ಜಿಲ್ಲಾಡಳಿತದ ದಸರಾದಲ್ಲಿ ಲಕ್ಷಾಂತರ ರೂ. ಹಣ ದುರುಪಯೋಗ ಖರ್ಚು- ವೆಚ್ಚಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಒತ್ತಾಯ
ತುಮಕೂರು: ಸರ್ಕಾರದ ಅನುದಾನ ಹಾಗೂ ಸಾರ್ವಜನಿಕರ ತೆರಿಗೆ ಹಣ ಬಳಸಿಕೊಂಡು ಕಳೆದ ವರ್ಷ ಜಿಲ್ಲಾಡಳಿತ ನಗರದಲ್ಲಿ ಆಚರಿಸಿದ ದಸರಾ ಮಹೋತ್ಸವದಲ್ಲಿ ಲಕ್ಷಾಂತರ ರೂ. ಸಾರ್ವಜನಿಕರ ಹಣ ದುರುಪಯೋಗವಾಗಿದೆ. ಆಗಿನ ಲೆಕ್ಕ ನೀಡದೆ ಸಮಿತಿಯವರು ಯಾವ ಮುಖ ಹೊತ್ತು ಈ ಬಾರಿ ಮತ್ತೊಂದು ದಸರಾ ಉತ್ಸವ ಆಚರಿಸಲು ಹೊರಟಿದ್ದಾರೆ? ಎಂದು ತುಮಕೂರು ದಸರಾ ಸಮಿತಿ ಖಜಾಂಚಿ ಜಿ.ಎಸ್.ಬಸವರಾಜು ಪ್ರಶ್ನಿಸಿದರು. ಜಿಲ್ಲಾಡಳಿತ ಕಳೆದ ಬಾರಿ ನಡೆಸಿದ ದಸರಾ ಆಚರಣೆಯಲ್ಲಿ ಆಗಿರುವ ಹಣದ ಅಕ್ರಮಗಳ ಬಗ್ಗೆ ದಾಖಲಾತಿಗಳನ್ನು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ…