ಪ್ರಮುಖ ಸುದ್ದಿಗಳು
ಹನುಮ ಜಯಂತಿಯ ಪ್ರಯುಕ್ತ ಶ್ರೀ ವೀರಾಂಜನೇಯ ಸ್ವಾಮಿಯವರ ಭವ್ಯಮೂರ್ತಿಗೆ ಪಂಚಾಮೃತ ಅಭಿಷೇಕ
ಗುಬ್ಬಿ ಎನ್ ರಾಂಪುರ ::ಹನುಮಜಯಂತಿ ಗುಬ್ಬಿ ತಾ/ ದಿ- 02.೦4.2026 ಶನಿವಾರ ಹನುಮ ಜಯಂತಿಯ ಪ್ರಯುಕ್ತ ನಿಟ್ಟೂರು ಹೋಬಳಿ ಎನ್ ರಾಂಪುರ ಗ್ರಾಮದಲ್ಲಿ ನಾಡಿನ.ಒಳಿತಿಗಾಗಿ ಅಂದು ಬ್ರಾಹ್ಮಿ ಮುಹೂರ್ತ ದಲ್ಲಿ ಹಸಿರು ತೋಪಿನ ನಡುವೆ ವಿರಾಜಮಾನರಾದ ಪುರಾತನ ಪ್ರಸಿದ್ಧ ಶ್ರೀ ವೀರಾಂಜನೇಯ ಸ್ವಾಮಿಯವರ ಭವ್ಯಮೂರ್ತಿಗೆ ಪಂಚಾಮೃತ ಅಭಿಷೇಕ ಮತ್ತು ಲೋಕದ ಒಳಿತಿಗಾಗಿ ಹೋಮ ಹವನ ಕಾರ್ಯಗಳು ಸಾಗುತ್ತವೆ. ಅದೇ ದಿನ ಗ್ರಾಮದ ಕ್ಷೇತ್ರ ಪಾಲಕ ಬಸವೇಶ್ವರ ಸ್ವಾಮಿ,, ತಿಮ್ಮಪ್ಪ,, ಆಂಜನೇಯ ಪರಿವಾರ ದೇವರುಗಳ ಆಗಮನ ವಿಶೇಷ…
ಮಾರ್ಚ್ 28 ರಂದು ವಿಶ್ವ ಮಹಿಳಾ ದಿನಾಚರಣೆ ಹಾಗೂ ಬೃಹತ್ ಆರೋಗ್ಯ ತಪಾಸಣಾ ಶಿಬಿರ.
ತುಮುಲ್ ವತಿಯಿಂದ ಮಾರ್ಚ್ 28 ರಂದು ಗುಬ್ಬಿ ನಗರದಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಾಗೂ ಬೃಹತ್ ಆರೋಗ್ಯ ತಪಾಸಣಾ ಶಿಬಿರ.ಆಯೋಜನೆ. ಭಾರತಿ ಶ್ರೀನಿವಾಸ್. ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮಾರ್ಚ್ 28 ರಂದು ಗುಬ್ಬಿ ನಗರದ ನಂದಿನಿ ಕ್ಷೀರ ಭವನದ ಕಛೇರಿ ಆವರಣದಲ್ಲಿ ಆಯೋಜಿಸಲಾಗಿದ್ದು ಇದರ ಸದುಪಯೋಗವನ್ನು ಹಾಲು ಉತ್ಪಾದಕ ಸಂಘಗಳ ಸದಸ್ಯರುಗಳು. ತಾಲೂಕಿನ…
ಜಿ.ಪಂ ಸಿಇಒಗೆ ಪಿಯು ಡಿಡಿ ಕಚೇರಿ ಆಡಳಿತ ನಿಯಂತ್ರಣ
ಜಿ.ಪಂ ಸಿಇಒಗೆ ಪಿಯು ಡಿಡಿ ಕಚೇರಿ ಆಡಳಿತ ನಿಯಂತ್ರಣ ಪ್ರಸ್ತಾವನೆ ಹಿಂಪಡೆಯಲು ಸರ್ಕಾರಕ್ಕೆ ಉಪನ್ಯಾಸಕರ ಒತ್ತಾಯ ತುಮಕೂರು: ಸರ್ಕಾರದ ಪ್ರಸ್ತಾಪಿಸರುವ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಜಿಲ್ಲಾ ಉಪ ನಿರ್ದೇಶಕರ ಕಚೇರಿಗಳ ಮೇಲಿನ ಆಡಳಿತಾತ್ಮಕ ನಿಯಂತ್ರಣವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ವರ್ಗಾಯಿಸುವ ಪ್ರಸ್ತಾವನೆ ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ನೇತೃತ್ವದಲ್ಲಿ ಉಪನ್ಯಾಸಕರು ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ…
ಗುಬ್ಬಿ ಸರ್ಕಾರಿ ಶಾಲೆ ಅಭಿವೃದ್ಧಿಗೆ ಕೋಟ್ಯಂತರ ರೂ. ವೆಚ್ವಮಾಡಿದ ಸಿನಾಪ್ಸಿಸ್ ಸಂಸ್ಥೆಗೆ ಶ್ಲಾಘನೆ
ಸ್ಮಾರ್ಟ್ ಸೌಲಭ್ಯದ ಸದ್ಬಳಕೆಗೆ ತಹಸೀಲ್ದಾರ್ ಆರತಿ ವಿದ್ಯಾರ್ಥಿಗಳಿಗೆ ಕರೆ ತುಮಕೂರು, ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು ನೀಡುವ ಸೌಲಭ್ಯಗಳನ್ನು ಬಳಸಿಕೊಂಡು ಸ್ಮಾರ್ಟ್ ಆಗುವಂತೆ ಗುಬ್ಬಿ ತಹಸೀಲ್ದಾರ್ ಆರತಿ ಬಿ. ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. ಪಟ್ಟಣದ ಬಾಲಕಿಯರ ಪ್ರೌಢ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅಮೆರಿಕಾ ಮೂಲದ ಬೆಂಗಳೂರಿನ ಸಿನಾಪ್ಸಿಸ್ ಸಂಸ್ಥೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಆಧುನಿಕ ಸೌಲಭ್ಯಗಳೊಂದಿಗೆ ನವೀಕರಿಸಿ ಕೊಟ್ಟಿರುವ ಕ್ರಮವನ್ನು ಶ್ಲಾಘಿಸಿದ ಅವರು, ಈ ಸೌಲಭ್ಯಗಳ ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು…
ಒಳ ಮಿಸಲಾತಿ ಜಾರಿಗೆ ಒತ್ತಾಯಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
ಮೀಸಲಾತಿ ಜಾರಿಗೆ 35 ವರ್ಷಗಳಿಂದ ನಿರಂತರ ಹೋರಾಟ ಮಾಡಿದ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಜಾರಿ ಮಾಡುವಲ್ಲಿ ಸರ್ಕಾರ ವಿಳಂಬ ದೋರಣೆ ಅನುಸರಿಸುತ್ತಿದ್ದು. ಸಮಾಜದಲ್ಲಿ ಶೋಷಣೆಗೆ ಒಳಗಾದ ಮಾದಿಗ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಒಳ ಮೀಸಲಾತಿಯನ್ನು ಕೂಡಲೇ ಜಾರಿ ಕೂಡಲೇ ಮಾಡಬೇಕು ಎಂದು ಆಗ್ರಹಿಸಿ ಗುಬ್ಬಿ ತಾಲ್ಲೂಕಿನ , ಮಾದಿಗ ಸಮುದಾಯದ ಮುಖಂಡರು ಹಾಗೂ ದಲಿತಪರ ಸಂಘಟನೆಗಳು ಒಗ್ಗೂಡಿ ತಾಲ್ಲೂಕು ಕಚೇರಿಯ ಮುಂದೆ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಬಳಿ ಪ್ರತಿಭಟನೆ ನಡೆಸಿದರು. ಗುಬ್ಬಿ ಪ್ರವಾಸಿ ಮಂದಿರದಿಂದ ತಮಟೆ ಬಡಿಯುವ…
ವಿದ್ಯೆ ಸಾದಕನಸೊತ್ತೆ ಹೊರತು ಸೋಮಾರಿಯ ಸೊತ್ತಲ್ಲ ಎಸ್.ಡಿ.ಎಂ ಸಿ.ಅದ್ಯಕ್ಷ ವಕೀಲ ಶಿವಣ್ಣ
ಮಧುಗಿರಿ . ವಿದ್ಯೆ ಸಾದಕನಸೊತ್ತೆ ಹೊರತು ಸೋಮಾರಿಯ ಸೊತ್ತಲ್ಲ ಎಂದು ಪ್ರಾ ರ್ಥ ನಾಪಬ್ಲಿಕ್ ಶಾಲೆ ಯ ಎಸ್.ಡಿ.ಎಂ ಸಿ.ಅದ್ಯಕ್ಷ ವಕೀಲ ಶಿವಣ್ಣ ತಿಳಿಸಿದರು ಮಧುಗಿರಿ ತಾಲೂಕಿನ ದಂಡಿನ ದಿಬ್ಬ ಗ್ರಾಮದ ಪ್ರಾರ್ಥನಾ ಪಬ್ಲಿಕ್ ಶಾಲಾ ಆವರಣದಲ್ಲಿ ಏರ್ಪಡಿಸಿ ದ್ದ ವಿನಾಯಕ ಮತ್ತು ಸರಸ್ವತಿ ವಿಗ್ರಹ ಗಳ ಪ್ರತಿಷ್ಠಾಪನೆ ಹಾಗೂ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದ ಅದ್ಯಕ್ಷ ತೆ ವಹಿಸಿ ಮಾತನಾಡಿದ ಅವರು ಪುಸ್ತಕ ಸರಸ್ವತಿ ಯಾಗಿದೆ ಜ್ಞಾನ ಶಿಕ್ಷಣ ಮತ್ತು ಸಾಹಿತ್ಯದ ಸಂಕೇತ ….
ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆ
ತುಮಕೂರು: ಮಹಿಳೆಗೆ ನೀಡುವ ಯಾವುದೇ ಕೊಡುಗೆ ಮತ್ತೆ ದ್ವಿಗುಣವಾಗಿ ಸಮಾಜಕ್ಕೆ ಮರುಸಂದಾಯವಾಗುತ್ತದೆ. ಇಂತಹ ಗುಣ ಹೊಂದಿರುವ ಮಹಿಳೆಗೆ ಶಿಕ್ಷಣ, ಅಧಿಕಾರ ಮತ್ತು ಉನ್ನತ ಸ್ಥಾನ-ಮಾನ ನೀಡುವುದು ಅಗತ್ಯವಾಗಿದೆ ಎಂದು ಕರ್ನಾಟಕ ಮಹಿಳಾ ಉದ್ಯಮಿಗಳ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಸಿ ಭುವನೇಶ್ವರಿ ಅವರು ಅಭಿಪ್ರಾಯಪಟ್ಟರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸಾಹೇ ವಿವಿ, ಕಾಲೇಜಿನ ಐಕ್ಯೂಎಸಿ ವಿಭಾಗದ ಮಹಿಳಾ ಸಂವರ್ದನಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ಸೋಮವಾರ (ಮಾ.೯) ಹಮ್ಮಿಕೊಳ್ಳಲಾಗಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮುಖ್ಯ ಅಥಿತಿಗಳಾಗಿ ಭಾಗವಹಿಸಿ…
ಅದ್ದೂರಿಯಾಗಿ ಜರುಗಿದ ಇತಿಹಾಸ ಪ್ರಸಿದ್ದ ಘಂಟೆ ಬಸವೇಶ್ವರ ಸ್ವಾಮಿಯ ವಾರ್ಷಿಕ ಮಹೋತ್ಸವ
ಗುಬ್ಬಿ: ತಾಲೂಕಿನ ಕಸಬಾ ಹೋಬಳಿ ನಡವಲಪಾಳ್ಯ ಗ್ರಾಮದಲ್ಲಿ ಪ್ರತಿಷ್ಠಾಪನೆಗೊಂಡಿರುವ ಇತಿಹಾಸ ಪ್ರಸಿದ್ದ ಘಂಟೆ ಬಸವೇಶ್ವರ ಸ್ವಾಮಿಯ ವಾರ್ಷಿಕ ಮಹೋತ್ಸವ ಅದ್ದೂರಿಯಾಗಿ ಜರುಗಿತು. ಪ್ರತಿ ವರ್ಷ ಯುಗಾದಿ ಹಬ್ಬಕ್ಕಿಂತ ಮುಂಚಿತವಾಗಿ ರೈತರು ಸ್ಥಳೀಯವಾಗಿ ಬೆಳೆದಂತಹ ದವಸ ಧಾನ್ಯಗಳಿಂದ ಸಂಗ್ರಹಿಸಿ ಗ್ರಾಮಸ್ಥರು ಎಲ್ಲರೂ ಸೇರಿ ಬಸವಣ್ಣನಿಗೆ ಪರಾವ್ ಮಾಡಲಾಗುತ್ತದೆ. ರಾಗಿ ಮುದ್ದೆ, ಮಿಕ್ಸ್ ಕಾಳು, ಹಲಸಿನ ಕಾಯಿ ಪದಾಥ, ಅನ್ನ ಪಾಯಸ ಬೂಂದಿ ಅಡಿಕೆ ಎಲೆಯ ಊಟ ವಿಶೇಷವಾಗಿತ್ತು. ಗ್ರಾಮಸ್ಥರಿಂದ ಆರತಿ ಸೇವೆಯು ಲಿಂಗದವೀರರ ಕುಣಿತ, ಕರಡಿ ವಾದ್ಯ,…
ದಾಸರಕಲ್ಲಹಳ್ಳಿಯಲ್ಲಿ ನಡೆದ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ*
ಗುಬ್ಬಿ, : ಸ್ವಾಮಿ ವಿವೇಕಾನಂದರ ವಿಚಾರಧಾರೆಯನ್ನು ಯುವ ಸಮುದಾಯ ಅಳವಡಿಸಿಕೊಂಡು ಮುನ್ನಡೆಯಬೇಕೆಂದು ನಿವೃತ್ತ ಶಿಕ್ಷಕ ಬಿಸಿ ಶಿವಣ್ಣ ತಿಳಿಸಿದರು. ತಾಲ್ಲೂಕಿನ ಕಡಬ ಹೋಬಳಿಯ ದಾಸರಕಲ್ಲಹಳ್ಳಿ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಯುವಕರ ಸಂಘದ ವತಿಯಿಂದ ನಡೆದ ಸ್ವಾಮಿ ವಿವೇಕಾನಂದ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು ಸ್ವಾಮಿ ವಿವೇಕಾನಂದರು ಯುವಕರಿಗೆ ಪ್ರೇರಣೆಯಾಗಿದ್ದು ಅವರ ತತ್ವ ,ವಿಚಾರ, ಮೌಲ್ಯಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಳ್ಳಬೇಕು.ತಂದೆ ತಾಯಿಗಳು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದಾಗ ಅವರು ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ…
ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗುವುದಿಲ್ಲ.ಗೋಟೂರು ಶಿವಪ್ಪ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ವಿದ್ಯಾರ್ಥಿನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರಿಕ್ಷೆಗಳು ಮತ್ತು ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಧುಗಿರಿ ಉಪವಿಭಾಗಾಧಿಕಾರಿಗಳಾದ ಶ್ರೀ ಗೋಟೂರು ಶಿವಪ್ಪನವರು ಮಾತನಾಡಿದರು. ಹಿಂದುಳಿದ ವರ್ಗಗಳ ಕಲ್ಯಾಣಾ ಇಲಾಖೆಯಿಂದ ಮಕ್ಕಳಿಗೆ ಸ್ಪರ್ಧಾತ್ಮಕ ಮನೋಭಾವ ಭಿತ್ತುವ ಕೆಲಸ ಮಾಡುತ್ತಿದ್ದು ವಿದ್ಯಾರ್ಥಿಗಳೆಲ್ಲರೂ ಇಲಾಖೆಯ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಅಧಿಕಾರಿಗಳಾಗಿ ಸೇವೆ ಸಲ್ಲಿಸಬೇಕು. ನಾನೂ ಕೂಡ ಹಿಂದಳಿದ ವರ್ಗಗಳ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಲದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿ ಎಂದು ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು….