
ಪ್ರಮುಖ ಸುದ್ದಿಗಳು
ಎಸ್.ಎಸ್.ಎಲ್.ಸಿ. ಮರುಮೌಲ್ಯಮಾಪನ: ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 8ನೇ ಸ್ಥಾನ ಪಡೆದ ಪ್ರಿಯಾ ಶಾಲೆಯ ಸಿಂಚನ*
ತುರುವೇಕೆರೆ: ಎಸ್.ಎಸ್.ಎಲ್ .ಸಿ ಪರೀಕ್ಷೆಯ ಫಲಿತಾಂಶದಲ್ಲಿ 607 ಅಂಕ ಗಳಿಸಿ ತಾಲೂಕಿಗೆ ತೃತೀಯ ಸ್ಥಾನ ಪಡೆದಿದ್ದ ಶಾಲೆಯ ವಿದ್ಯಾರ್ಥಿನಿ ಎಂ.ಬಿ.ಸಿಂಚನ ಮರು ಮೌಲ್ಯಮಾಪನದ ನಂತರ 617ಕ್ಕೆ ಅಂಕ ಗಳಿಕೆ ಹೆಚ್ಚಿಸಿಕೊಂಡು ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 8 ನೇ ಸ್ಥಾನವನ್ನು ಪಡೆದಿರುತ್ತಾಳೆ ಎಂದು ಪ್ರಿಯಾ ಆಂಗ್ಲ ಶಾಲೆಯ ಅಧ್ಯಕ್ಷ ಎಂ.ಎನ್.ಚಂದ್ರೇಗೌಡ ತಿಳಿಸಿದರು. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೆಲವು ದಿನಗಳ ಹಿಂದೆಯಷ್ಟೇ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟವಾಗಿ ನಮ್ಮ ಶಾಲೆಯು ಶೇ.100 ಫಲಿತಾಂಶ ಪಡೆದಿದೆ. ಈ…
ಕೆ ಪಿ ಸಿ ಸಿ ಸದಸ್ಯರಾಗಿ ಡಿ ಸಿ ಗೌರೀಶಂಕರ್ ನೇಮಕ
ಕೆಪಿಸಿಸಿಯ ನೂತನ ಸದಸ್ಯರಾಗಿ ತುಮಕೂರು ಗ್ರಾಮಾಂತರ ಮಾಜಿ ಶಾಸಕ ಡಿಸಿ ಗೌರಿಶಂಕರ್ ನೇಮಕವಾಗಿದ್ದಾರೆ. ಕೆಪಿಸಿಸಿಯ ನೂತನ ಸದಸ್ಯರಾಗಿ ಡಿಸಿ ಗೌರಿಶಂಕರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಡಿ ಸಿ ಗೌರೀಶಂಕರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಐದೇ ತಿಂಗಳಲ್ಲಿ ಗ್ರಾಮಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸದೃಢಗೊಳಿಸಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡರಿಗೆ 71000 ಮತ ಹಾಕಿಸಿ…
ಕಿಡಿಗೇಡಿಗಳಿಂದ ವಿ. ಸೋಮಣ್ಣನವರಿಗೆ ಹಾಗೂ ಹಲವು ನಾಯಕರಿಗೆ ಅವಮಾನ.
ಕೊರಟಗೆರೆ ತಾಲೂಕು ಕೋಳಾಲ ಹೋಬಳಿಯ ನೀಲಗೊಂಡಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂಕೇನಹಳ್ಳಿ ಗ್ರಾಮದಲ್ಲಿ ಬಿಜೆಪಿ ನಾಯಕರಿಗೆ ಅವಮಾನ. ಕಿಡಿಗೇಡಿಗಳಿಗೆ ತುಮಕೂರು ಜಿಲ್ಲೆಯ ನೂತನ ಸಂಸದರಾದ ವಿ ಸೋಮಣ್ಣನವರಿಗೆ ಕೇಂದ್ರ ಸಚಿವ ಸ್ಥಾನ ಲಭಿಸಿರುವುದನ್ನು ರಹಿಸಲಾರದೆ ವಿ ಸೋಮಣ್ಣನವರು ಕೇಂದ್ರ ಸಚಿವ ಸ್ಥಾನದ ಪ್ರಮಾಣ ವಚನ ಸ್ವೀಕಾರದ ದಿನದಂದೆ ಸಂಕೇನಹಳ್ಳಿ ಜಾತ್ರಾ ಮಹೋತ್ಸವಕ್ಕೆ ಶುಭ ಕೋರಲು ಹಾಕಿದ್ದ ಬಿಜೆಪಿ ನಾಯಕರ ಫ್ಲೆಕ್ಸ್ ಗಳನ್ನು ಗುಂಪು ಕಟ್ಟಿಕೊಂಡು ಹರಿದು ಹಾಕಿದ್ದಾರೆ. ವಿಶೇಷವಾಗಿ ಸಂಕೇನಹಳ್ಳಿ ಗ್ರಾಮದಲ್ಲಿ…
ಜೂನ್ 10 ರಿಂದ 13ರವರೆಗೆ ಶ್ರೀದುರ್ಗಮ್ಮ ಮತ್ತು ಶ್ರೀಪೂಜಮ್ಮ ದೇವರುಗಳ ಜಾತ್ರಾ ಮಹೋತ್ಸವ
ತುಮಕೂರು ನಗರದ ಪುರಾತನ ಇತಿಹಾಸ ಪ್ರಸಿದ್ದ ಎನ್,ಆರ್ ಕಾಲೋನಿಯ ಕುಲದೇವತೆ ಬಳ್ಳಾರಿ ಶ್ರೀ ದುರ್ಗಮ್ಮ, ಪೂಜಮ್ಮ ಮತ್ತು ದಾಳಮ್ಮ ಜಾತ್ರಾ ಮಹೋತ್ಸವವನ್ನು ಜೂನ್ 10 ರಿಂದ 13 ರವರೆಗೆ ಶ್ರೀ ದುರ್ಗಮ್ಮ ದೇವಸ್ಥಾನ ಜೀರ್ಣೋದ್ಧಾರ ಮತ್ತು ಅಭಿವೃದ್ಧಿ ಸಂಘ ಮತ್ತು ಕುಲವಾಡಿಗಳ ನೇತೃತ್ವದಲ್ಲಿ ಜಾತ್ರೆಯನ್ನು ಆಯೋಜಿಸಲಾಗಿದೆ. ಜೂನ್ 10ರ ಸೋಮವಾರ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲೀವಾಹನ ಶಕ ವರ್ಷಂಗಳು 1945ನೇ ಶ್ರೀ ಶೋಭಕೃತುನಾಮ ಸಂವತ್ಸರದ ಜ್ಯೇಷ್ಠ ಮಾಸ ರಾತ್ರಿ 8 ಗಂಟೆಗೆ ತುಮಕೂರು…
ಪ್ರತಿಭಾವಂತ ವಿದ್ಯಾರ್ಥಿನಿಗೆ ಲಯನ್ಸ್ ಕ್ಲಬ್ ವತಿಯಿಂದ ಆರ್ಥಿಕ ನೆರವು
ತುರುವೇಕೆರೆ: ಪಟ್ಟಣದ ಲಯನ್ಸ್ ಕ್ಲಬ್, ಲಯನ್ಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿನಿಗೆ ಮುಂದಿನ ಶೈಕ್ಷಣಿಕ ಭವಿಷ್ಯಕ್ಕಾಗಿ 30 ಸಾವಿರ ರೂಗಳ ಆರ್ಥಿಕ ನೆರವನ್ನು ನೀಡಲಾಯಿತು. ಲಯನ್ಸ್ ಸಂಸ್ಥಾಪಕ ಕಾರ್ಯದರ್ಶಿ ಡಾ.ಎ. ನಾಗರಾಜ್ ಮಾತನಾಡಿ, ಸೇವಾ ಕ್ಷೇತ್ರದಲ್ಲಿ ಲಯನ್ಸ್ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸ್ಥಾನ ಪಡೆದಿದೆ. ಸಾಮಾಜಿಕ ಕಳಕಳಿ, ಸಮಾಜದಲ್ಲಿನ ಅಶಕ್ತರು, ಅಸಹಾಯಕರಿಗೆ ಅಗತ್ಯ ನೆರವು ನೀಡುವುದೇ ಲಯನ್ಸ್ ನ ಗುರಿಯಾಗಿದೆ ಎಂದರು. ಪ್ರತಿ ವರ್ಷ ಲಯನ್ಸ್…
ದ್ವಿದಳ ಧಾನ್ಯ, ಸಿರಿ ಧಾನ್ಯಗಳನ್ನು ಆಹಾರದಲ್ಲಿ ಹೆಚ್ಚಾಗಿ ಬಳಸಬೇಕು ಇದರಿಂದ ಆರೋಗ್ಯದಲ್ಲಿ ಸಮತೋಲನ ಕಾಪಾಡಲು ಸಾಧ್ಯವಾಗುತ್ತದೆ ಎಂದು ಒಕ್ಕೂಟದ ಅಧ್ಯಕ್ಷೆ ಮಂಗಳ ಗೌರಮ್ಮ ಅಭಿಮತ .
ಗುಬ್ಬಿ : ಸುದ್ದಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ವತಿಯಿಂದ ತಾಲೂಕಿನ ನಿಟ್ಟೂರು ವಲಯದ ನಿಟ್ಟೂರು ಬಿ ಕಾರ್ಯ ಕ್ಷೇತ್ರದ ನಿರಂತರ ಜ್ಞಾನ ವಿಕಾಸ ಕೇಂದ್ರದಲ್ಲಿ ಸಿರಿ ಧಾನ್ಯ ಮಾಹಿತಿ ಕಾರ್ಯಕ್ರಮದಡಿಯಲ್ಲಿ ಸಿರಿಧಾನ್ಯ ಪ್ರಾತ್ಯೇಕ್ಷಿಕತೆ ಮತ್ತು ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳ ಗೌರಮ್ಮ ಅವರು ನಮ್ಮ ಆಹಾರದಲ್ಲಿ ಪ್ರತಿ ನಿತ್ಯ ಒಂದು ಸಿರಿಧಾನ್ಯ ವನ್ನು ಸೇವಿಸುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಎಂದು ತಿಳಿಸಿದರು. ಸಂಪನ್ಮೂಲ…
ತುಮಕೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಹೇಮಾವತಿ ಎಕ್ಸ್ಪ್ರೆಸ್ ಕೆನಲ್ ವಿರುದ್ಧದ ಹೋರಾಟಕ್ಕೆ ಜಿಲ್ಲೆಯ ವಿವಿಧ ಮಠಾಧೀಶರ ಬೆಂಬಲ
ತುಮಕೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಹೇಮಾವತಿ ಎಕ್ಸ್ಪ್ರೆಸ್ ಕೆನಲ್ ವಿರುದ್ಧದ ಹೋರಾಟಕ್ಕೆ ಜಿಲ್ಲೆಯ ವಿವಿಧ ಮಠಾಧೀಶರು ಬೆಂಬಲ ವ್ಯಕ್ತಪಡಿಸುವುದರ ಮೂಲಕ ಯಾವುದೇ ಕಾರಣಕ್ಕೂ ಜಿಲ್ಲೆಯ ರೈತರ ಹಿತವನ್ನು ಕಡೆಗಣಿಸಿ ಎಕ್ಸ್ಪ್ರೆಸ್ ಕೆನಲ್ ಕಾಮಗಾರಿ ಮುಂದುವರಿಸಬಾರದೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. ತುಮಕೂರು ನಗರದ ಖಾಸಗಿ ಕಲ್ಯಾಣ ಮಂಟಪವೊಂದರಲ್ಲಿ ಸುದ್ದಿಗೋಷ್ಠಿ ನಡೆಸಿದ ಜಿಲ್ಲೆಯ ವಿವಿಧ ಮಠಗಳ ಮಠಾಧೀಶರು ಹೇಮಾವತಿ ಯೋಜನೆ ಅಡಿ ತುಮಕೂರು ಜಿಲ್ಲೆಗೆ 25 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿರುವುದು ಸರಿಯಷ್ಟೆ, ಆದರೆ ಇದುವರೆಗೂ ಕೂಡ…
ಸಿದ್ಧಾರ್ಥ ಅಕಾಡೆಮಿ ವತಿಯಿಂದ ಪರಿಸರ ದಿನಾಚರಣೆ ಆಯೋಜನೆ
ತುಮಕೂರು : ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಹಾಗೂ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಸಂಯುಕ್ತವಾಗಿ ವಿಶ್ವ ಪರಿಸರ ದಿನಾಚರಣೆ ಆಚರಣೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಎಲೆಕ್ಟ್ರಿಕ್ ವಾಹನಗಳ ಕೊಡುಗೆ ಕುರಿತ ವಿಶೇಷ ಕಾರ್ಯಕ್ರಮ ನಡೆಸಲಾಯಿತು. ನಗರದ ಎಸ್ಎಸ್ಐಟಿ ಸ್ಟೆಫ್ ಸೆಮಿನಾರ್ ಹಾಲ್ನಲ್ಲಿ ಸಿವಿಲ್ ಇಂಜಿನಿಯರ್ ವಿಭಾಗ ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮವನ್ನು ಆ್ಯಡಮ್ಸ್ ಮಾರ್ಕೇಟಿಂಗ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ ಗೋಂಧಳಿ ಅವರು ಉದ್ಘಾಟಿಸಿ ಮಾತನಾಡಿದರು. ಗಿಡ ನೆಡುವುದಷ್ಟೆ ಅಲ್ಲದೆ ಅದನ್ನು…
ಜೀವಸಂಕುಲ ಉಳಿವಿಗೆ ಪರಿಸರ ಸಂರಕ್ಷಣೆ ಅತ್ಯಗತ್ಯ: ಅನಿತಾ
ತುರುವೇಕೆರೆ: ತಾಲೂಕಿನ ಕೊಂಡಜ್ಜಿ ವಲಯದ ಮಾಚೇನಹಳ್ಳಿ ಕಾರ್ಯಕ್ಷೇತ್ರದ ಬಾಪೂಜಿ ಕೇಂದ್ರೀ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಪರಿಸರ ದಿನಾಚರಣೆ ಆಚರಿಸಲಾಯಿತು. ಮಹಿಳಾ ಒಕ್ಕೂಟದ ಅಧ್ಯಕ್ಷೆ ಅನಿತಾ ಮಾತನಾಡಿ, ಮಗುವಿನ ಪೋಷಣೆಯಲ್ಲಿ ತಾಯಿಯ ಪಾತ್ರ ಎಷ್ಟು ಮಹತ್ವದ್ದೋ, ಜೀವ ಸಂಕುಲದ ಉಳಿವಿನಲ್ಲಿ ಪರಿಸರದ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಪರಿಸರ ಸಂರಕ್ಷಿಸಿ ತಮ್ಮ ಜವಾಬ್ದಾರಿ ನಿರ್ವಹಿಸಬೇಕಿದೆ ಎಂದರು. ಯೋಜನಾಧಿಕಾರಿ ಅನಿತಾಶೆಟ್ಟಿ ಮಾತನಾಡಿ, ಧರ್ಮಸ್ಥಳ ಸಂಸ್ಥೆಯು…
ಅಧಿಕಾರಿಗಳ ನಿರ್ಲಕ್ಷದಿಂದ ತುಂಡಾಗಿ ನೆಲಕ್ಕೆ ಬಿದ್ದ ವಿದ್ಯುತ್ ಕಂಬಗಳು
ತಿಪಟೂರು ಸುದ್ದಿ: ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ವ್ಯಾಪ್ತಿಯಲ್ಲಿ ಬರುವ ಬಿಳಿಗೆರೆ ಗ್ರಾಮದಲ್ಲಿ, ಎಲ್ ಟಿ ಎ ಬಿ ಕೇಬಲ್ ವರ್ಕ್ ನಡೆಯುವಾಗ ವಿದ್ಯುತ್ ಕಂಬಗಳು ಮುರಿದು ಬಿದ್ದಿರುವ ಘಟನೆ ನಡೆದಿದೆ. ಸಂಬಂಧಪಟ್ಟ ಬೆಸ್ಕಾಂ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡದೆ, ಅವೈಜ್ಞಾನಿಕ ಕಾಮಗಾರಿಯನ್ನು ಏಕಾಏಕಿ ಗುತ್ತಿಗೆದಾರರು ಮಧ್ಯಾಹ್ನ 1:00 ಸುಮಾರಿನಲ್ಲಿ ಅಲ್ಯೂಮಿನಿಯಂ ಕೇಬಲ್ ಬದಲು ಎಲ್ ಟಿ ಎ ಬಿ ಕೇಬಲ್ ಅಳವಡಿಸುವ, ಕಾಮಗಾರಿ ನಡೆಸುವ ಸಂದರ್ಭದಲ್ಲಿ ಎರಡು ವಿದ್ಯುತ್ ಕಂಬಗಳು ಮುರಿದು ಧರೆಗೂರಳಿವೆ. …