ಪ್ರಮುಖ ಸುದ್ದಿಗಳು
ಯುವಜನರ ಚಿಂತನೆ ಸಮಾಜದ ಅಭಿವೃದ್ಧಿಯತ್ತ ಇರಬೇಕು :ಡಾ. ಎಂ.ವೆಂಕಟೇಶ್ವರಲು
ತುಮಕೂರು: ಯುವ ಜನತೆಯ ಚಿಂತನೆ ಮತ್ತು ಸಂಶೋಧನಾ ಮನೋಭಾವ ದೇಶವನ್ನು ಅಭಿವೃಧಿಯತ್ತ ಕೊಂಡೊಯ್ಯುತ್ತದೆ ಹಾಗಾಗಿ ವಿದ್ಯಾರ್ಥಿಗಳು ಈ ದಿಕ್ಕಿನಲ್ಲಿ ಚಿಂತಿಸಬೇಕಿದೆ ಎಂದು ತುಮಕೂರು ವಿಶ್ವ ವಿದ್ಯಾನಿಲಯದ ಉಪಕುಲಪತಿಗಳಾದ ಡಾ. ಎಂ.ವೆಂಕಟೇಶ್ವರಲು ಅಭಿಪ್ರಾಯ ಪಟ್ಟರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾನಿಲಯದ ಆವರಣದಲ್ಲಿ ಶ್ರೀ ಸಿದ್ಧಾರ್ಥ ವ್ಯವಹಾರ ನಿರ್ವಹಣಾ ಅಧ್ಯಯನ ಕೇಂದ್ರದಿಂದ ಆಯೋಜಿಸಿದ್ದಂತಹ “ಇನ್ಸ್ಪಿರೋ 2025” ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು ಸಮಾಜದದ ಬದಲಾವಣೆಗೆ ಒಂದು ಉತ್ತಮ ಸಂಶೋಧನೆಗಳು ಕಾರಣವಾಗಬಹುದು. ಅದೇ ರೀತಿ ವಿದ್ಯಾರ್ಥಿಗಳ ಜೀವನವನ್ನು…
ಸಮಾನ ಮನಸ್ಕ ವಕೀಲರಿಂದ ಸಹಕಾರ ಸಚಿವ ಕೆ, ಎನ್, ರಾಜಣ್ಣನವರ ಅಮೃತ ಮಹೋತ್ಸವಕ್ಕೆ ಅಭಿನಂದನೆಗಳು
ಐತುಮಕೂರು : ರಾಜ್ಯದ ಸರ್ವ ಜನಾಂಗದ ಅಭಿವೃದ್ಧಿಗೆ ಸಹಕಾರ ನೀಡುವ ಮೂಲಕ ಸಹಕಾರ ರತ್ನ ಎಂಬ ಬಿರುದನ್ನು ಪಡೆದಿರುವ ಕೆ, ಎನ್, ರಾಜಣ್ಣನವರ 75 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಿರುವುದು ನಾಡಿನ ಜನತೆಗೆ ಸಂತಸದ ವಿಷಯ ಎಂದು ವಕೀಲರಾದ ಬಿ ಜಿ ಲಿಂಗರಾಜು ತಿಳಿಸಿದರು. ತುಮಕೂರು ನಗರದ ಖಾಸಗಿ ಹೋಟೆಲ್ ನಲ್ಲಿ ಸಮಾನ ಮನಸ್ಸಿನ ವಕೀಲರು ಸೇರಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕೆ,…
ರಾಷ್ಟ್ರ ಪ್ರಗತಿ ಶಿಕ್ಷಣ ಸಂಸ್ಥೆ ಪ್ರೌಢಶಾಲೆ ಕಟ್ಟಡ ಉದ್ಘಾಟನೆ ಸಮಾರಂಭ
ಪಾವಗಡ :-ಪಾವಗಡದಲ್ಲಿ ರಾಷ್ಟ್ರ ಪ್ರಗತಿ ಶಿಕ್ಷಣ ಸಂಸ್ಥೆ ಪ್ರೌಢಶಾಲೆ ಕಟ್ಟಡ ಉದ್ಘಾಟನೆ ಸಮಾರಂಭ ಜರುಗಿತು. ಶಾಂತಿ ಬೃಂದಾವನ ಹಿಂಭಾಗದಲ್ಲಿ ಏರ್ಪಡಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಈರಣ್ಣ ಮಾತನಾಡಿ, ಈ ಶಾಲೆಯು ಉತ್ತಮ ವಾತಾವರಣದಲ್ಲಿ ಬಡ ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಗಡಿ ಪ್ರದೇಶದಲ್ಲಿ ಆರಂಭಗೊಂಡಿದೆ. ಹೆಚ್ಚು ಹೆಚ್ಚು ಮಕ್ಕಳು ಈ ಶಾಲೆಗೆ ಸೇರಿ ಉತ್ತಮ ಮಟ್ಟದಲ್ಲಿ ಜೀವನ ರೂಪಿಸಿಕೊಳ್ಳಬೇಕೆಂದು ಹಾರೈಸಿದರು. ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವೆಂಕಟೇಶ್ ನಂತರ ಮಾತನಾಡಿದ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ …
ಅಲ್ಪಸಂಖ್ಯಾತ ಸಮುದಾಯಕ್ಕೆ ರಾಜಣ್ಣನವರ ಕೊಡುಗೆ ಅಪಾರ :ನಯಾಜ್ ಅಹಮದ್
ತುಮಕೂರು:ಜನಾನುರಾಗಿ ನಾಯಕರಾದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ 75ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಜೂನ್ 21 ರಂದು ನಡೆಯುವ ಕೆ.ಎನ್.ಆರ್ ಅಮೃತಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಮುಸ್ಲಿಂ ಭಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನಗರಪಾಲಿಕೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ನಯಾಜ್ ಅಹಮದ್ ಮನವಿ ಮಾಡಿದ್ದಾರೆ. ಕೆ.ಎನ್.ರಾಜಣ್ಣ ಮುಸ್ಲಿಂ ಹಿತೈಷಿಗಳ ಬಳಗದವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೆ.ಎನ್.ರಾಜಣ್ಣ ಅವರದು ನೇರ ಮತ್ತು ನಿಷ್ಠೂರ ನಡೆ, ರಾಜಕೀಯವಾಗಿ, ಅರ್ಥಿಕವಾಗಿ ಅಲ್ಪಸಂಖ್ಯಾತ ಸಮುದಾಯಕ್ಕೆ ಹಲವಾರು…
ರಾಜ್ಯ ವಾಲ್ಮೀಕಿ ಸಮುದಾಯದ ಪಕ್ಷತೀತ ನಾಯಕ ಕೆ, ಎನ್, ರಾಜಣ್ಣ ಪಾಳೇಗಾರ್ ಲೋಕೇಶ್
ಪಾವಗಡ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪಾವಗಡ ತಾಲೂಕು ವಾಲ್ಮೀಕಿ ಸಮುದಾಯದ ಸಂಘ ಸಂಸ್ಥೆಗಳ ಮುಖಂಡರು ಸಹಕಾರ ಸಚಿವ ಕೆ. ಎನ್. ರಾಜಣ್ಣ ಅಮೃತ ಮಹೋತ್ಸವ ಹಾಗೂ ಅಭಿನಂದನ ಗ್ರಂಥ ಬಿಡುಗಡೆ ಕಾರ್ಯಕ್ರಮ ಕುರಿತು ಪತ್ರಿಕಾಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿತ್ತು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತುಮಕೂರು ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಪಾಳೇಗಾರ್ ಲೋಕೇಶ್ ಮಾತನಾಡಿ ಕರ್ನಾಟಕ ರಾಜ್ಯ ವಾಲ್ಮೀಕಿ ಸಮುದಾಯದ ಪಕ್ಷತೀತ ನಾಯಕ ಸರ್ವ ಜನಾಂಗದ ಸರ್ವಧರ್ಮಗಳ ಏಳಿಗೆ ಹಾಗೂ ಅಭಿವೃದ್ಧಿಗೆ ಶ್ರಮಿಸುತ್ತಿರುವ…
ಸಾಂಸ್ಕೃತಿಕ ಚಟುವಟಿಕೆಗಳು ವ್ಯಕ್ತಿತ್ವ ವಿಕಸನಕ್ಕೆ ದಾರಿ : ಅಶೋಕ್ ಮೆಹ್ತ
ತುಮಕೂರು: ಕಾಲೇಜಿನಲ್ಲಿ ನಡೆಯುವ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಸಾಹೇ ವಿಶ್ವ ವಿದ್ಯಾನಿಲಯದ ಕುಲಸಚಿವರಾದ ಡಾ. ಅಶೋಕ್ ಮೆಹ್ತ ಅಭಿಪ್ರಾಯಪಟ್ಟರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ನಡೆದ ಶ್ರೀ ಸಿದ್ಧಾರ್ಥ ವ್ಯವಹಾರ ನಿರ್ವಹಣಾ ಅಧ್ಯಯನ ಕೇಂದ್ರ ಆಯೋಜಿಸಿರುವ “ಇನ್ಸ್ಪಿರೋ “ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಶೈಕ್ಷಣಿಕ ಜೀವನದ ಜೊತೆ ಜೊತೆಗೆ ವೈವಿಧ್ಯಮಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನಾಯಕತ್ವದ ಗುಣ ಹೆಚ್ಚಾಗಿ ಆತ್ಮ ವಿಶ್ವಾಸ ಮೂಡುತ್ತದೆ ಇಂತಹ ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪಯೋಗ…
ಪ್ರಾದೇಶಿಕ ಧ್ವನಿಗಾಗಿ ಜೆಡಿಎಸ್ ಅಧಿಕಾರಕ್ಕೆ ತರಲು ಶ್ರವಿುಸಿ: ನಿಖಿಲ್ ಕುಮಾರಸ್ವಾಮಿ
ಕೊರಟಗೆರೆ: ಪಕ್ಷವನ್ನುನಿಖಿಲ್ ಕುಮಾರಸ್ವಾಮಿ ತಳಮಟ್ಟದಿಂದ ಅಭಿವೃದ್ಧಿ ಪಡಿಸಲು ಕಾರ್ಯಕರ್ತರು ಮುಂದಾಗಬೇಕು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ. ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವ ಶ್ರಮ ವಹಿಸಬೇಕು. ರಾಜ್ಯದ ಅಸ್ತಿತ್ವ ನಾಡು-ನುಡಿಗಳ ರಕ್ಷಣೆ ಹಾಗೂ ಜಲ ಸಂಪತ್ತಿನ ಹಕ್ಕು ಸಂರಕ್ಷಣೆ ಪ್ರಾದೇಶಿಕ ಪಕ್ಷಗಳ ಪಾತ್ರ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ಪಕ್ಷವೇ ಕರ್ನಾಟಕಕ್ಕೆ ಅತ್ಯಅವಶ್ಯ ಎಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಪಟ್ಟಣದ ಹಿಂದೂ ಸಾದರ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಪಕ್ಷದ…
ಜೂನ್ 21ರಂದು ಸಹಕಾರ ಸಚಿವ ಕೆ ಎನ್ ರಾಜಣ್ಣನವರ 75 ನೇ ಅಮೃತ ಮಹೋತ್ಸವಕ್ಕೆ ಸಕಲ ಸಿದ್ಧತೆ ಆರ್ ರಾಜೇಂದ್ರ
ಜೂನ್ 21 ರಂದು ಸಹಕಾರ ಸಚಿವ ಕೆಎನ್ ರಾಜಣ್ಣನವರ 75 ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮದ ಪೂರ್ವಸಿದ್ಧತೆಯ ಅಂಗವಾಗಿ ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ವಿಧಾನ ಪರಿಷತ್ ಸದಸ್ಯ ಆರ್ ರಾಜೇಂದ್ರ ಪತ್ರಿಕಾಗೋಷ್ಠಿ ನಡೆಸಿದರು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಜೂನ್ 21 ರಂದು ಕೆ, ಎನ್, ರಾಜಣ್ಣನವರ 75ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಅಮೃತ ಮಹೋತ್ಸವವನ್ನು ಏರ್ಪಡಿಸಲಾಗಿದ್ದು ಅವರ ಅಭಿಮಾನಿಗಳು ಮತ್ತು ಹಿತೈಷಿಗಳು ಒಟ್ಟಾಗಿ ಸೇರಿ ಅವರು ನಡೆದು ಬಂದ ಜೀವನದ…
ಹೊರ ರಾಜ್ಯಗಳ ಚುನಾವಣೆಗೆ ಎಸ್.ಸಿ.ಪಿ/ ಟಿ.ಎಸ್.ಪಿ ಹಣ ಬಳಕೆ ಮಾಡಿಕೊಂಡ ಕಾಂಗ್ರೆಸ್ ಸರ್ಕಾರ ನಿಖಿಲ್ ಕುಮಾರಸ್ವಾಮಿ ಆರೋಪ
ತುಮಕೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೊರ ರಾಜ್ಯಗಳ ಚುನಾವಣೆಗೆ ಎಸ್.ಸಿ.ಪಿ/ ಟಿ.ಎಸ್.ಪಿ ಹಣ ಬಳಕೆ ಮಾಡಿಕೊಂಡಿದ್ದಾರೆ ಎಂದು ಜೆ ಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ ಮಾಡಿದರು. ಪಾವಗಡ ಪಟ್ಟಣದ ಅಂಜಿನೇಯ ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಜಾತ್ಯತೀತ ಜನತಾದಳದ ವತಿಯಿಂದ ಜನರೊಂದಿಗೆ ಜನತಾದಳ ಮತ್ತು ಮಿಸ್ಡ್ ಕಾಲ್ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಂದುವರಿದು ರಾಜ್ಯ ಸರ್ಕಾರದ ದುರಾಡಳಿತ, ದುರ್ನಡತೆಯಿಂದ ಸರ್ಕಾರದ ಮೇಲೆ ರಾಜ್ಯದ ಮೂಲೇ…
ಆಕಸ್ಮಿಕ ಬೆಂಕಿ : ಹುಲ್ಲಿನ ಬಣವೆ ಸಂಪೂರ್ಣ ಭಸ್ಮ
ತುಮಕೂರು: ಜಾನುವಾರುಗಳಿಗೆ ಮೇವು ಸಂಗ್ರಹಿಸಿ ಬಣವೆ ಹಾಕಿದ್ದ ಹುಲ್ಲಿನ ಬಣವೆಗೆ ಬೆಂಕಿ ಬಿದ್ದ ಪರಿಣಾಮ ಬಣವೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ತುಮಕೂರು ತಾಲ್ಲೂಕಿನ ಹಾಲುಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಗೂಳೂರು ಹೋಬಳಿಯ ಹಾಲುಹೊಸಹಳ್ಳಿ ಗ್ರಾಮದ ರೈತ ರಂಗಸ್ವಾಮಿ ಎಂಬುವರಿಗೆ ಸೇರಿದ ಹುಲ್ಲಿನ ಬಣವೆ ಬೆಂಕಿಗೆ ಆಹುತಿಯಾಗಿದೆ. ರೈತ ರಂಗಸ್ವಾಮಿ ಅವರು ಹಿತ್ತಲಲ್ಲಿ ಜಾನುವಾರುಗಳ ಮೇವಿಗಾಗಿ ರಾಗಿ ಹುಲ್ಲನ್ನು ಸಂಗ್ರಹಿಸಿ ಬಣವೆ ಹಾಕಿದ್ದರು. ಈ ಬಣವೆಗೆ ಬೆಂಕಿ ಬಿದ್ದು ಹೊಗೆಯಾಡುತ್ತಿರುವುದು ಕಂಡು ಬಂದಿದೆ….