ್ಧ ಅಸಹಕಾರ ಚಳುವಳಿ ನಡೆಸಲಾಗುವುದು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಶನಿವಾರ ನಗರದಲ್ಲಿ ನಡೆದ ಮಾದಿಗ ಸಮಾಜದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳಮೀಸಲಾತಿ ಜಾರಿ ಮಾಡಲು ಸಿದ್ದರಾಮಯ್ಯ ಸರ್ಕಾರಕ್ಕೆ…
ಸರ್ಕಾರಿ ಶಾಲೆಗೆ ಉಚಿತ ಕ್ರೀಡಾ ಸಮವಸ್ತ್ರವಿತರಣೆ
ತಿಪಟೂರು: ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕರಡಾಳು ಸಂತೆ ಮೈದಾನ ಶಾಲೆಯ ಎಲ್ಲಾ ಮಕ್ಕಳಿಗೆ ತಿಪಟೂರಿನ ವಂದನ ಟೆಕ್ಸ್ ಟೋರಿಯಂ ಮಾಲೀಕರಾದ ಶ್ರೀಯುತ ಪ್ರಕಾಶ್ ಮತ್ತು ಸಹೋದರರು ಅವರ ತಂದೆಯವರಾದ ಶ್ರೀಯುತ ನೇಮಿನಾಥ್ ಜೈನ್ ರವರ ಸ್ಮರಣಾರ್ಥ ಉಚಿತ ಕ್ರೀಡಾ ಸಮವಸ್ತ್ರ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಕಾಶ್ ರವರು ಮಕ್ಕಳು ಸರ್ಕಾರ ಹಾಗೂ ಧಾನಿಗಳು ನೀಡುತ್ತಿರುವ ಪ್ರೋತ್ಸಾಹದಾಯಕ ಯೋಜನೆಗಳ ಸದುಪಯೋಗಪಡಿಸಿಕೊಂಡು ಚೆನ್ನಾಗಿ ಓದಿ ಮುಂದೆ ನೀವು ಓದಿದ ಶಾಲೆಗೆ ,ನಿಮ್ಮ…
ಶಾಸಕರು ಗುತ್ತಿಗೆದಾರರ ಬಳಿ ಲಂಚ ಪಡೆದಿದ್ದರೆ ರಾಜಕೀಯ ನಿವೃತ್ತಿ. ವೆಂಕಟೇಶ್.
ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಯಾರಾದರೂ ಗುತ್ತಿಗೆದಾರರ ಬಳಿ ಕಮಿಷನ್ ಅಥವಾ ಲಂಚವನ್ನು ಪಡೆದಿದ್ದರೆ ಶಾಸಕರು ರಾಜಕೀಯ ನಿವೃತ್ತಿ ಪಡೆಯಲಿದ್ದಾರೆ ಎಂದು ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷ ವೆಂಕಟೇಶ್ ಬಿಜೆಪಿ ಮುಖಂಡ ಎಸ್ ಡಿ ದಿಲೀಪ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಪಟ್ಟಣದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಹೇಮಾವತಿ ಲಿಂಕ್ ಕೆನಲ್ ಕಾಮಗಾರಿ ಗುತ್ತಿಗೆದಾರರಿಂದ ಲಂಚವನ್ನು ಪಡೆದು ಮೋಜು ಮಸ್ತಿ ಮಾಡಲು ಅಮೆರಿಕಕ್ಕೆ ತೆರಳಿದ್ದಾರೆ ಎಂದು ಆರೋಪ ಮಾಡುತ್ತಿರುವ…
ಉಪ ನೊಂದನಾಧಿಕಾರಿಗಳ ವಿರುದ್ಧ ರೈತ ಸಂಘದಿಂದ ಪ್ರತಿಭಟನೆ
ಪಾವಗಡ : ತಾಲ್ಲೂಕು ಉಪ ನೋಂದಣಾಧಿಕಾರಿಗಳು ಜನರಲ್ಲಿ ಹಾಗೂ ರೈತರಲ್ಲಿ ಉತ್ತಮ ಬಾಂಧವ್ಯವಿಲ್ಲದೇ ನೋಂದಣಿಗೆ ಬರುವ ಸಾರ್ವಜನಿಕರನ್ನು ವಿನಾಕಾರಣ ಅಲೆಸುತ್ತಿದ್ದಾರೆ ಎಂದು ತಾಲೂಕು ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ತಾಲೂಕು ರೈತ ಸಂಘದ ಅಧ್ಯಕ್ಷ ನರಸಿಂಹ ರೆಡ್ಡಿ ಮಾತನಾಡಿ ತಾಲೂಕು ನೊಂದಣಿ ಅಧಿಕಾರಿ ರಾಧಮ್ಮ ಇಲ್ಲಸಲ್ಲದ ಕಾನೂನುಗಳನ್ನು ಮುಂದಿಟ್ಟುಕೊಂಡು ಸಾರ್ವಜನಿಕರಿಗೆ ಕೆಲಸವನ್ನು ಮಾಡಿಕೊಡದೆ ಆಲಿಸುತ್ತಿದ್ದಾರೆ ಎಂದು ಆರೋಪಿಸಿದರು. ಕಾನೂನು ರೀತ್ಯಾ ನೋಂದಣಿ ಹಣವನ್ನು ಕಟ್ಟಿದರೂ ಕಚೇರಿ ಮಾಮೂಲು ಕೊಡಬೇಕೆಂದು ಲಂಚಿದ ಹಣಕ್ಕಾಗಿ ಸಾಯಂಕಾಲದವರೆಗೂ…
ಅಂಬುಲೆನ್ಸ್ ಡ್ರೈವರ್ ಮಗಳ ಅದ್ಬುತ ಸಾಧನೆ
ಅಂಬುಲೆನ್ಸ್ ಡ್ರೈವರ್ ಮಗಳ ಅದ್ಬುತ ಸಾಧನೆ ಎಂ.ಎಸ್ಸಿ ಪುಡ್ ಅಂಡ್ ನ್ಯೂಟ್ರೀಷನ್ ವಿಭಾಗದಲ್ಲಿ ಚಿನ್ನದ ಪದಕ ಪಡೆದ ಜಯಶ್ರೀ ಎನ್. ಆರ್. ತುಮಕೂರು: ತುಮಕೂರು ವಿಶ್ವವಿದ್ಯಾನಿ¯ದಿಂದ ನಡೆದ 18ನೇ ಘಟಿಕೋತ್ಸವದಲ್ಲಿ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ನರಗನಹಳ್ಳಿ ಗ್ರಾಮದ ಶೋಭ ಎನ್. ಮತ್ತು ರಂಗಸ್ವಾಮಿ ಸಿ.ಎನ್. ದಂಪತಿಯ ಮಗಳು ಜಯಶ್ರೀ ಎನ್.ಆರ್, ಎಂ.ಎಸ್ಸಿ ಪುಡ್ ಅಂಡ್ ನ್ಯೂಟ್ರೀಷನ್ ವಿಷಯದಲಿ ವಿಶ್ವ ವಿದ್ಯಾನಿಲಯಕ್ಕೆ ಪ್ರಥಮ ರ್ಯಾಂಕ್ ಪಡೆದು ಕರ್ನಾಟಕ ರಾಜ್ಯಪಾಲರಾದ ತ್ಯಾವರ್ ಚಂದ್ ಗೆಹಲ್ಲೋಟ್ ರವರಿಂದ ಚಿನ್ನದ ಪದಕ…
ನಕಲಿ ದಾಖಲೆಗಳನ್ನು ಸೃಷ್ಟಿಸುವವರ ವಿರುದ್ಧ ಕಾನೂನು ಕ್ರಮಕ್ಕೆ ಟಿ.ಬಿ.ಜಯಚಂದ್ರ. ಸೂಚನೆ
ತುಮಕೂರು: ಸರ್ಕಾರಿ ಜಮೀನಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸುವ ಅಧಿಕಾರಿ-ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿರಾ ಶಾಸಕ ಹಾಗೂ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ಸೂಚಿಸಿದರು. ಶಿರಾ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕಂದಾಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಖಾಲಿ ಇರುವ ಸರ್ಕಾರಿ ಜಾಗವನ್ನು ಲೂಟಿ ಮಾಡುತ್ತಿರುವವರನ್ನು ಮಟ್ಟ ಹಾಕಬೇಕು. ಮಧುಗಿರಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಕೆಲವು ಅಧಿಕಾರಿ/ಸಿಬ್ಬಂದಿಗಳು ನಕಲಿ…
ಸಿದ್ಧಾರ್ಥ ರೇಡಿಯೋ ಕೇಂದ್ರಕ್ಕೆ ಬೆಂಗಳೂರಿನ ಸೇಂಟ್ ಪೌಲ್ಸ್ ಕಾಲೇಜಿನ ವಿದ್ಯಾರ್ಥಿಗಳು ಭೇಟಿ
ತುಮಕೂರು: ನಗರದ ಎಸ್ಎಸ್ಐಟಿ ಕ್ಯಾಂಪಸ್ನಲ್ಲಿರುವ ಶ್ರೀ ಸಿದ್ಧಾರ್ಥ ಮಾಧ್ಯಮ ಕೇಂದ್ರದ ರೇಡಿಯೋ ಸಿದ್ಧಾರ್ಥ 90.8 ಸಿಆರಎಸ್ಗೆ ಬುಧವಾರ(ಜುಲೈ-2) ಶೈಕ್ಷಣಿಕ ಭೇಟಿ ನೀಡಿ, ನಿರೂಪಣೆ ಮತ್ತು ನಿರ್ಮಾಣ ಕುರಿತ ಒಂದು ದಿನ ಕಾರ್ಯಾಗಾರದಲ್ಲಿ ಪಾಲ್ಗೊಂಡರು. ಮಾಧ್ಯಮ ವಿದ್ಯಾರ್ಥಿಗಳಿಗೆ ಬೇಕಾದ ಆಧುನಿಕಸೌಲಭ್ಯಗಳನ್ನು ಹೊಂದಿರುವ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಾರ್ಯಗಳನ್ನು ಮಾಡುವ ಕುರಿತು ತಜ್ಞ ಪ್ರಾಧ್ಯಾಪಕರಿಂದ ತರಬೇತಿ ನೀಡಲಾಯಿತು. ರೇಡಿಯೋ ಕುರಿತಾಗಿ ನಿರ್ಮಾಣ ಪೂರ್ವ, ನಿರ್ಮಾಣ ಮತ್ತು ನಿರ್ಮಾಣೋತ್ತರ ಕುರಿತು ಮಾಹಿತಿ ಪಡೆದುಕೊಂಡರು. ರೇಡಿಯೋ…
ಮಾದಕ ವ್ಯಸನದ ಹಿಂದೆ ಬಿದ್ದಿರುವ ಯುವ ಸಮೂಹವನ್ನು ರಕ್ಷಿಸುವಂತೆ: ತುಮಕೂರಿನಲ್ಲಿ ಜಾಗೃತಿ ಜಾಥಾ
ತುಮಕೂರು: ಇಂದಿನ ಯುವ ಜನತೆಯು ಮೋಜು ಮಸ್ತಿ ತಡರಾತ್ರಿಯ ಪಾರ್ಟಿ ಎಂದು ಜೀವನ ಶೈಲಿಯನ್ನ ಬದಲಾಯಿಸಿಕೊಂಡಿದ್ದಾರೆ ಹದಿಹರೆಯದ ವಯಸ್ಸಿನಲ್ಲಿ ಮಾದಕ ವಸ್ತುಗಳಿಗೆ ದಾಸರಾಗಿ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಸಮಾಜದ ಭವಿಷ್ಯ ರೂಪಿಸುವ ಇಂದಿನ ಯುವ ಜನತೆ ಮಾದಕ ವ್ಯಸನದ ಹಿಂದೆ ಬಿದ್ದು ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದು ಇದರಿಂದ ಈ ಯುವ ಸಮೂಹವನ್ನ ರಕ್ಷಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಸೈಕಿಯಾಟ್ರಿಕ್ ನಸಿರ್ಂಗ್ ವಿಭಾಗದ ವಿದ್ಯಾರ್ಥಿಗಳು ನಗರದ…
ಪತ್ರಕರ್ತರು ವಸ್ತುನಿಷ್ಠ ಮತ್ತು ಅನ್ವೇಷಣಾ ಪತ್ರಿಕೋದ್ಯಮವನ್ನು ಅವಲಂಬಿಸಬೇಕು: ಚೀ.ನಿ.ಪುರುಷೋತ್ತಮ್
ತುಮಕೂರು: ಪತ್ರಿಕೋದ್ಯಮ ಇಂದು ಕಾವಲು ದಾರಿಯಲ್ಲಿದ್ದು ನೈಜ ಮತ್ತು ವಸ್ತು ನಿಷ್ಠ ಸುದ್ದಿಗಳು ಕಣ್ಮರೆಯಾಗುತ್ತಿವೆ ಇಂದು ತೇಜೋವದೆಯಂತಹ ಸುದ್ದಿಗಳು ಹೆಚ್ಚಾಗುತ್ತಿದ್ದು ಪತ್ರಕರ್ತರು ವಸ್ತುನಿಷ್ಠ ಮತ್ತು ಅನ್ವೇಷಣಾತ್ಮಕ ಸುದ್ದಿಗಳನ್ನು ನೀಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಚಿ.ನಿ.ಪುರುಷೋತ್ತಮ್ ಅವರು ತಿಳಿಸಿದರು. ಎಸ್.ಎಸ್.ಐ.ಟಿ ಕ್ಯಾಂಪಸ್ ನ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ರೇಡಿಯೋ ಸಿದ್ದಾರ್ಥ 90.8 ಬಾನುಲಿ ಕೇಂದ್ರದಿಂದ ಮಂಗಳವಾರ ಆಯೋಜನೆ ಮಾಡಲಾಗಿದ್ದ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಮುಖ್ಯ ಅತಿಥಿಗಳಾಗಿ ಭಾಗವಹಿಸಿ…
ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ನಿಯಮಗಳನ್ನು ಪಾಲಿಸಲು ಮನವಿ
ತುಮಕೂರು: ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸಾರ್ವಜನಿಕರು ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ನರಸಿಂಹಮೂರ್ತಿ ಮನವಿ ಮಾಡಿದರು. ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ-2025ರ ಅಂಗವಾಗಿ ನಗರದ ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಅವರ ಕಚೇರಿ ಆವರಣದಲ್ಲಿಂದು ಏರ್ಪಡಿಸಿದ್ದ ವಿದ್ಯುತ್ ಸುರಕ್ಷತಾ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಅರಿವಿಲ್ಲದೆ ಹಲವಾರು ವಿದ್ಯುತ್ ಅವಘಡಗಳು ಸಂಭವಿಸುತ್ತವೆ. ಈ ನಿಟ್ಟಿನಲ್ಲಿ ವಿದ್ಯುತ್ ಬಳಕೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಈ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯುತ್…