ನಕಲಿ ದಾಖಲೆಗಳನ್ನು ಸೃಷ್ಟಿಸುವವರ ವಿರುದ್ಧ ಕಾನೂನು ಕ್ರಮಕ್ಕೆ ಟಿ.ಬಿ.ಜಯಚಂದ್ರ. ಸೂಚನೆ
ತುಮಕೂರು: ಸರ್ಕಾರಿ ಜಮೀನಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸುವ ಅಧಿಕಾರಿ-ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿರಾ ಶಾಸಕ ಹಾಗೂ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ಸೂಚಿಸಿದರು. ಶಿರಾ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕಂದಾಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಖಾಲಿ ಇರುವ ಸರ್ಕಾರಿ ಜಾಗವನ್ನು ಲೂಟಿ ಮಾಡುತ್ತಿರುವವರನ್ನು ಮಟ್ಟ ಹಾಕಬೇಕು. ಮಧುಗಿರಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಕೆಲವು ಅಧಿಕಾರಿ/ಸಿಬ್ಬಂದಿಗಳು ನಕಲಿ…