ಪರೀಕ್ಷಾ ಕೇಂದ್ರಗಳಿಗೆ ಸಾನಿಟೈಸರ್ ಮಾಡುವಂತೆ ಕಟ್ಟುನಿಟ್ಟಿನ ಆದೇಶ ಮಾಡಿದ– ಅಪರ ಜಿಲ್ಲಾಧಿಕಾರಿ
ತುಮಕೂರು: ಜಿಲ್ಲೆಯಲ್ಲಿ ಜೂನ್ 9 ರಿಂದ 20ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ಸಾನಿಟೈಸರ್ ಮಾಡಿ ಯಾವುದೇ ಲೋಪದೋಷಗಳಿಲ್ಲದಂತೆ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆ- 1 ಮತ್ತು 2 ರ ಪರೀಕ್ಷೆಯನ್ನು ಯಾಶಸ್ವಿಯಾಗಿ ನಡೆಸಿದಂತೆ ಈ ಪರೀಕ್ಷೆಯನ್ನೂ ಪಾರದರ್ಶಕವಾಗಿ ನಡೆಸಬೇಕು…