ಪ್ರಮುಖ ಸುದ್ದಿಗಳು
ಸೈಂಟ್ ಥಾಮಸ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಗುಬ್ಬಿ: ನವಂಬರ್ ಮೊದಲ ದಿನ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆ ಮಾಡದೆ ವರ್ಷಪೂರ್ತಿ ಆಚರಿಸುವ ಮೂಲಕ ಕನ್ನಡ ಭಾಷೆಯ ಹಿರಿಮೆಯನ್ನು ಹೆಚ್ಚಿಸುವಂತೆ ತಹಶೀಲ್ದಾರ್ ಆರತಿ ಬಿ. ಕರೆ ನೀಡಿದರು. ತಾಲೂಕಿನ ಸಿ ಎಸ್ ಪುರ ಗ್ರಾಮದ ಸೈಂಟ್ ಥಾಮಸ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕನ್ನಡ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ರಾಷ್ಟ್ರದಲ್ಲಿ ಅತಿ ಹೆಚ್ಚು ಜ್ಞಾನ ಪೀಠ ಪ್ರಶಸ್ತಿ ದೊರಕಿರುವುದು ಕನ್ನಡ ಭಾಷೆಗೆ ಎಷ್ಟು ಗೌರವವಿದೆ ಎಂಬುದನ್ನು ತಿಳಿಯಬಹುದು. ರಾಷ್ಟ್ರದಲ್ಲಿ ಕನ್ನಡ ಭಾಷೆಗೆ ಇರುವ ಪ್ರಾಶಸ್ತ್ಯ…
ಸಿ, ಎಂ, ಸ್ಥಾನ ನೀಡುವಂತೆ ದಲಿತ ಮುಖಂಡರಿಂದ ಅರೆ ಬೆತ್ತಲೆ ಮೆರವಣಿಗೆ
ತುಮಕೂರು:ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದಾದರೆ ದಲಿತ ಸಮುದಾಯಕ್ಕೆ ಸೇರಿದ ಡಾ.ಜಿ.ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯಾಗಿ ಮಾಡಬೇಕೆಂದು ಒತ್ತಾಯಿಸಿ ಇಂದು ವಿವಿಧ ದಲಿತ ಪರ ಸಂಘಟನೆಗಳ ಮುಖಂಡರು ನಗರದ ಟೌನ್ಹಾಲ್ ವೃತ್ತದಲ್ಲಿ ಅರೆ ಬೆತ್ತಲೆ ಮೆರವಣಿಗೆ ನಡೆಸಿದರು. ದಲಿತ ಮುಖಂಡರಾದ ಟಿ.ಸಿ.ರಾಮಯ್ಯ ನೇತೃತ್ವದಲ್ಲಿ ನೂರಾರು ದಲಿತ ಯುವಜನರು ನಗರದ ಟೌನ್ಹಾಲ್ ಮುಂಭಾಗ ಇರುವ ಅಂಬೇಡ್ಕರ್ ಪ್ರತಿಮೆಯಿಂದ ಬಿಜಿಎಸ್ ವೃತ್ತದವರೆಗೆ ಅರೆಬೆತ್ತಲೆ ಮೆರವಣಿಗೆ ನಡೆಸಿ,ಕೆಲ ಕಾಲ ಮಾನವ ಸರಪಳಿ ನಿರ್ಮಿಸುವ ಮೂಲಕ ಕಾಂಗ್ರೆಸ್ ಪಕ್ಷದ ಮೇಲೆ ಒತ್ತಡ ಹಾಕುವ ಪ್ರಯತ್ನ ನಡೆಸಿದರು….
ಕಂಪನಿ ಸೆಕ್ರೆಟರಿ ಪರೀಕ್ಷೆ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ
ಮೊದಲ ಪ್ರಯತ್ನದಲ್ಲೇ ತೇರ್ಗಡೆಯಾದ 17 ಬಿಬಿಎ ವಿದ್ಯಾರ್ಥಿಗಳಿಗೆ ವೈಸಿರಿ ಕಾಲೇಜಿನಲ್ಲಿ ಸನ್ಮಾನ ತುಮಕೂರು, ನ.22: ಕಂಪನಿ ಸೆಕ್ರೆಟರಿ ಎಂಬುದು ಕಂಪನಿಯ ಕಾನೂನು ಬಾಧ್ಯತೆಗಳು, ಕಾಪೆರ್Çರೇಟ್ ಆಡಳಿತ ಮತ್ತು ನಿರ್ದೇಶಕ ಮಂಡಳಿಗೆ ಸಲಹೆ ನೀಡುವ ಪ್ರತಿಷ್ಠಿತ ಹುದ್ದೆಯಾಗಿದೆ. ಈ ಸಾಧನೆಯಿಂದ ವಿದ್ಯಾರ್ಥಿಗಳು ಶೈಕ್ಷಣಿಕ ಸಾಮಥ್ರ್ಯದ ಜೊತೆಗೆ ಕಾರ್ಪರೇಟ್ ಜಗತ್ತಿನ ಸಂಕೀರ್ಣತೆಗಳನ್ನು ನಿರ್ವಹಿಸುವ ಸಾಮಥ್ರ್ಯವನ್ನು ಸಾಬೀತುಪಡಿಸಿದ್ದಾರೆ ಎಂದು ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎನ್. ಬಿ. ಪ್ರದೀಪ್ ಕುಮಾರ್ ಹೇಳಿದರು. ವೈಸಿರಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್…
ಲಿಂಕ್ ಕೆನಾಲ್ ಕಾಮಗಾರಿ ಮಾಡಲು ಬಿಟ್ಟರೆ ರೈತರಿಗೆ ಉಳಿಗಾಲವಿಲ್ಲ ಶಾಸಕ ಎಂ ಟಿ ಕೃಷ್ಣಪ್ಪ.
ಗುಬ್ಬಿ : ಲಿಂಕ್ ಕೆನಾಲ್ ಕಾಮಗಾರಿ ಮಾಡಲು ನಾವೇನಾದರು ಬಿಟ್ಟರೆ ಖಂಡಿತವಾಗಿಈಗ ಬೆಳೆಯುತ್ತಿರುವ ತೆಂಗು ಅಡಿಕೆ ಇಲ್ಲದ ಹಾಗೆ ಆಗುತ್ತೆ ಅನ್ನೋದುನ್ನ ಮರೆಯಬೇಡಿ ಎಂದು ತುರುವೇಕೆರೆ ಕ್ಷೇತ್ರದ ಶಾಸಕ ಎಂ ಟಿ ಕೃಷ್ಣಪ್ಪ ಹೇಳಿದರು. ತುಮಕೂರು ಸಹಕಾರಿ ಹಾಲು ಒಕ್ಕೂಟ ಮತ್ತು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯ ಸಹಯೋಗದಲ್ಲಿ ಮಿಶ್ರ ತಳಿಕರು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಹೇಮಾವತಿ ಲಿಂಕ್ ಕೆನಾಲ್ ವಿಚಾರದಲ್ಲಿ ಈಗಾಗಲೇ ಹೊರಟ ಮಾಡಿ ನಿಲ್ಲಿಸಿದ್ದೇವೆ ಆದರೆ ಮುಂದಿನ ದಿನದಲ್ಲಿ…
ಕಲ್ಪತರು ಉತ್ಸವ-ಪ್ರಗತಿಪರ ರೈತರಿಗೆ ಗೌರವಾರ್ಪಣೆ ಐಕ್ಯ ಫೌಂಡೇಶನ್, ಇನ್ನರ್ ವ್ಹೀಲ್ ನಿಂದ ಆಯೋಜನೆ
ತುಮಕೂರು: ಐಕ್ಯ ಫೌಂಡೇಶನ್ ಹಾಗೂ ಇನ್ನರ್ ವ್ಹೀಲ್ ಸಂಸ್ಥೆವತಿಯಿಂದ ಈ ತಿಂಗಳ 22 ಮತ್ತು 23ರಂದು ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಕಲ್ಪತರು ಉತ್ಸವ ಏರ್ಪಡಿಸಲಾಗಿದೆ. ಈ ವೇಳೆ ಜಿಲ್ಲೆಯ 58 ಮಂದಿ ಪ್ರಗತಿಪರ ರೈತರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಐಕ್ಯ ಫೌಂಡೇಶನ್ ಅಧ್ಯಕ್ಷೆ ರೇಖಾ ಶಿವಕುಮಾರ್ ಹಾಗೂ ಇನ್ನರ್ ವ್ಹೀಲ್ ಸಂಸ್ಥೆ ಅಧ್ಯಕ್ಷೆ ಮಂಜುಳಾ ಲೋಕೇಶ್ ತಿಳಿಸಿದರು. ಗುರುವಾರ ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ಉತ್ಸವದಲ್ಲಿ ತೆರೆಯಲಾಗುವುದು….
ಉಚಿತವಾಗಿ 50ಸಾವಿರ ಕಾಗದ ಕೈಚೀಲ ವಿತರಿಸಿದ ಬಿಎಂಎಸ್.ಇಂಜನಿಯರಿಂಗ್ ಕಾಲೇಜು*
*ಪರಿಸರ ಸ್ನೇಹಿ ಕಡಲೆಕಾಯಿ ಪರಿಷೆ ಅಚರಣೆಗೆ ಉಚಿತವಾಗಿ 50ಸಾವಿರ ಕಾಗದ ಕೈಚೀಲ ವಿತರಿಸಿದ ಬಿಎಂಎಸ್.ಇಂಜನಿಯರಿಂಗ್ ಕಾಲೇಜು* ಬೆಂಗಳೂರು: ಬಸವನಗುಡಿಯಲ್ಲಿ ಪಾರಂಪರಿಕ ಶತಮಾನಗಳ ಇತಿಹಾಸವಿರುವ ಕಡಲೆಕಾಯಿ ಪರಿಷೆ ಐದು ದಿನಗಳ ಕಾಲ ಜರುಗಲಿದೆ. ರಾಜ್ಯ ಮತ್ತು ಹೊರ ರಾಜ್ಯಗಳಿಂದ ಆಗಮಿಸುವ ರೈತರು ಕಡಲೆಕಾಯಿ ಪರಿಷೆಯಲ್ಲಿ ವ್ಯಾಪಾರ ಮಾಡುತ್ತಾರೆ ಪ್ಲಾಸ್ಟೀಕ್ ಕೈಚೀಲಗಳ ಬಳದಂತೆ ಪ್ಲಾಸ್ಟೀಕ್ ಮುಕ್ತ ಕಡಲೆಕಾಯಿ ಪರಿಷೆ ಮಾಡಲು ಬಿ.ಎಂ.ಎಸ್.ಇಂಜನಿಯರಿಂಗ್ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾಲೇಜು ಅವರಣದಲ್ಲಿ ಪೇಪರ್ ಗಳನ್ನು ಸಂಗ್ರಹಸಿ 50ಸಾವಿರ ಕಾಗದದ ಕೈ ಚೀಲಗಳನ್ನು ತಯಾರಿಸಿ ಮಳಿಗೆ…
ಕೆ.ಎನ್.ಆರ್.ಗೆ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ
ಸಿಎಂ ಬಳಿಗೆ ಹಿಂದುಳಿದ ವರ್ಗಗಳ ಮುಖಂಡರ ನಿಯೋಗ ತುಮಕೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಕೆ.ಎನ್.ರಾಜಣ್ಣನವರನ್ನು ಮಂತ್ರಿಮಂಡಲಕ್ಕೆ ಸೇರಿಸಿಕೊಂಡು, ಅವರ ಆಸಕ್ತಿಯ ಹಾಗೂ ಪರಿಣತಿ ಹೊಂದಿರುವ ಸಹಕಾರ ಖಾತೆಯನ್ನೇ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿ ಜಿಲ್ಲೆಯ ಹಿಂದುಳಿದ ವರ್ಗಗಳ ಸಮಾಜಗಳ ಮುಖಂಡರು ಇನ್ನೆರಡು ದಿನಗಳನ್ನು ಮುಖ್ಯಮಂತ್ರಿ ಬಳಿ ನಿಯೋಗ ತೆರಳಲಿದ್ದಾರೆ. ತುಮಕೂರು ಜಿಲ್ಲೆಯ ಪ್ರಭಾವಿ ನಾಯಕ, ಹಿಂದುಳಿದ ವರ್ಗಗಳ ಆಶಾಕಿರಣವಾಗಿರುವ ಕೆ.ಎನ್.ರಾಜಣ್ಣನವರು ಯಾವುದೇ ತಪ್ಪು, ಭ್ರಷ್ಟಾಚಾರ ಮಾಡದಿದ್ದರೂ ಕ್ಷುಲ್ಲಕ ಕಾರಣವೊಡ್ಡಿ ಅವರನ್ನು ಸಚಿವ ಸ್ಥಾನದಿಂದ…
ವೈಸಿರಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಟೆಕ್ನಾಲಜಿ ನಲ್ಲಿ ಪ್ರಥಮ MBA ಬ್ಯಾಚ್ ಉದ್ಘಾಟನೆ
ವೈಸಿರಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಟೆಕ್ನಾಲಜಿ ನಲ್ಲಿ ಪ್ರಥಮ MBA ಬ್ಯಾಚ್ ಉದ್ಘಾಟನೆ ನಗರದ ವಿದ್ಯಾವಾಹಿನಿ ಸಮೂಹ ಸಂಸ್ಥೆಯ ವೈಸಿರಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ & ಟೆಕ್ನಾಲಜಿ ತನ್ನ ಮೊದಲ MBA ಬ್ಯಾಚ್ (2025-26) ಅನ್ನು ನವೆಂಬರ್ 17, 2025 ರಂದು ವೈಸಿರಿ ಕ್ಯಾಂಪಸ್ನಲ್ಲಿ ಉದ್ಘಾಟಿಸಿತು. ವಿದ್ಯಾವಾಹಿನಿ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಶ್ರೀ ಕೆ. ಬಿ. ಜಯಣ್ಣರವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕೈಗಾರಿಕಾ ಕ್ಷೇತ್ರದೊಂದಿಗೆ ದೃಢವಾದ ನಂಟಿನ ಅಗತ್ಯತೆಯನ್ನು ಉಲ್ಲೇಖಿಸಿ, ವಿದ್ಯಾರ್ಥಿಗಳ…
ಜೀವನದ ಅನನ್ಯ ಹಾದಿಯಲ್ಲಿ ಅನೇಕರ ಹೃದಯ ಗೆದ್ದಂತಹ ವ್ಯಕ್ತಿ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕನವರು
ತುಮಕೂರು : ಮಕ್ಕಳ ದಿನಾಚರಣೆಯಂದು ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕರವರು ಇಹಲೋಕ ತ್ಯಜಿಸಿದ್ದರ ಪ್ರಯುಕ್ತ ಅಖಿಲ ಭಾರತ ಡಾ|| ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ವತಿಯಿಂದ ತುಮಕೂರು ಮಹಾನಗರ ಪಾಲಿಕೆ ಆವರಣದಲ್ಲಿರುವ ಡಾ. ಅಂಬೇಡ್ಕರ್ರವರ ಪುತ್ಥಳಿಯ ಮುಂಭಾಗದಲ್ಲಿ ಮೇಣದಬತ್ತಿಯನ್ನು ಹಚ್ಚುವುದರ ಮೂಲಕ ಸಾಲುಮರದ ತಿಮ್ಮಕ್ಕರವರ ಆತ್ಮಕ್ಕೆ ಶಾಂತಿ ಸಿಗಲೆಂದು ಮೌನಾಚರಣೆಯನ್ನು ಆಚರಿಸಿದರು. ಈ ಸಂದರ್ಭದಲ್ಲಿ ಅಖಿಲ ಭಾರತ ಡಾ|| ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ…
ಮಕ್ಕಳ ಶೈಕ್ಷಣಿಕ ತಳಹದಿ ಗುಣಾತ್ಮಕವಾಗಿರಲಿ: ಸುರೇಶ್ಗೌಡ ಆಶಯ
ನೆಲಹಾಳ್ನಲ್ಲಿ ಕೋಟಿ ರೂ. ವೆಚ್ಚದ ಸುಸಜ್ಜಿತ ಶಾಲೆ ಲೋಕಾರ್ಪಣೆ ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ನೆಲಹಾಳ್ ಗ್ರಾಮದಲ್ಲಿ ಜಪಾನ್ ದೇಶದ ಟಿಮೆಕ್ ಕಂಪನಿಯ ಸಿಎಸ್ಆರ್ ನಿಧಿಯಡಿ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಸಜ್ಜಿತ ಕಟ್ಟಡ ಹಾಗೂ ಮೂಲಭೂತ ಸೌಲಭ್ಯಗಳನ್ನು ಶುಕ್ರವಾರ ಶಾಸಕ ಬಿ.ಸುರೇಶ್ಗೌಡರು ಹಾಗೂ ಶಿಕ್ಷಣತಜ್ಞ ಡಾ.ಗುರುರಾಜ ಕರಜಗಿ ಲೋಕಾರ್ಪಣೆ ಮಾಡಿದರು. ಇದರ ಅಂಗವಾಗಿ ನಡೆದ ಸಮಾರಂಭದಲ್ಲಿ ಮಾತನಾಡಿದ ಶಾಸಕ ಸುರೇಶ್ಗೌಡರು, ಶಿಕ್ಷಣದ ತಳಹದಿ ಗುಣಮಟ್ಟದಿಂದ…