
ಜಿಲ್ಲಾ ಸುದ್ದಿಗಳು
ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಲೇಸರ್ ಅಳವಡಿಕೆ ಅಗತ್ಯ ಎಂದು ತಿಳಿಸಿದ : ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ
ವಾಸನ್ ಐ ಕೇರ್ನ ತುಮಕೂರು ಶಾಖೆಯ 14 ನೇ ವರ್ಷದ ವಾರ್ಷಿಕೋತ್ಸವದ ಉದ್ಘಾಟನೆ ಮಾಡಿದ ಪರಮ ಪೋಜ್ಯ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ: ತುಮಕೂರಿನ ವಾಸನ್ ಐ ಕೇರ್ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಕಣ್ಣಿನ ಆಸ್ಪತ್ರೆಯಲ್ಲಿ ಸಮಗ್ರ ಕಣ್ಣಿನ ಆರೈಕೆ ಲಭ್ಯವಿದ್ದು, ತುಮಕೂರಿನ ಜನತೆ ಇದರ ಸದುಪಯೋಗವನ್ನು ಪಡೆಯಬೇಕೆಂದರು . ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಲೇಸರ್ ಅಥವಾ PHACO ಶಸ್ತ್ರಚಿಕಿತ್ಸೆಯೇ ಹೆಚ್ಚು ಜನರ ಮನ್ನಣೆ ಪಡೆದಿರುವುದು. ಇಂತಹ ಸೌಲಭ್ಯವನ್ನು ರೋಗಿಗಳಿಗೆ ಒದಗಿಸುವುದು ಆಸ್ಪತ್ರೆಗಳ ಜವಾಬ್ದಾರಿಯಾಗಿರುತ್ತದೆ….
ಮಾದಿಹಳ್ಳಿ ಗ್ರಾಮ ಪಂಚಾಯ್ತಿಯ ನೂತನ ಉಪಾಧ್ಯಕ್ಷರಾಗಿ ಕೆಂಪಯ್ಯ ಅವಿರೋಧವಾಗಿ ಆಯ್ಕೆ*
ತುರುವೇಕೆರೆ: ತಾಲೂಕಿನ ಮಾದಿಹಳ್ಳಿ ಗ್ರಾಮ ಪಂಚಾಯ್ತಿಯ ನೂತನ ಉಪಾಧ್ಯಕ್ಷರಾಗಿ ಕೆಂಪಯ್ಯ ಅವಿರೋಧವಾಗಿ ಆಯ್ಕೆಯಾದರು. ಹಿಂದಿನ ಉಪಾಧ್ಯಕ್ಷ ಎಂ.ವೆಂಕಟೇಶ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. 16 ಸದಸ್ಯ ಬಲದ ಮಾದಿಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಮಾದಿಹಳ್ಳಿ ಕ್ಷೇತ್ರದ ಸದಸ್ಯೆ ಕೆಂಪಯ್ಯ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಚುನಾವಣಾ ಪ್ರಕ್ರಿಯೆ ವೇಳೆ ಉಪಾಧ್ಯಕ್ಷ ಏಕೈಕ ನಾಮಪತ್ರ ಸಲ್ಲಿಕೆಯಾದ ಕಾರಣ ಚುನಾವಣಾಧಿಕಾರಿ, ತಹಸೀಲ್ದಾರ್ ರೇಣುಕುಮಾರ್ ಅವರು ಮಾದಿಹಳ್ಳಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರಾಗಿ ಕೆಂಪಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಿಸಿದರು. ನೂತನ…
ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ದೇವಾಲಯ ಜೀರ್ಣೋದ್ದಾರಕ್ಕೆ 50,000 ಸಾವಿರ ಡಿ, ಡಿ, ಹಸ್ತಾಂತರ.
ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಹೊಸಕೆರೆ ವಲಯದ ಪಿನ್ನೇನಹಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ದೇವಾಲಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಪ್ರಸಾದ ರೂಪದಲ್ಲಿ ಪೂಜ್ಯರು ಮಂಜೂರು ಮಾಡಿದ 50000/- ಸಾವಿರ DD ಮೊತ್ತವನ್ನು, ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಗುಬ್ಬಿ ತಾಲೂಕಿನ ಮಾನ್ಯ ಯೋಜನಾಧಿಕಾರಿಗಳು ದೇವಸ್ಥಾನದ ಕಮಿಟಿಯವರಿಗೆ ಹಸ್ತಾಂತರ ಮಾಡಿದರು. ಈ ಸಮಯದಲ್ಲಿ ಮಾನ್ಯ ಯೋಜನಾಧಿಕಾರಿ ರಾಜೇಶ್ ,ದೇವಸ್ಥಾನದ ಕಮಿಟಿ ಅಧ್ಯಕ್ಷರಾದ ಮಲ್ಲಯ್ಯ ,ಕಮಿಟಿ ಕಾರ್ಯದರ್ಶಿ ರಾಜ್ ಕುಮಾರ್, ಕಮಿಟಿ ಸದಸ್ಯರು, ಒಕ್ಕೂಟ ಅಧ್ಯಕ್ಷರು…
ಅರ್ಹರಿಗೆ ಸಾಲ ನೀಡದ ಬ್ಯಾಂಕುಗಳ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಿಸಲು ಕ್ರಮ- ಸಿಇಓ ಎಚ್ಚರಿಕೆ
ತುಮಕೂರು : ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಆದಿ ಜಾಂಬವ ಅಭಿವೃದ್ಧಿ ನಿಗಮಗಳಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ಫಲಾನುಭವಿಗಳಿಗೆ ಸಾಲ ನೀಡದೆ ಅರ್ಜಿಯನ್ನು ವಿಲೇವಾರಿ ಮಾಡದೆ 3 ತಿಂಗಳಿಗಿಂತ ಹೆಚ್ಚಿನ ಸಮಯ ಬಾಕಿ ಉಳಿಸಿಕೊಂಡಿರುವ ಬ್ಯಾಂಕುಗಳ ವಿರುದ್ಧ ದೌರ್ಜನ್ಯ ತಡೆ ಕಾಯ್ದೆಯಡಿ (ಅಟ್ರಾಸಿಟಿ) ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅವರು ವಿವಿಧ ಬ್ಯಾಂಕಿನ…
ವಿದ್ಯಾರ್ಥಿಗಳಲ್ಲಿ ನಿರಂತರ ಕಲಿಯುವ ಉತ್ಸಾಹ ಇರಬೇಕು. ಡಾ. ಎಂ.ಎಸ್ ರವಿಪ್ರಕಾಶ:
ತುಮಕುರು: ವಿದ್ಯಾರ್ಥಿಗಳಲ್ಲಿ ನಿರಂತರ ಕಲಿಯುವ ಉತ್ಸಾಹ ಇರಬೇಕು. ಅದರಲ್ಲೂ ತಾಂತ್ರಿಕ ಕಲಿಕೆಯಲ್ಲಿ ವಿದ್ಯಾರ್ಥಿಗಳು ಮುಂದಿರಬೇಕು ಎಂದು ಶ್ರೀ ಸಿದ್ದಾರ್ಥ ತಾಂತ್ರಿಕ ಮಹವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಎಸ್ ರವಿಪ್ರಕಾಶ ಅಭಿಪ್ರಾಯಪಟ್ಟರು. ನಗರದ ಎಸ್ಎಸ್ಐಟಿಯ ಎಲೆಕ್ಟ್ರಿಕಲ್ & ಎಲೆಕ್ರ್ಟಾನಿಕ್ಸ್ ವಿಭಾಗ ಏರ್ಪಡಿಸಿದ್ದ ಆರು ದಿನಗಳ ‘ಪ್ರಾಕ್ಟಿಕಲ್ ಹ್ಯಾಂಡ್ ಆನ್ ಟ್ರೇನಿಂಗ್ ಆನ್ ಎಲೆಕ್ಟ್ರಿಕಲ್ ಸ್ವಿಚ್ ಗೇರ್ ಅಂಡ್ ಇಟ್ಸ್ ಅಪ್ಲಿಕೇಶನ್ ಕಾರ್ಯಾಗಾರ’ದಲ್ಲಿ ಮಾತನಾಡಿದ ಅವರು, ಕಾರ್ಯಗಾರಗಳು ನಡೆಯುವುದರಿಂದ ವಿದ್ಯಾರ್ಥಿಗಳಲ್ಲಿನ ಕೌಶಲ್ಯಗಳು ವೃದ್ದಿಯಾಗುತ್ತದೆ. ಈಗ ಕಲಿತ ಕೌಶಲ್ಯಗಳು ಕೆಲಸಕ್ಕೆ…
ಜಿಲ್ಲೆಯಲ್ಲಿ 136 ಡೆಂಗ್ಯೂ ಪ್ರಕರಣ : ನಿಯಮಿತವಾಗಿ ಹೊರಾಂಗಣ ಧೂಮೀಕರಣಕ್ಕೆ ಖಡಕ್ ಸೂಚನೆ
ತುಮಕೂರು: ಆರೋಗ್ಯ ಇಲಾಖೆ ವರದಿಯನುಸಾರ ಜಿಲ್ಲೆಯಲ್ಲಿ 2024ರ ಜನವರಿ ಮಾಹೆಯಿಂದ ಈವರೆಗೂ 136 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ನಿಯಮಿತವಾಗಿ ಹೊರಾಂಗಣ ಧೂಮೀಕರಣ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ವಿವಿಧ ಸಭೆಗಳನ್ನು ನಡೆಸಿ ಮಾತನಾಡಿದ ಅವರು,ಮಲೇರಿಯಾ, ಡೆಂಗ್ಯೂ, ಚಿಕುಂಗುನ್ಯಾ, ಮೆದುಳುಜ್ವರ ಹಾಗೂ ಆನೆಕಾಲು ರೋಗಗಳನ್ನು ನಿಯಂತ್ರಿಸಲು ಚರಂಡಿ ಸ್ವಚ್ಛತೆ, ನೀರು ನಿಲ್ಲದಂತೆ…
ಭೂಸ್ವಾಧೀನ ಪರಿಹಾರಕ್ಕಾಗಿ ರೈತರಿಂದ ಅರ್ಜಿ ಸ್ವೀಕರಿಸಲು ಪ್ರತ್ಯೇಕ ಕೌಂಟರ್
ತುಮಕೂರು, : ತಾಲ್ಲೂಕಿನ ಬೆಳ್ಳಾವಿ ಹೋಬಳಿ ವ್ಯಾಪ್ತಿಯ ಸೋರೆಕುಂಟೆ, ಪಿ.ಗೊಲ್ಲಹಳ್ಳಿ, ಪುರದಕುಂಟೆ, ಗೌಡನಹಳ್ಳಿ, ಲಿಂಗನಹಳ್ಳಿ, ಗಿರಿಯನಹಳ್ಳಿ ಸೇರಿದಂತೆ 6 ಗ್ರಾಮಗಳ ಸುಮಾರು 1,722 ಎಕರೆ ವಿಸ್ತೀರ್ಣದಲ್ಲಿ ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಯೋಜನೆಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಯೋಜನೆ ಅಭಿವೃದ್ಧಿಗಾಗಿ ಭೂಮಿ ನೀಡಿರುವ ರೈತರ ಅಹವಾಲು ಅರ್ಜಿಗಳನ್ನು ಸ್ವೀಕರಿಸಲು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ(ಕೆಐಎಡಿಬಿ) ವಿಶೇಷ ಭೂಸ್ವಾಧೀನ ಅಧಿಕಾರಿ ಸೋಮಪ್ಪ ಕಡಕೋಳ ಅವರ ನೇತೃತ್ವದಲ್ಲಿಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರತ್ಯೇಕ ಕೌಂಟರ್ ಅನ್ನು ಸ್ಥಾಪಿಸಲಾಗಿತ್ತು. ಯಲ್ಲದಡ್ಲು ಗ್ರಾಮದ 1, ಸೋರೆಕುಂಟೆ-5, ಪುರದಕುಂಟೆ-1,…
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಅಧ್ಯಕ್ಷತೆಯಲ್ಲಿ 24-25 ರ ಶೈಕ್ಷಣಿಕ ಸಭೆ
ಮಧುಗಿರಿ : ಜಿಲ್ಲಾ ಉಪನಿರ್ದೇಶಕ ಗಂಗಾಧರ್ ಅವರ ಅಧ್ಯಕ್ಷತೆಯಲ್ಲಿ ಶಿರಾ, ಮಧುಗಿರಿ, ಕೊರಟಗೆರೆ, ಪಾವಗಡ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಮುಂದಿನ 24-25 ರ ಶೈಕ್ಷಣಿಕ ಸಭೆಯನ್ನು ಮಧುಗಿರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಸಭೆಯನ್ನು ಉದ್ದೇಶಿಸಿ ಉಪನಿರ್ದೇಶಕರಾದ ಗಂಗಾಧರ್ ಮಾತನಾಡಿ ಕಳೆದ ವರ್ಷಕ್ಕಿಂತ ಈ ಬಾರಿ ಉತ್ತಮ ಫಲಿತಾಂಶ ತರುವಲ್ಲಿ ಜಿಲ್ಲೆಯ ಎಲ್ಲಾ ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕರು ಶ್ರಮಿಸಿದ್ದಾರೆ, ಹಾಗೆಯೇ ಮುಂದಿನ ಶೈಕ್ಷಣಿಕ ವರ್ಷವೂ ಇನ್ನಷ್ಟು ಹೆಚ್ಚಿನ ಫಲಿತಾಂಶಕ್ಕೆ ಶ್ರಮಿಸಬೇಕು ಎಂದು…
ಸಾಹೇ ವಿಶ್ವವಿದ್ಯಾಲಯಕ್ಕೆ ಇಂದು ‘ಅವಲಾನ್ ವಿಶ್ವವಿದ್ಯಾಲಯದ ನಿಯೋಗ ಭೇಟಿ:
ಸಿದ್ದಾರ್ಥ ವೈದ್ಯಕೀಯ –ಇಂಜಿನಿಯರಿಂಗ್ ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗಳ ಅಧ್ಯಯನ-ವಿಚಾರ ವಿನಿಮಯ ತುಮಕೂರು: ಉನ್ನತ ಶಿಕ್ಷಣದ ಅಧ್ಯಯನ ಮತ್ತು ಸಾಂಸ್ಕøತಿಕ ವಿಷಯಗಳ ವಿನಿಮಯ ಮಾಡಿಕೊಳ್ಳಲು ನಗರದ ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಸಾಹೇ) ವಿಶ್ವವಿದ್ಯಾಲಯಕ್ಕೆ ಇಂದು (ಸೋಮವಾರ) ಭೇಟಿ ನೀಡಿದ ಉತ್ತರ ಅಮೇರಿಕಾದ ಕೆರಿಬಿಯನ್ ದ್ವೀಪರಾಷ್ಟ್ರ ಕುರಾಕೋವದ ‘ಅವಲಾನ್ ವಿಶ್ವವಿದ್ಯಾಲಯದ ನಿಯೋಗ’ವೂ ಸಿದ್ದಾರ್ಥ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕಾಲೇಜುಗಳಿಗೆ ಭೇಟಿ ನೀಡಿ, ಪರಸ್ಪರ ವಿಚಾರ ವಿನಿಮಯ ಮಾಡಿಕೊಂಡಿತು. ನಗರದ…
ಡಾ. ಜಿ. ಪರಮೇಶ್ವರ್ ಅವರ ಗೃಹ ಕಛೇರಿ ಮುಂದೆ ಪ್ರತಿಭಟನೆ ಮತ್ತು ಧರಣಿ – ಸೊಗಡು ಶಿವಣ್ಣ
ದಿನಾಂಕ 30.05.2024 ರಂದು ಬೆಳಗ್ಗೆ 11 ಗಂಟೆಗೆ ಸಿದ್ಧಾರ್ಥ ನಗರದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ ಅವರ ಮನೆ ಮುಂದೆ ತುಮಕೂರು ಜಿಲ್ಲಾ ಹೇಮಾವತಿ ನೀರಾವರಿ ಹೋರಾಟ ಸಮಿತಿಯು ಧರಣಿ ನಡೆಸಲು ನಿಶ್ಚಯಿಸಿರುವುದಾಗಿ ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದರು. ಇಂದು ತುಮಕೂರು ನಗರದ ಸುಧಾ ಟಿ ಹೌಸ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಹೇಮಾವತಿ ನೀರು ನಮ್ಮದು ನಮ್ಮ ನೀರು ನಮ್ಮ ಹಕ್ಕು ವಿಚಾರವಾಗಿ ರಾಮನಗರ ಜಿಲ್ಲೆಯ ಮಾಗಡಿಗೆ ಎಕ್ಸಪ್ರೆಸ್…