ಪ್ರಮುಖ ಸುದ್ದಿಗಳು
ಅಂಬುಲೆನ್ಸ್ ಡ್ರೈವರ್ ಮಗಳ ಅದ್ಬುತ ಸಾಧನೆ
ಅಂಬುಲೆನ್ಸ್ ಡ್ರೈವರ್ ಮಗಳ ಅದ್ಬುತ ಸಾಧನೆ ಎಂ.ಎಸ್ಸಿ ಪುಡ್ ಅಂಡ್ ನ್ಯೂಟ್ರೀಷನ್ ವಿಭಾಗದಲ್ಲಿ ಚಿನ್ನದ ಪದಕ ಪಡೆದ ಜಯಶ್ರೀ ಎನ್. ಆರ್. ತುಮಕೂರು: ತುಮಕೂರು ವಿಶ್ವವಿದ್ಯಾನಿ¯ದಿಂದ ನಡೆದ 18ನೇ ಘಟಿಕೋತ್ಸವದಲ್ಲಿ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ನರಗನಹಳ್ಳಿ ಗ್ರಾಮದ ಶೋಭ ಎನ್. ಮತ್ತು ರಂಗಸ್ವಾಮಿ ಸಿ.ಎನ್. ದಂಪತಿಯ ಮಗಳು ಜಯಶ್ರೀ ಎನ್.ಆರ್, ಎಂ.ಎಸ್ಸಿ ಪುಡ್ ಅಂಡ್ ನ್ಯೂಟ್ರೀಷನ್ ವಿಷಯದಲಿ ವಿಶ್ವ ವಿದ್ಯಾನಿಲಯಕ್ಕೆ ಪ್ರಥಮ ರ್ಯಾಂಕ್ ಪಡೆದು ಕರ್ನಾಟಕ ರಾಜ್ಯಪಾಲರಾದ ತ್ಯಾವರ್ ಚಂದ್ ಗೆಹಲ್ಲೋಟ್ ರವರಿಂದ ಚಿನ್ನದ ಪದಕ…
ನಕಲಿ ದಾಖಲೆಗಳನ್ನು ಸೃಷ್ಟಿಸುವವರ ವಿರುದ್ಧ ಕಾನೂನು ಕ್ರಮಕ್ಕೆ ಟಿ.ಬಿ.ಜಯಚಂದ್ರ. ಸೂಚನೆ
ತುಮಕೂರು: ಸರ್ಕಾರಿ ಜಮೀನಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸುವ ಅಧಿಕಾರಿ-ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿರಾ ಶಾಸಕ ಹಾಗೂ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ಸೂಚಿಸಿದರು. ಶಿರಾ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕಂದಾಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಖಾಲಿ ಇರುವ ಸರ್ಕಾರಿ ಜಾಗವನ್ನು ಲೂಟಿ ಮಾಡುತ್ತಿರುವವರನ್ನು ಮಟ್ಟ ಹಾಕಬೇಕು. ಮಧುಗಿರಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಕೆಲವು ಅಧಿಕಾರಿ/ಸಿಬ್ಬಂದಿಗಳು ನಕಲಿ…
ಸಿದ್ಧಾರ್ಥ ರೇಡಿಯೋ ಕೇಂದ್ರಕ್ಕೆ ಬೆಂಗಳೂರಿನ ಸೇಂಟ್ ಪೌಲ್ಸ್ ಕಾಲೇಜಿನ ವಿದ್ಯಾರ್ಥಿಗಳು ಭೇಟಿ
ತುಮಕೂರು: ನಗರದ ಎಸ್ಎಸ್ಐಟಿ ಕ್ಯಾಂಪಸ್ನಲ್ಲಿರುವ ಶ್ರೀ ಸಿದ್ಧಾರ್ಥ ಮಾಧ್ಯಮ ಕೇಂದ್ರದ ರೇಡಿಯೋ ಸಿದ್ಧಾರ್ಥ 90.8 ಸಿಆರಎಸ್ಗೆ ಬುಧವಾರ(ಜುಲೈ-2) ಶೈಕ್ಷಣಿಕ ಭೇಟಿ ನೀಡಿ, ನಿರೂಪಣೆ ಮತ್ತು ನಿರ್ಮಾಣ ಕುರಿತ ಒಂದು ದಿನ ಕಾರ್ಯಾಗಾರದಲ್ಲಿ ಪಾಲ್ಗೊಂಡರು. ಮಾಧ್ಯಮ ವಿದ್ಯಾರ್ಥಿಗಳಿಗೆ ಬೇಕಾದ ಆಧುನಿಕಸೌಲಭ್ಯಗಳನ್ನು ಹೊಂದಿರುವ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಾರ್ಯಗಳನ್ನು ಮಾಡುವ ಕುರಿತು ತಜ್ಞ ಪ್ರಾಧ್ಯಾಪಕರಿಂದ ತರಬೇತಿ ನೀಡಲಾಯಿತು. ರೇಡಿಯೋ ಕುರಿತಾಗಿ ನಿರ್ಮಾಣ ಪೂರ್ವ, ನಿರ್ಮಾಣ ಮತ್ತು ನಿರ್ಮಾಣೋತ್ತರ ಕುರಿತು ಮಾಹಿತಿ ಪಡೆದುಕೊಂಡರು. ರೇಡಿಯೋ…
ಮಾದಕ ವ್ಯಸನದ ಹಿಂದೆ ಬಿದ್ದಿರುವ ಯುವ ಸಮೂಹವನ್ನು ರಕ್ಷಿಸುವಂತೆ: ತುಮಕೂರಿನಲ್ಲಿ ಜಾಗೃತಿ ಜಾಥಾ
ತುಮಕೂರು: ಇಂದಿನ ಯುವ ಜನತೆಯು ಮೋಜು ಮಸ್ತಿ ತಡರಾತ್ರಿಯ ಪಾರ್ಟಿ ಎಂದು ಜೀವನ ಶೈಲಿಯನ್ನ ಬದಲಾಯಿಸಿಕೊಂಡಿದ್ದಾರೆ ಹದಿಹರೆಯದ ವಯಸ್ಸಿನಲ್ಲಿ ಮಾದಕ ವಸ್ತುಗಳಿಗೆ ದಾಸರಾಗಿ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಸಮಾಜದ ಭವಿಷ್ಯ ರೂಪಿಸುವ ಇಂದಿನ ಯುವ ಜನತೆ ಮಾದಕ ವ್ಯಸನದ ಹಿಂದೆ ಬಿದ್ದು ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದು ಇದರಿಂದ ಈ ಯುವ ಸಮೂಹವನ್ನ ರಕ್ಷಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಸೈಕಿಯಾಟ್ರಿಕ್ ನಸಿರ್ಂಗ್ ವಿಭಾಗದ ವಿದ್ಯಾರ್ಥಿಗಳು ನಗರದ…
ಪತ್ರಕರ್ತರು ವಸ್ತುನಿಷ್ಠ ಮತ್ತು ಅನ್ವೇಷಣಾ ಪತ್ರಿಕೋದ್ಯಮವನ್ನು ಅವಲಂಬಿಸಬೇಕು: ಚೀ.ನಿ.ಪುರುಷೋತ್ತಮ್
ತುಮಕೂರು: ಪತ್ರಿಕೋದ್ಯಮ ಇಂದು ಕಾವಲು ದಾರಿಯಲ್ಲಿದ್ದು ನೈಜ ಮತ್ತು ವಸ್ತು ನಿಷ್ಠ ಸುದ್ದಿಗಳು ಕಣ್ಮರೆಯಾಗುತ್ತಿವೆ ಇಂದು ತೇಜೋವದೆಯಂತಹ ಸುದ್ದಿಗಳು ಹೆಚ್ಚಾಗುತ್ತಿದ್ದು ಪತ್ರಕರ್ತರು ವಸ್ತುನಿಷ್ಠ ಮತ್ತು ಅನ್ವೇಷಣಾತ್ಮಕ ಸುದ್ದಿಗಳನ್ನು ನೀಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಚಿ.ನಿ.ಪುರುಷೋತ್ತಮ್ ಅವರು ತಿಳಿಸಿದರು. ಎಸ್.ಎಸ್.ಐ.ಟಿ ಕ್ಯಾಂಪಸ್ ನ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ರೇಡಿಯೋ ಸಿದ್ದಾರ್ಥ 90.8 ಬಾನುಲಿ ಕೇಂದ್ರದಿಂದ ಮಂಗಳವಾರ ಆಯೋಜನೆ ಮಾಡಲಾಗಿದ್ದ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಮುಖ್ಯ ಅತಿಥಿಗಳಾಗಿ ಭಾಗವಹಿಸಿ…
ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ನಿಯಮಗಳನ್ನು ಪಾಲಿಸಲು ಮನವಿ
ತುಮಕೂರು: ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸಾರ್ವಜನಿಕರು ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ನರಸಿಂಹಮೂರ್ತಿ ಮನವಿ ಮಾಡಿದರು. ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ-2025ರ ಅಂಗವಾಗಿ ನಗರದ ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಅವರ ಕಚೇರಿ ಆವರಣದಲ್ಲಿಂದು ಏರ್ಪಡಿಸಿದ್ದ ವಿದ್ಯುತ್ ಸುರಕ್ಷತಾ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಅರಿವಿಲ್ಲದೆ ಹಲವಾರು ವಿದ್ಯುತ್ ಅವಘಡಗಳು ಸಂಭವಿಸುತ್ತವೆ. ಈ ನಿಟ್ಟಿನಲ್ಲಿ ವಿದ್ಯುತ್ ಬಳಕೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಈ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯುತ್…
ಸಿದ್ದಾರ್ಥ ಶಿಕ್ಷಣ ಸಂಸ್ಥೆ ಆರೋಗ್ಯ ದಾಸೋಹ ಮಾಡುತ್ತಿದೆ: ಸಿದ್ದಗಂಗಾ ಮಠದ ಉತ್ತರಾಧಿಕಾರಿ ಕಿರಿಯ ಸ್ವಾಮೀಜಿ ಶಿವಸಿದ್ದೇಶ್ವರ ಸ್ವಾಮೀಜಿ
ಸಿದ್ದಾರ್ಥ ಶಿಕ್ಷಣ ಸಂಸ್ಥೆ ಆರೋಗ್ಯ ದಾಸೋಹ ಮಾಡುತ್ತಿದೆ: ಸಿದ್ದಗಂಗಾ ಮಠದ ಉತ್ತರಾಧಿಕಾರಿ ಕಿರಿಯ ಸ್ವಾಮೀಜಿ ಶಿವಸಿದ್ದೇಶ್ವರ ಸ್ವಾಮೀಜಿ ತುಮಕೂರು: ಜಗತ್ತಿನ 84 ಲಕ್ಷ ಜೀವ ರಾಶಿಗಳಲ್ಲಿ ಮನುಷ್ಯನು ಒಬ್ಬನಾಗಿದ್ದು, ತನ್ನ ಭೋಗ ಜೀವನದಿಂದಾಗಿ ದೇಹ ಮತ್ತು ಮನಸ್ಸಿನ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುವಲ್ಲಿ ವಿಫಲನಾಗಿದ್ದು ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾನೆ. ಇಂತಹ ಕಾಯಿಲೆಗಳಿಗೆ ಪರಿಹಾರ ಕಂಡುಕೊಳ್ಳಲು ಅಕ್ಷರಸಂತ ಡಾ. ಗಂಗಾಧರಯ್ಯನವರು ಕಟ್ಟಿ ಬೆಳಸಿರುವ ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆಯಲ್ಲಿ ಆರೋಗ್ಯದ ದಾಸೋಹ ನಡೆಯುತ್ತಿದೆ ಎಂದು ಸಿದ್ದಗಂಗಾ ಮಠದ ಉತ್ತರಾಧಿಕಾರಿಯಾಗಿರುವ ಕಿರಿಯ ಸ್ವಾಮೀಜಿ ಶ್ರೀ…
ಪ್ರಸ್ತುತ ವರ್ಷವೇ ಹಾಗಲವಾಡಿ ಭಾಗಕ್ಕೆ ಹೇಮಾವತಿ ನೀರು. ಶಾಸಕ ಎಸ್ ಆರ್ ಶ್ರೀನಿವಾಸ್ ವಿಶ್ವಾಸ.
ತುಮಕೂರು :ಕಳೆದ 25 ವರ್ಷದ ಹೋರಾಟದ ಫಲವಾಗಿ ಹಾಗಲವಾಡಿ ಹೋಬಳಿಯ ಜನತೆಯ ಕನಸು ನನಸಾಗಿದ್ದು ಪ್ರಸ್ತುತ ವರ್ಷವೇ ಹೇಮಾವತಿ ನೀರು ಈ ಭಾಗಕ್ಕೆ ಹರಿಯಲಿದೆ ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ವಿಶ್ವಾಸವನ್ನು ವ್ಯಕ್ತಪಡಿಸಿದ್ದರು. ಗುಬ್ಬಿ ತಾಲೂಕಿನ ಮೂಕನಹಳ್ಳಿ ಪಟ್ಟಣ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಎಂ ಹೆಚ್ ಪಟ್ಟಣ ಮಾರ್ಗವಾಗ ಸೇರ್ವೆಗಾರನ ಪಾಳ್ಯ ಮತ್ತು ಮಣ್ಣಿಮಾರಿ ದೇವಸ್ಥಾನ ಸಂಪರ್ಕದ ಸುಮಾರು 7ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಕಳೆದ 25…
ವೈದ್ಯಕೀಯ ಕ್ಷೇತ್ರದಲ್ಲಿ ನಿರಂತರವಾಗಿ ಸಂಶೋಧನೆಗಳ ಅಗತ್ಯವಿದೆ ಡಾ, ಜಿ, ಪರಮೇಶ್ವರ
ತುಮಕೂರು : ವೈದ್ಯಕೀಯ ಸಂಶೋಧನೆಯು ಆರೋಗ್ಯ, ರೋಗಗಳ ಶೀಘ್ರ ಪತ್ತೆ ಮತ್ತು ಮಾನವ ಶರೀರಶಾಸ್ತ್ರದ ವ್ಯವಸ್ಥಿತ ತನಿಖೆಗೆ ಸಹಕಾರಿಯಾಗುತ್ತದೆ. ವೈದ್ಯಕೀಯ ಸಂಶೋಧನೆಗಳಿಂದ ಆರೋಗ್ಯದ ಫಲಿತಾಂಶಗಳನ್ನು ಬೇಗ ಸುಧಾರಿಸುವ ಮತ್ತು ಜೀವಿತಾವಧಿಯನ್ನು ವಿಸ್ತರಿಸುವುದಕ್ಕೆ ಸಹಕಾರಿಯಾಗುವುದರಿಂದ ವೈದ್ಯಕೀಯ ಕ್ಷೇತ್ರದಲ್ಲಿ ನಿರಂತರವಾಗಿ ಸಂಶೋಧನೆಗಳು ಅಗತ್ಯವಿದೆ ಎಂದು ಸಾಹೇ ವಿವಿಯ ಕುಲಾಧಿಪತಿಗಳು ಹಾಗೂ ಗೃಹ ಸಚಿವರಾದ ಡಾ. ಜಿ ಪರಮೇಶ್ವರ ಅವರು ಪ್ರತಿಪಾದಿಸಿದ್ದಾರೆ. ನಗರದ ಸಮೀಪದ ಅಗಳಕೋಟೆಯಲ್ಲಿರುವ ಶ್ರೀ ಸಿದ್ದಾರ್ಥ ದಂತ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ‘ಸವ್ಯಸಾಚಿ ಸಭಾಂಗಣ’ವನ್ನು ಉದ್ಘಾಟಿಸಿ…
ಸಹಕಾರ ಸಚಿವ ಕೆ, ಎನ್, ರಾಜಣ್ಣನವರ ಅಮೃತ ಮಹೋತ್ಸವಕ್ಕೆ ರಾಜಣ್ಣ ( ಕೋರಾ) ರವರಿಂದ ಅಭಿನಂದನೆಗಳು
ತುಮಕೂರು : ರಾಜ್ಯದ ಸರ್ವ ಜನಾಂಗದ ಅಭಿವೃದ್ಧಿಗೆ ಸಹಕಾರ ನೀಡುವ ಮೂಲಕ ಸಹಕಾರ ರತ್ನ ಎಂಬ ಬಿರುದನ್ನು ಪಡೆದಿರುವ ಕೆ, ಎನ್, ರಾಜಣ್ಣನವರ 75 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಿರುವುದು ನಾಡಿನ ಜನತೆಗೆ ಸಂತಸದ ವಿಷಯ ಎಂದು ಜಿಲ್ಲಾ ಜಾಗೃತಿಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯ ರಾಜಣ್ಣ (ಕೋರಾ) ರವರು ಅಭಿನಂದನೆ ತಿಳಿಸಿದರು. ತುಮಕೂರು ನಗರದಲ್ಲಿ ಮಾತನಾಡಿದ ಅವರು ಕೆ, ಎನ್ ರಾಜಣ್ಣನವರು ದಿನ ದಲಿತರ…