ಕೆಎನ್ ರಾಜಣ್ಣನವರನ್ನು ಮತ್ತೆ ಮಂತ್ರಿ ಸ್ಥಾನಕ್ಕೆ ನೆಮಿಸುವಂತೆ ಆಗ್ರಹಿಸಿ ಸಹಸ್ರಾರು ಬೆಂಬಲಿಗರ ಬೃಹತ್ ಪ್ರತಿಭಟನೆ
ತುಮಕೂರು: ಸಚಿವ ಸಂಪುಟದಿಂದ ಕೆ.ಎನ್.ರಾಜಣ್ಣನವರನ್ನು ವಜಾಗೊಳಿಸಿದ ಕ್ರಮ ಖಂಡಿಸಿ, ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲೆಯಾದ್ಯಂತ ಆಗಮಿಸಿದ್ದ ಸಹಸ್ರಾರು ಅಭಿಮಾನಿಗಳು ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಪಕ್ಷದ ಹೈಕಮಾಂಡ್ಗೆ ತಪ್ಪು ಮಾಹಿತಿ ನೀಡಿದ ಕಾಣದ ಕೈಗಳ ಪಿತೂರಿಯಿಂದ ಕೆ.ಎನ್.ಆರ್ ಸಚಿವ ಸ್ಥಾನ ಕಳೆದುಕೊಂಡಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೆ.ಎನ್.ಆರ್, ಆರ್.ಆರ್ ಅಭಿಮಾನಿ ಬಳಗ, ಕಾಂಗ್ರೆಸ್ ಮುಖಂಡರು, ಹಿಂದುಳಿದ ವರ್ಗಗಳ ಒಕ್ಕೂಟ, ದಲಿತ ಸಂಘರ್ಷ ಸಮಿತಿ, ಅಲ್ಪಸಂಖ್ಯಾತ ಸಮುದಾಯ ಸೇರಿದಂತೆ ವಿವಿಧ…