
ಜಿಲ್ಲಾ ಸುದ್ದಿಗಳು
ಅಖಿಲ ಕರ್ನಾಟಕ ಡಾ ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ದಲಿತ ಕ್ರಿಯಾ ಸಮಿತಿಯ ವತಿಯಿಂದ ಬಾಬು ಜಗಜೀವನ್ ರಾಮ್ರವರ ಜನ್ಮದಿನೋತ್ಸವ ಆಚರಣೆ
ತುಮಕೂರು : ನಗರದಲ್ಲಿ ಡಾ|| ಬಾಬು ಜಗಜೀವನ್ ರಾಮ್ರವರ ಜನ್ಮದಿನೋತ್ಸವವನ್ನು ಅಖಿಲ ಕರ್ನಾಟಕ ಡಾ ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ದಲಿತ ಕ್ರಿಯಾ ಸಮಿತಿಯ ವತಿಯಿಂದ ಪುಷ್ಪನಮನ ಸಲ್ಲಿಸುವುದರ ಮೂಲಕ ಆಚರಿಸಲಾಯಿತು. ಅಖಿಲ ಭಾರತ ಡಾ|| ಬಿ.ಆರ್.ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ದಲಿತ ಕ್ರಿಯಾ ಸಮಿತಿಯ ಜಿಲ್ಲಾದ್ಯಕ್ಷರಾದ ಎನ್.ಕೆ.ನಿಧಿಕುಮಾರ್ ಪುಷ್ಪನಮನ ಸಲ್ಲಿಸಿ ಬಾಬು ಜಗಜೀವನ್ ರಾಮ್ರವರನ್ನು ಸ್ಮರಿಸುತ್ತಾ ಸ್ವಾತಂತ್ರ ಹೋರಾಟದ ಕುಲುಮೆಯಲ್ಲಿ ಪುಟಗೊಂಡು ದೇಶದ ಸಾರ್ವಜನಿಕ ಜೀವನವನ್ನು ಸಂಪದಗೊಳಿಸಿದ ಮುತ್ಸದ್ಧಿಗಳ ಸಣ್ಣ ಸಾಲಿನಲ್ಲಿ ಈಗಲೂ ನಮ್ಮೊಂದಿಗಿರುವ…
ತುಮಕೂರು ಜಿಲ್ಲಾಡಳಿತದಿಂದ ಬಾಬು ಜಗಜೀವನರಾಂ ಅವರ 118ನೇ ಜಯಂತಿ ಆಚರಣೆ
ತುಮಕೂರು: ನಗರದ ಕೋತಿ ತೋಪು ಪ್ರದೇಶದಲ್ಲಿರುವ ಡಾ: ಬಾಬು ಜಗಜೀವನರಾಂ ವೃತ್ತದ ಅಭಿವೃದ್ಧಿಗೆ ಈಗಾಗಲೇ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಬಾಬು ಜಗಜೀವನರಾಂ ಅವರ 118ನೇ ಜಯಂತಿ ಪ್ರಯುಕ್ತ ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಲಯದ ಸಭಾಂಗಣದಲ್ಲಿ ಶನಿವಾರ ಬಾಬೂಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ನಗರದ ಕೋತಿತೋಪು ಪ್ರದೇಶದಲ್ಲಿ ಬಾಬು ಜಗಜೀವನರಾಂ ವೃತ್ತವನ್ನು ಅಭಿವೃದ್ಧಿಪಡಿಸಲು ಪಾಲಿಕೆ ಈಗಾಗಲೇ ಕಾರ್ಯಗತವಾಗಿದೆ. ಬಾಬು ಜಗಜೀವನರಾಂ ಭವನ ನಿರ್ಮಾಣಕ್ಕೂ ಸರ್ಕಾರದಿಂದ ಉತ್ತಮ ಸ್ಪಂದನೆ ದೊರೆತಿದ್ದು,…
ಪೊಲೀಸಪ್ಪನ ಅಜಾಗುರುಕತೆಗೆ ಬಲಿಯಾದ ಎರಡು ಬಡಜೀವಗಳು
ಪೊಲೀಸಪ್ಪನ ಅಜಾಗುರುಕತೆಗೆ ಬಲಿಯಾದ ಎರಡು ಬಡಜೀವಗಳು ಇತ್ತೀಚೆಗೆ ಪೋಲೀಸ್ ಇಲಾಖೆಯಲ್ಲಿ ಬಡವರಿಗೆ ಒಂದು ಕಾನೂನು ಉಳ್ಳವರಿಗೆ ಒಂದು ಕಾನೂನು ಎಂಬಂತಾಗಿದೆ ಸರ್ವೆ ಸಾಮಾನ್ಯವಾಗಿ ಯಾವುದೇ ವಾಹನಗಳ ಅಪಘಾತ ಸಂಭವಿಸಿದಾಗ ಅಂದರೆ ದ್ವಿಚಕ್ರ ವಾಹನ ಮತ್ತು ಕಾರು ಲಾರಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದರೆ ದೊಡ್ಡ ವಾಹನಗಳ ಮೇಲೆ ಪ್ರಕರಣ ದಾಖಲಾಗುವುದನ್ನು ನಾವು ಕಂಡಿದ್ದೇವೆ ಆದರೆ ಇತ್ತೀಚಿಗೆ ತುಮಕೂರು ನಗರದಲ್ಲಿ ನಡೆದ ಪೊಲೀಸಪ್ಪನ ಖಾಸಗಿ ವಾಹನಕ್ಕೂ ದ್ವಿಚಕ್ರವಾಹನಕ್ಕೂ ಅಪಘಾತ ಸಂಭವಿಸಿ ದ್ವಿಚಕ್ರ ವಾಹನದ ಸಾವವರರು ಪೊಲೀಸ್ ಅಪ್ಪನ…
ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ ಪೊಲೀಸ್ ಇಲಾಖೆಯ ಪೌರಾಣಿಕ ನಾಟಕ
ತುಮಕೂರು ಜಿಲ್ಲೆ ಹಲವಾರು ಕ್ಷೇತ್ರದಲ್ಲಿ ಹೆಸರು ವಾಸಿಯದ ಜಿಲ್ಲೆ ಅದರಲ್ಲು ರಂಗಭೂಮಿಯ ತವರು ಎಂದು ಪ್ರಖ್ಯಾತವಾಗಿದೆ ವಿಶೇಷವಾಗಿ ತುಮಕೂರಿನ ಪೋಲೀಸ್ ಕವಾಯಿತು ಮೈದಾನದಲ್ಲಿ ಮಂಗಳವಾರ ರಾತ್ರಿ ಪೋಲೀಸರೇ ಅಭಿನಯಿಸಿದ ಕುರುಕ್ಷೇತ್ರ ನಾಟಕವು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ಹಲವಾರು ಒತ್ತಡಗಳ ನಡುವೆ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ನಮ್ಮಲ್ಲಿಯೂ ಸಹ ಕಲೆ ಇದೆ ಎಂಬುದನ್ನು ಬಹಳ ಅದ್ಭುತವಾಗಿ ಅಭಿನಯ ಮಾಡುವ ಮೂಲಕ ಕುರುಕ್ಷೇತ್ರ ಎಂಬ ಸುಂದರ ಪೌರಾಣಿಕ ನಾಟಕವನ್ನು ಅಭಿನಯಿಸಿದ್ದು ವಿಶೇಷವಾಗಿತ್ತು. ಈ ನಾಟಕದಲ್ಲಿ ಅಭಿಯಿಸಿದ ತುಮಕೂರು…
1.55 ಲಕ್ಷ ಬೆಲೆಬಾಳುವ ರಾಗಿ ಮೂಟೆ ಕಳ್ಳತನ ಮಾಡಿದ ಆರೋಪಿಗಳ ಬಂಧನ
ಗುಬ್ಬಿ ತಾಲ್ಲೂಕು ಹೇರೂರು ಗ್ರಾಮದ ರಾಜೇಶ್ ಬಿನ್ ಶಿವಣ್ಣ, ರವರು, ದಿನಾಂಕ 02/02/2025 ರಂದು ರಾತ್ರಿ ಯಾವುದೋ ಹೊತ್ತಿನಲ್ಲಿ ಯಾರೋ ಕಳ್ಳರು ತಮ್ಮ ಮನೆಯ ಮುಂದೆ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಇಟ್ಟಿದ್ದ ರಾಗಿಯನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ದೂರು ನೀಡಿದ್ದು ಈ ವಿಚಾರವಾಗಿ ಗುಬ್ಬಿ ಪೊಲೀಸ್ ಠಾಣಾ ಮೊ.ನಂ.35/2025 ಕಲಂ 303(2) ಬಿ.ಎನ್.ಎಸ್ ಪ್ರಕರಣ ದಾಖಲು ಮಾಡಿದ್ದು ತನಿಖೆಯನ್ನು ಕೈಗೊಂಡಿದ್ದು, ಬಾತ್ಮೀದಾರರಿಂದ ಬಂದ ಮಾಹಿತಿಯಂದೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರಕರಣದ ಆರೋಪಿಗಳಾದ ಗುಬ್ಬಿ ಟೌನ್ ವಾಸಿ ಪ್ರಶಾಂತ್…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣೆಗೂ ಮೊದಲು ಕೊಟ್ಟ ಭರವಸೆಯಂತೆ ಒಳಮೀಸಲಾತಿ ಜಾರಿ ಮಾಡುತ್ತಾರೆಂಬ ವಿಶ್ವಾಸವಿದೆ ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಜೀ ಅಭಿಪ್ರಾಯ
ಮಧುಗಿರಿ:ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣೆಗೂ ಮೊದಲು ಕೊಟ್ಟ ಭರವಸೆಯಂತೆ ಒಳಮೀಸಲಾತಿ ಜಾರಿ ಮಾಡುತ್ತಾರೆಂಬ ವಿಶ್ವಾಸವಿದೆ ಎಂದು ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಜೀ ಅಭಿಪ್ರಾಯ ವ್ಯಕ್ತಪಡಿಸಿದರು. ತಾಲ್ಲೂಕಿನ ಕಸಬಾ ಹೋಬಳಿಯ ಜಡೇಗೊಂಡನಹಳ್ಳಿ ಬಳಿ ಇರುವ ನಿವೃತ್ತ ಅಪಾರ ಜಿಲ್ಲಾಧಿಕಾರಿ ಈರಪ್ಪನವರ ಮನೆಗೆ ಭೇಟಿ ನೀಡಿ ಆಶೀರ್ವದಿಸಿ ಮಾತನಾಡಿದ ಅವರು ಒಳಮೀಸಲಾತಿ ವಿಚಾರವಾಗಿ ಚರ್ಚೆ ನಡೆಸಿದ ಶ್ರೀಗಳು ಎಬಿಸಿಡಿ ವರ್ಗೀಕರಣ ಜಾರಿ ವಿಳಂಭವಾಗುತ್ತಿದ್ದು ಜಾತಿವಾರು ಅಂಕಿಅಂಶ ಪರಿಶಿಷ್ಟ ಜಾತಿಯಲ್ಲಿ ಯಾವ ಯಾವ ಜಾತಿಗಳು ಎಷ್ಟು ಪರ್ಸೇಂಟ್…
ಜೀತ ವಿಮುಕ್ತರಿಗೆ ರಾಜ್ಯ ಬಜೆಟ್ ನಲ್ಲಿ 500 ಕೋಟಿ ಮೀಸಲಿಡುವಂತೆ ಡಾ.ಜೀವಿಕ ಸಂಜೀವಮೂರ್ತಿ ಒತ್ತಾಯ
ಮಧುಗಿರಿ : ಜೀತವಿಮುಕ್ತರ ಸಮಗ್ರ ಪುನರ್ ವಸತಿಗಾಗಿ ರಾಜ್ಯ ಸರ್ಕಾರ ಬಜೆಟ್ ನಲ್ಲಿ ,500 ಕೋಟಿ ಮೀಸಲಿಡಬೇಕು ಪ್ರತ್ಯೇಕ ನಿಗಮ ಸ್ಥಾಪಿಸಿ ಜೀತವಿಮುಕ್ತರ ಬದುಕಿನಲ್ಲಿ ಹೊಸ ಬೆಳಕು ನೀಡಿ ಎಲ್ಲರಂತೆ ಅವರು ಬದುಕಲು ಬಿಡಿ ಎಂದು ಜೀವಿಕ ಜಿಲ್ಲಾ ಸಂಚಾಲಕ ಡಾ.ಸಂಜೀವಮೂರ್ತಿ ಒತ್ತಾಯಿಸಿದರು. ಪಟ್ಟಣದ ಉಪವಿಭಾಗಾಧಿಕಾರಿಗಳ ಕಛೇರಿ ಆವರಣದಲ್ಲಿ ಜೀತ ವಿಮುಕ್ತಿ ಕರ್ನಾಟಕ (ಜೀವಿಕ) ಸಂಘಟನೆ ಹಾಗೂ ದಲಿತ ಒಕ್ಕೂಟಗಳ ಸಹಯೋಗದೊಂದಿಗೆ ಜೀತವಿಮುಕ್ತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ…
ಕುಡಿಯುವ ನೀರಿಗೆ ಸಮಸ್ಯೆ ಯಾಗದಂತೆ ಶಾಸಕರಿಂದ ಪೂರ್ವ ಭಾವಿ ಸಭೆ
ಬೇಸಿಗೆ ಪ್ರರಂಭವಾದ ಇನ್ನೆಲೆಯಲ್ಲಿ ತಾಲೋಕಿನಲ್ಲಿ ಯಾವುದೇ ರೀತಿಯಾಗಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗದಂತೆ ತಾಲೋಕಿನ ಅಧಿಕಾರಿಗಳು ಮುಂಜಾಗೃತ ಕ್ರಮ ವಹಿಸುವಂತೆ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್, ಆರ್, ಶ್ರೀನಿವಾಸ್ ರವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಜೋತೆ ಸಭೆ ನೇಡಸಲಾಯಿತು. ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದ ಶಾಸಕರು ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಶುಧ್ಧನೀರಿನ ಘಟಕಗಳು ನಿಲ್ಲದಂತೆ ಕ್ರಮ ವಹಿಸಬೇಕು ಶುದ್ಧ ನೀರಿನ ಘಟಕಗಳ ರಿಪೇರಿ ತುರ್ತಾಗಿ ಹಾಗಬೇಕು ಸಾರ್ವಜನಿಕರಿಗೆ ಜಾನುವಾರುಗಳಿಗೆ ಕುಡಿಯಲು ನೀರಿನ…
ಸಾವಿರಾರು ಹಳೆಯ ವಿದ್ಯಾರ್ಥಿಗಳು ದಶಕಗಳ ನಂತರ ಮಿಲನ
ತುಮಕೂರು:ಸರಕಾರಿ ಶಾಲೆಯೊಂದು,ಅದರಲ್ಲಿಯೂ ಉರ್ದು ಶಾಲೆಯೊಂದು ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಇದಕ್ಕೆ ಕಾರಣರಾದ ಎಲ್ಲರಿಗೂ ಹೃಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಕೌಶಲ್ಯಾಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಸಿ.ಎಸ್.ಪುರ ಹೋಬಳಿಯ ದೊಳ್ಳೇನಹಳ್ಳಿ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತಿದ್ದ ಅವರು,ಒಂದು ಮನೆ ನಿಬಾಯಿಸುವುದೇ ಕಷ್ಟದ ಕೆಲಸವಾಗಿರುವ ಸಂದರ್ಭದಲ್ಲಿ ನೂರು ವರ್ಷಗಳ ಕಾಲ ಶಾಲೆಯನ್ನು ಜೋಪಾನವಾಗಿ ಕಾಪಾಡಿಕೊಂಡು ಬರುವುದು ಕಷ್ಟದ…
ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ವಾರ್ಷಿಕ ಮಹಾಸಭೆ; ಶೈಕ್ಷಣಿಕ ಕ್ಷೇತ್ರದ ಇನ್ನಷ್ಟು ಪ್ರಗತಿಗೆ ಡಾ.ಜಿ.ಪರಮೇಶ್ವರ್ ಕರೆ
ತುಮಕೂರು: ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ 2023-24ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆ ನಗರದ ಹೊರವಲಯದ ಗೊಲ್ಲಹಳ್ಳಿ ಶ್ರೀ ಸಿದ್ಧಾರ್ಥ ಶಿಕ್ಷಕ ತರಬೇತಿ ಕೇಂದ್ರ ಸಭಾಂಗಣದಲ್ಲಿ ಇಂದು (ಶನಿವಾರ) ನಡೆಯಿತು. ಸಭೆಗೆ ಆರಂಭಿಸುವ ಮುನ್ನ ಶಿಕ್ಷಣ ಭೀಷ್ಮ ಡಾ. ಗಂಗಧರಯ್ಯ, ಡಾ. ಶಿವಪ್ರಸಾದ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಸಂಸ್ಥೆಯಲ್ಲಿ ಕಾರ್ಯನಿರ್ವಹಣೆ ಮಾಡಿ ಅಗಲಿದ ಸಿಬ್ಬಂದಿಗಳಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಶಿಕ್ಷಣ ಭೀಷ್ಮ ಡಾ. ಹೆಚ್.ಎಂ.ಗಂಗಾಧರಯ್ಯ ನವರು…