22ರಿಂದ ನಗರದಲ್ಲಿ ರಂಗ ದಸರಾ ನಾಟಕೋತ್ಸವ 11 ದಿನಗಳ ನಾಟಕೋತ್ಸವದಲ್ಲಿ 15 ನಾಟಕಗಳ ಪ್ರದರ್ಶನ
ತುಮಕೂರು: ದಸರಾ ಉತ್ಸವದ ಅಂಗವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ರಂಗಭೂಮಿ ಕಲಾವಿದರ ಸಂಘದ ಸಹಯೋಗದಲ್ಲಿ ಈ ತಿಂಗಳ 22ರಿಂದ 11 ದಿನಗಳ ಕಾಲ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಮಾಸ್ಟರ್ ಹಿರಣ್ಣಯ್ಯ ರಂಗವೇದಿಕೆಯಲ್ಲಿ ತುಮಕೂರು ರಂಗ ದಸರಾ ನಾಟಕೋತ್ಸವ ಏರ್ಪಾಟಾಗಿದೆ. ಈ ಸಂಬಂಧ ಜಿಲ್ಲಾ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ವೈ.ಎನ್.ಶಿವಣ್ಣನವರ ಅಧ್ಯಕ್ಷತೆಯಲ್ಲಿ ಕಲಾವಿದರು ಶನಿವಾರ ಸಭೆ ಸೇರಿ ಕಾರ್ಯಕ್ರಮಗಳ ಸಿದ್ಧತೆ ಕುರಿತು ಚರ್ಚೆ ನಡೆಸಿದರು. ಹಿರಿಯ ಕಲಾವಿದ ಎಂ.ವಿ.ನಾಗಣ್ಣ ಮಾತನಾಡಿ, ಇದೇ ಮೊದಲ ಬಾರಿಗೆ…