ಧರ್ಮಸ್ಥಳ ಸಂಘಕ್ಕೆ 4500ಕೋಟಿ ವಿತರಣೆ-ಎಸ್.ಬಿ.ಐ.ನಿರ್ದೇಶಕ ಕೆ.ಎನ್.ವಾದಿರಾಜ

ತುಮಕೂರು: ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಎಸ್.ಬಿ.ಐ.ತುಮಕೂರು ಜಿಲ್ಲೆಯಲ್ಲಿ ಸುಮಾರು 4500ಕೋಟಿ ಸಾಲವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮೂಲಕ ನೀಡಿದ್ದೇವೆ,ಕೇವಲ ಮಹಿಳೆಯರೇ ಇರುವ ಈ ಸಂಘದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಧರ್ಮಸ್ಥಳ ಸಂಘವು ಆಯ್ಕೆ ಮಾಡಿ 1 ಲಕ್ಷದಿಂದ 5 ಲಕ್ಷದ ವರೆಗೆ ಸಾಲ ನೀಡುತ್ತಿದೆ,ಈ ಸಾಲಕ್ಕೆ ಧರ್ಮಸ್ಥಳದ ಪೂಜ್ಯ ಡಾ||ಡಿ.ವೀರೇಂದ್ರಹೆಗ್ಗಡೆರವರು ಜಾಮೀನು ನೀಡಿದ್ದಾರೆ ಎಂದು ಎಸ್.ಬಿ.ಐ ಬ್ಯಾಂಕಿನ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಕೇಂದ್ರದ ನಿರ್ದೇಶಕ ಕೆ.ಎನ್.ವಾದಿರಾಜ ರವರು ಹೇಳಿದರು.     ಅವರು…

Read More

80ರ ದಶಕದ ಹೋರಾಟ ಮರೆತು, ಮನುವಾದಿಗಳ ಜೊತೆ ಕೈಜೋಡಿಸಿದ್ದೇವೆ : ಡಾ. ನಾಗಣ್ಣ ಆತಂಕ.

ತುಮಕೂರು : 80ರ ದಶಕದ ಹೋರಾಟಗಳನ್ನ ಮರೆತು ಡಾ.‌ ಬಿ.ಆರ್. ಅಂಬೇಡ್ಕರ್ ವಿಚಾರಧಾರೆಗಳಿಗೆ ವಿರುದ್ಧವಾಗಿರುವ ಮನುವಾದಿಗಳ ಜೊತೆ ಕೈಜೋಡಿಸಿರುವುದು ಬೇಸರ ಹಾಗೂ ಭಯ ಆಗ್ತಿರುವ ಸಂಗತಿಯಾಗಿದೆ ಎಂದು ಗೃಹ ಸಚಿವರ ಕರ್ತವ್ಯ ವಿಶೇಷಾಧಿಕಾರಿ ಡಾ. ನಾಗಣ್ಣ ಆತಂಕ ವ್ಯಕ್ತಪಡಿಸಿದರು.     ನಗರದ ರವೀಂದ್ರ ಕಲಾಗ್ಯಾಲರಿಯಲ್ಲಿ ಅರುಣೋದಯ ಸಹಕಾರ ಸಂಘ ಆಯೋಜನೆ ಮಾಡಿದ್ದಂತಹ 5ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.     80ರ ದಶಕದಲ್ಲಿ ಅನ್ಯಾಯ ಹಾಗೂ ಅಸ್ಪೃಶ್ಯತೆ ನಿವಾರಣೆಗಾಗಿ ದೊಡ್ಡ ಹೋರಾಟ…

Read More

ಪವಾಗಡ ತಾಲೂಕಿನ ವೈ ಎನ್ ಹೊಸಕೋಟೆಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೃದಯ ವಿದ್ರಾವಕ ಘಟನೆ ಪಾವಗಡ:-ಮೃತದೇಹವನ್ನು ಸಾಗಿಸಲು ಆಂಬುಲೆನ್ಸ್ ಇಲ್ಲದ ಕಾರಣ ಮೃತಪಟ್ಟಿರುವ ವೃದ್ಧನ ಮೃತದೇಹವನ್ನು ತಮ್ಮೂರಿಗೆ ದ್ವಿಚಕ್ರ ವಾಹನದಲ್ಲಿ ತಮ್ಮ ಮಕ್ಕಳು ತೆಗೆದುಕೊಂಡು ಹೋದ ಹೃದಯವಿದ್ರಾವಕ ಘಟನೆ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ  ಬುಧವಾರ ಮಧ್ಯಾಹ್ನ ಸುಮಾರು ಒಂದು ಗಂಟೆಯಲ್ಲಿ ಜರುಗಿದೆ   ವಯೋಸಹಜ ಕಾಯಿಲೆಯಿಂದ ದಳವಾಯಿ ಹಳ್ಳಿ ಗ್ರಾಮದ ಗುಡಗಲ್ ಹೊನ್ನೂರಪ್ಪ ಎನ್ನುವ 80 ವರ್ಷದ ವೃದ್ಧ …

Read More

ಮಾನವ ಸರಪಳಿ ಕಾರ್ಯಕ್ರಮ ಅಭೂತಪೂರ್ವ ಯಶಸ್ವಿ – ಜಿ. ಪರಮೇಶ್ವರ

ತುಮಕೂರು: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಪ್ರಜಾ ಪ್ರಭುತ್ವ ಮತ್ತು ಸಂವಿಧಾನದ ಪ್ರಾಮುಖ್ಯತೆಯನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ಇಂದು ಜಿಲ್ಲೆಯ ಶಿರಾ ತಾಲೂಕು ತಾವರೆಕೆರೆ ಗ್ರಾಮ ಪಂಚಾಯಿತಿ ಉಜ್ಜನಕುಂಟೆ ಗ್ರಾಮದಿಂದ ತುಮಕೂರು ತಾಲೂಕು ಹಿರೇಹಳ್ಳಿ ಗ್ರಾಮ ಪಂಚಾಯಿತಿ ನಂದಿಹಳ್ಳಿ ಗ್ರಾಮದವರೆಗೆ ನಿರ್ಮಿಸಲಾಗಿದ್ದ 90 ಕಿ.ಮೀ. ಉದ್ದದ ಮಾನವ ಸರಪಳಿಯು ಅಭೂತಪೂರ್ವ ಯಶಸ್ಸನ್ನು ಕಂಡಿದೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಜಿ. ಪರಮೇಶ್ವರ ತಿಳಿಸಿದರು. ನಗರದ ಪರಿವೀಕ್ಷಣಾ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

Read More

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಯಶಸ್ವಿಗೆ ಪೂರ್ವಭಾವಿ ಸಭೆ

ಗುಬ್ಬಿ ಸುದ್ದಿ ಸೆ.15 ರ ಭಾನುವಾರದಂದು ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿರುವ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮದ ಹಿನ್ನೆಲೆ ಇಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಹಶೀಲ್ದಾರ್ ಆರತಿ ಬಿ. ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.     ತಹಶೀಲ್ದಾರ್ ಆರತಿ ಬಿ. ಮಾತನಾಡಿ ಪ್ರಜಾ ಪ್ರಭುತ್ವವು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಭದ್ರ ಬುನಾದಿ ಮೇಲೆ ನಿಂತಿದೆ. ಈ ಭದ್ರ ಬುನಾದಿ ಬಲಿಷ್ಠವಾಗದಿದ್ದರೆ ಪ್ರಜಾಪ್ರಭುತ್ವ ಬಲಿಷ್ಠವಾಗಲಾರದು. ಆದ್ದರಿಂದ ಸಮಾನತೆ, ಸ್ವಾಂತ್ರಂತ್ರ್ಯ ಭ್ರಾತೃತ್ವದ ಆದರ್ಶಗಳು…

Read More

ಸಾಲದ ಬಡ್ಡಿಯ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣನಾದ ವ್ಯಕ್ತಿಯ ಬಂಧನ

ದಿನಾಂಕ:-05/09/2024 ರಂದು ಮಧ್ಯ ರಾತ್ರಿ ವೇಳೆಯಲ್ಲಿ ಗುಬ್ಬಿ ತಾಲ್ಲೂಕು ಹೇರೂರು ಗ್ರಾಮದ ಸಿ.ಐ.ಟಿ ಕಾಲೇಜಿನ ಮುಂಭಾಗವಿರುವ ಕೇಕ್ ಹೌಸ್ ನಲ್ಲಿ ಬಸವರಾಜು ಬಿನ್ ನಂಜೇಗೌಡ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದು. ನಂತರ ಮೃತ ಬಸವರಾಜು ರವರ ಮೊಬೈಲ್ ನ್ನು ಪರಿಶೀಲಿಸಲಾಗಿ ಆತ್ಮಹತ್ಯೆಗೆ ಕಾರಣ ಹೇರೂರು ಗ್ರಾಮದ ವಾಸಿಯಾದ ನಾಗರಾಜು @ ಬಡ್ಡಿ ನಾಗ ಈತನು ತಾನು ಕೊಟ್ಟ ಸಾಲಕ್ಕಾಗಿ ಬಸವರಾಜು ರವರಿಂದ ಚೆಕ್ ಗಳನ್ನು ಪಡೆದುಕೊಂಡಿದ್ದು, ಚೆಕ್ ಗಳನ್ನು ವಾಪಸ್ ಕೊಡುವಂತೆ ಕೇಳಿದಾಗ ಬಸವರಾಜು ರವರನ್ನು ಬೆದರಿಸಿ ಆತ್ಮಹತ್ಯೆ…

Read More

ಯಶಸ್ಸಿಗೆ ಹಠದ ಹಸಿವು ಅಗತ್ಯ : ಸಿಇಓ ಜಿ.ಪ್ರಭು

ತುಮಕೂರು: ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಏಕಾಗ್ರತೆ, ನಿರಂತರ ಪ್ರಯತ್ನದ ಜೊತೆಗೆ ಹಠದ ಹಸಿವು ಅಗತ್ಯವೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಕ್ಕಳಿಗೆ ಕಿವಿ ಮಾತು ಹೇಳಿದರು.     ಜಿಲ್ಲೆಯ ಕ್ರೀಡಾ ವಸತಿ ಶಾಲಾ ಕ್ರೀಡಾಪಟುಗಳಿಗಾಗಿ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಕ್ರೀಡಾ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಿರಂತರ ಪ್ರಯತ್ನದಿಂದ ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯ ಎಂದು ಹೇಳಿದರು.      …

Read More

ರಸ್ತೆ ಅಪಘಾತ ತಾಯಿ ಮಗಳ ಸಾವು.

ತಿಪಟೂರು. ಪದೇ ಪದೇ ಹೆಚ್ಚುತ್ತಿರುವ ಅಪಘಾತಗಳಿಂದ ರೋಸಿ ಹೋದ ಗ್ರಾಮಸ್ಥರಿಂದ ಶವ ತೆಗೆಯಲು ಬಿಡದೆ ರಸ್ತೆಯಲ್ಲಿ ಪ್ರತಿಭಟನೆ ಮಾಡಿದ ಘಟನೆ ವರದಿಯಾಗಿದೆ.   ಬೈಪಾಸ್ ಗೆ ಹೊಂದಿಕೊಂಡಂತಿರುವ ರಾಮಶೆಟ್ಟಿ ಹಳ್ಳಿ ಗ್ರಾಮದ ಕಮಲಮ್ಮ (35) ವೀಣಾ (14) ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು.   ಇಂದು ಬೆಳಗ್ಗೆ 8:50 ರ ವೇಳೆಯಲ್ಲಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ,ತಾಯಿ ಮಗಳ ಹಿಂಬದಿಯಿಂದ ಬಂದ ಗಾರ್ಮೆಂಟ್ ನಾ ಮಿನಿ ಬಸ್ (kA-05 AD-4275) ನಂಬರ್ ನ ಗಾಡಿಯು ಅತಿ ವೇಗವಾಗಿ…

Read More

ಯೂಜುಡಿ ಮಿಶ್ರಿತ ನೀರು ಜನರ ಹೊಟ್ಟೆ ಸೇರುತ್ತಿದೆ.

ತಿಪಟೂರು. ತಿಪಟೂರು ಮತ್ತು ಅರಸೀಕೆರೆ ಪಟ್ಟಣಕ್ಕೆ ಹೇಮಾವತಿ ನಾಲೆಯಿಂದ ಕುಡಿಯುವ ನೀರು ಸರಬರಾಜು ಯೋಜನೆ ಅಡಿ 1993 ನೇ ಇಸವಿಯಲ್ಲಿ ಈಚನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ, ಈಚನೂರು ಗ್ರಾಮದ ಸರ್ವೆ ನಂಬರ್ 65 ರ,338 ಎಕರೆ ವಿಸ್ತೀರ್ಣವುಳ್ಳ ಈಚನೂರು ಕೆರೆಗೆ ಹೇಮಾವತಿ ನೀರು ಹರಿಸಲಾಗುತ್ತಿದೆ.     ಈಚನೂರು ಕೆರೆಯಿಂದ ತಿಪಟೂರು ನಗರಕ್ಕೆ ಕುಡಿಯುವ ನೀರಿನ ಸಲುವಾಗಿ ಹೇಮಾವತಿ ನೀರನ್ನು ಬಹಳಷ್ಟು ವರ್ಷಗಳಿಂದ ಸರಬರಾಜು ಮಾಡಲಾಗುತ್ತಿದ್ದು,ಈಚನೂರು ಕೆರೆಯ ಪಂಪ್ ಹೌಸ್ ಅಲ್ಲಿ 40 ಹೆಚ್ ಪಿ ಯ…

Read More

ಸೆ.15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ 90 ಕಿ.ಮೀ. ಮಾನವ ಸರಪಳಿ

ತುಮಕೂರು : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ 15ರಂದು ಜಿಲ್ಲೆಯ ಶಿರಾ ತಾಲೂಕು ತಾವರೆಕೆರೆ ಗ್ರಾಮ ಪಂಚಾಯಿತಿ ಉಜ್ಜನಕುಂಟೆ ಗ್ರಾಮದಿಂದ ತುಮಕೂರು ತಾಲೂಕು ಹಿರೇಹಳ್ಳಿ ಗ್ರಾಮ ಪಂಚಾಯಿತಿ ನಂದಿಹಳ್ಳಿ ಗ್ರಾಮದವರೆಗೆ 90 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು ಪ್ರಜಾಪ್ರಭುತ್ವ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಬೇಕಾದರೆ ಪ್ರಜಾಪ್ರಭುತ್ವವಾದಿಗಳು ಈ ದಿನಾಚರಣೆಯಲ್ಲಿ ಪಾಲ್ಗೊಳ್ಳಬೇಕು.  …

Read More
error: Content is protected !!