
ಪ್ರಮುಖ ಸುದ್ದಿಗಳು
ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದಲ್ಲಿ ಯಾವುದೇ ಮಕ್ಕಳು ಹೊರಗುಳಿಯದಂತೆ ಸಮೀಕ್ಷೆಗೆ ಒಳಪಡಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಸೂಚನೆ.
ತುಮಕೂರು: ಜಿಲ್ಲೆಯಲ್ಲಿ ಕೈಗೊಂಡಿರುವ ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದಲ್ಲಿ ಯಾವುದೇ ಮಕ್ಕಳು ಹೊರಗುಳಿಯದಂತೆ ಸಮೀಕ್ಷೆಗೆ ಒಳಪಡಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಗಣತಿದಾರರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಸಮೀಕ್ಷೆ ಕುರಿತು ಅಭಿಪ್ರಾಯ ಹಾಗೂ ಸಲಹೆ ಬಗ್ಗೆ ಚರ್ಚಿಸುವ ಸಲುವಾಗಿ ದಲಿತ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇದುವರೆಗೆ ಪ್ರತಿ ದಿನ ಸರಾಸರಿ 8207 ಕುಟುಂಬಗಳ ಸಮೀಕ್ಷೆ ನಡೆಸಲಾಗಿದ್ದು, ಶೇಕಡಾ 103ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ ಎಂದು…
ಗ್ರಾಮ ಆಡಳಿತಾಧಿಕಾರಿಗಳ ಕಾರ್ಯವೈಕರಿಗೆ ಬೇಸತ್ತ ಸಾರ್ವಜನಿಕರು
ತುಮಕೂರು : ತುಮಕೂರು ಕಸಬಾ ಹೋಬಳಿಯ ಗ್ರಾಮ ಆಡಳಿತಾಧಿಕಾರಿಗಳ ಕಾರ್ಯವೈಖರಿಗೆ ಬೇಸತ್ತ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ ಎಂದು ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ಜಿಲ್ಲಾಧ್ಯಕ್ಷ ಎನ್.ಕೆ.ನಿಧಿ ಕುಮಾರ್ ರವರು ಅಧಿಕಾರಿಗಳ ವರ್ತನೆಗೆ ತೀವ್ರ ಆಕ್ರೋಶವನ್ನು ಹೊರ ಹಾಕಿ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ. ಮನವಿ ಸಲ್ಲಿಸಿ ಮಾತನಾಡಿದ ಕಸಬಾ ಹೋಬಳಿ ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿಗಳು ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ವಂಶವೃಕ್ಷ, ವಿಧವಾವೇತನ, ಅಂಗವಿಕಲ ವೇತನ, ವೃದ್ದಾಪ್ಯ ವೇತನ, ವಾಸ ಸ್ಥಳ ದೃಢೀಕರಣ…
ಮೇ 18ರಂದು ಖಾತೆದಾರರಿಗೆ ಭೂ ಪರಿಹಾರ ನೀಡಲು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ
ತುಮಕೂರು: ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ತಿಪಟೂರು ಉಪವಿಭಾಗಾಧಿಕಾರಿ, ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಅವರು ಮೇ 18ರಂದು ಜಂಟಿಯಾಗಿ ಕ್ಯಾಂಪ್ ನಡೆಸಿ ಖಾತೆದಾರರಿಗೆ ಭೂ ಪರಿಹಾರವನ್ನು ಪಾವತಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಗುರುವಾರ ಭೂಸ್ವಾಧೀನ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಭದ್ರಾ ಮೇಲ್ದಂಡೆ ಯೋಜನೆಗಾಗಿ ಭೂಸ್ವಾಧೀನಪಡಿಸಿಕೊಂಡಿರುವ ಚಿಕ್ಕನಾಯಕನಹಳ್ಳಿ ತಾಲ್ಲೂಕು ಬೆಳ್ಳಾರ, ತಿಮ್ಲಾಪುರ, ಹುಲ್ಲೇನಹಳ್ಳಿ, ಕಲ್ಲಹಳ್ಳಿ, ಡಿಂಕನಹಳ್ಳಿ, ಮೋಟಿಹಳ್ಳಿ ಹಾಗೂ ತಿಮ್ಮನಹಳ್ಳಿ ಗ್ರಾಮಗಳ…
ತಾಂತ್ರಿಕ ದೋಷದಿಂದಾಗಿ ಜಾತಿಗಣತಿ ವಿಳಂಬ ಸಮುದಾಯಕ್ಕೆ ಅನ್ಯಾಯ: ಕಾಲಾವಕಾಶ ಹೆಚ್ಚಿಸಲು ಮುಖಂಡರಿಂದ ಜಿಲ್ಲಾಡಳಿತಕ್ಕೆ ಒತ್ತಾಯ.
ಮಧುಗಿರಿ: ಸರ್ಕಾರ ಮಾಡಿರುವ ಒಳ ಮೀಸಲಾತಿ ವರ್ಗೀಕರಣದ ಮನೆ ಮನೆ ಭೇಟಿ ಗಣತಿ ಕಾರ್ಯಕ್ರಮ ಜಿಲ್ಲಾಡಳಿತದ ವತಿಯಿಂದ ಕಾಟಾಚಾರದ ಜಾತಿ ಗಣತಿಯಾಗಿದೆ ನಿಖರವಾದ ಗಣತಿಯಾಗಿಲ್ಲವೆಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ದೊಡ್ಡೇರಿ ಕಣಿಮಯ್ಯ ಆರೋಪಿಸಿದ್ದಾರೆ. ಪಟ್ಟಣದ ಪ್ರವಾಸಿಮಂದಿರದಲ್ಲಿ ದಲಿತ ಸಂಘಟನೆ ಹಾಗೂ ಆದಿಜಾಂಭವ ಮಹಾಸಭಾ ಸಂಘಟನೆಗಳ ವತಿಯಿಂದ ಆಯೋಜಿಸಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕಾಟಾಚಾರಕ್ಕೆ ಒಳಮೀಸಲಾತಿ ಜಾತಿಗಣತಿ ನಡೆಸುತ್ತಿದ್ದು ಪರಿಶಿಷ್ಟ ಜಾತಿಗೆ ಸೀಮಿತಗೊಳಿಸಿ ಮೇ 5 ರಿಂದ 17ರವರೆಗೆ ರಾಜ್ಯ ಸರ್ಕಾರ ಜಾತಿಗಣತಿ ಕಾರ್ಯವನ್ನು…
ರಾಜಸತ್ಯವ್ರತ ಅಥವಾ ಶನಿಪ್ರಭಾವ ನಾಟಕ ಪ್ರದರ್ಶನ
ತುಮಕೂರು : ಆತ್ಮೀಯ ಕಲ್ಪತರು ನಾಡಿನ ಕಲಾ ಬಂಧುಗಳೇ ದಿನಾಂಕ 13-04-2025ರ ಭಾನುವಾರದಂದು ಶ್ರೀ ಭೈರವ ಕಲಾ ಸಂಘ, ಸದಾಶಿವನಗರ ತುಮಕೂರು ಇವರ ಸಂಘದ 27ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಗುಬ್ಬಿ ತಾಲ್ಲೂಕು ನಿಟ್ಟೂರು ಹೋಬಳಿಯ ಸಾಗಸಂದ್ರ ಗ್ರಾಮದ ಶ್ರೀ ಕೆಂಪಮ್ಮ ದೇವಿಯವರ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ತುಮಕೂರಿನ ಹಲವಾರು ಹಿರಿಯ ರಂಗಭೂಮಿ ಕಲಾವಿದರು ಹಾಗೂ ಅನುಭವಿ ಕಲಾವಿದರುಗಳಿಂದ ಗುಬ್ಬಿ ತಾಲ್ಲೂಕಿನ ಶ್ರೀನಿವಾಸ ಡ್ರಾಮ ಸೀನರಿ ಅವರ ಭವ್ಯ ರಂಗ ಸಜ್ಜಿಕೆಯಲ್ಲಿ ತುಮಕೂರಿನ ಹೆಸರಾಂತ…
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ ಸಚಿವ ವಿ.ಸೋಮಣ್ಣ
ತುಮಕೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ. ಒಟ್ಟಾಗಿ ಸೇರಿ ಸಮನ್ವಯತೆಯಿಂದ ಕೆಲಸ ಮಾಡಿದಾಗ ಜಿಲ್ಲೆಯ ಅಭಿವೃದ್ಧಿ ಸಾಧ್ಯ ಎಂದು ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ, ಸಂಸದ ಹಾಗೂ ದಿಶಾ ಸಮಿತಿ ಅಧ್ಯಕ್ಷ ವಿ. ಸೋಮಣ್ಣ ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜರುಗಿದ ದಿಶಾ ಸಮಿತಿಯಲ್ಲಿ ಕೇಂದ್ರ ಪುರಸ್ಕøತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಬೇಕು ಎಂದು ತಿಳಿಸಿದ ಅವರು, ಜಿಲ್ಲೆಯಲ್ಲಿ…
ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆ ಅಗತ್ಯ ಟಿಬಿಜೆ
ತುಮಕೂರು: ಸರ್ಕಾರಿ ನೌಕರರು ಕೆಲಸದ ಒತ್ತಡದಲ್ಲಿ ಆರೋಗ್ಯವನ್ನು ಕಡೆಗಣಿಸಬಾರದು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆ ಅಗತ್ಯ ಎಂದು ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ನಗರದ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 2024-25ನೇ ಸಾಲಿನ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ…
ಅಖಿಲ ಕರ್ನಾಟಕ ಡಾ ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ದಲಿತ ಕ್ರಿಯಾ ಸಮಿತಿಯ ವತಿಯಿಂದ ಬಾಬು ಜಗಜೀವನ್ ರಾಮ್ರವರ ಜನ್ಮದಿನೋತ್ಸವ ಆಚರಣೆ
ತುಮಕೂರು : ನಗರದಲ್ಲಿ ಡಾ|| ಬಾಬು ಜಗಜೀವನ್ ರಾಮ್ರವರ ಜನ್ಮದಿನೋತ್ಸವವನ್ನು ಅಖಿಲ ಕರ್ನಾಟಕ ಡಾ ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ದಲಿತ ಕ್ರಿಯಾ ಸಮಿತಿಯ ವತಿಯಿಂದ ಪುಷ್ಪನಮನ ಸಲ್ಲಿಸುವುದರ ಮೂಲಕ ಆಚರಿಸಲಾಯಿತು. ಅಖಿಲ ಭಾರತ ಡಾ|| ಬಿ.ಆರ್.ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ದಲಿತ ಕ್ರಿಯಾ ಸಮಿತಿಯ ಜಿಲ್ಲಾದ್ಯಕ್ಷರಾದ ಎನ್.ಕೆ.ನಿಧಿಕುಮಾರ್ ಪುಷ್ಪನಮನ ಸಲ್ಲಿಸಿ ಬಾಬು ಜಗಜೀವನ್ ರಾಮ್ರವರನ್ನು ಸ್ಮರಿಸುತ್ತಾ ಸ್ವಾತಂತ್ರ ಹೋರಾಟದ ಕುಲುಮೆಯಲ್ಲಿ ಪುಟಗೊಂಡು ದೇಶದ ಸಾರ್ವಜನಿಕ ಜೀವನವನ್ನು ಸಂಪದಗೊಳಿಸಿದ ಮುತ್ಸದ್ಧಿಗಳ ಸಣ್ಣ ಸಾಲಿನಲ್ಲಿ ಈಗಲೂ ನಮ್ಮೊಂದಿಗಿರುವ…
ತುಮಕೂರು ಜಿಲ್ಲಾಡಳಿತದಿಂದ ಬಾಬು ಜಗಜೀವನರಾಂ ಅವರ 118ನೇ ಜಯಂತಿ ಆಚರಣೆ
ತುಮಕೂರು: ನಗರದ ಕೋತಿ ತೋಪು ಪ್ರದೇಶದಲ್ಲಿರುವ ಡಾ: ಬಾಬು ಜಗಜೀವನರಾಂ ವೃತ್ತದ ಅಭಿವೃದ್ಧಿಗೆ ಈಗಾಗಲೇ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಬಾಬು ಜಗಜೀವನರಾಂ ಅವರ 118ನೇ ಜಯಂತಿ ಪ್ರಯುಕ್ತ ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಲಯದ ಸಭಾಂಗಣದಲ್ಲಿ ಶನಿವಾರ ಬಾಬೂಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ನಗರದ ಕೋತಿತೋಪು ಪ್ರದೇಶದಲ್ಲಿ ಬಾಬು ಜಗಜೀವನರಾಂ ವೃತ್ತವನ್ನು ಅಭಿವೃದ್ಧಿಪಡಿಸಲು ಪಾಲಿಕೆ ಈಗಾಗಲೇ ಕಾರ್ಯಗತವಾಗಿದೆ. ಬಾಬು ಜಗಜೀವನರಾಂ ಭವನ ನಿರ್ಮಾಣಕ್ಕೂ ಸರ್ಕಾರದಿಂದ ಉತ್ತಮ ಸ್ಪಂದನೆ ದೊರೆತಿದ್ದು,…
ಪೊಲೀಸಪ್ಪನ ಅಜಾಗುರುಕತೆಗೆ ಬಲಿಯಾದ ಎರಡು ಬಡಜೀವಗಳು
ಪೊಲೀಸಪ್ಪನ ಅಜಾಗುರುಕತೆಗೆ ಬಲಿಯಾದ ಎರಡು ಬಡಜೀವಗಳು ಇತ್ತೀಚೆಗೆ ಪೋಲೀಸ್ ಇಲಾಖೆಯಲ್ಲಿ ಬಡವರಿಗೆ ಒಂದು ಕಾನೂನು ಉಳ್ಳವರಿಗೆ ಒಂದು ಕಾನೂನು ಎಂಬಂತಾಗಿದೆ ಸರ್ವೆ ಸಾಮಾನ್ಯವಾಗಿ ಯಾವುದೇ ವಾಹನಗಳ ಅಪಘಾತ ಸಂಭವಿಸಿದಾಗ ಅಂದರೆ ದ್ವಿಚಕ್ರ ವಾಹನ ಮತ್ತು ಕಾರು ಲಾರಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದರೆ ದೊಡ್ಡ ವಾಹನಗಳ ಮೇಲೆ ಪ್ರಕರಣ ದಾಖಲಾಗುವುದನ್ನು ನಾವು ಕಂಡಿದ್ದೇವೆ ಆದರೆ ಇತ್ತೀಚಿಗೆ ತುಮಕೂರು ನಗರದಲ್ಲಿ ನಡೆದ ಪೊಲೀಸಪ್ಪನ ಖಾಸಗಿ ವಾಹನಕ್ಕೂ ದ್ವಿಚಕ್ರವಾಹನಕ್ಕೂ ಅಪಘಾತ ಸಂಭವಿಸಿ ದ್ವಿಚಕ್ರ ವಾಹನದ ಸಾವವರರು ಪೊಲೀಸ್ ಅಪ್ಪನ…