ಗ್ರಾಮ ಆಡಳಿತಾಧಿಕಾರಿಗಳ ಕಾರ್ಯವೈಕರಿಗೆ ಬೇಸತ್ತ ಸಾರ್ವಜನಿಕರು
ತುಮಕೂರು : ತುಮಕೂರು ಕಸಬಾ ಹೋಬಳಿಯ ಗ್ರಾಮ ಆಡಳಿತಾಧಿಕಾರಿಗಳ ಕಾರ್ಯವೈಖರಿಗೆ ಬೇಸತ್ತ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ ಎಂದು ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ಜಿಲ್ಲಾಧ್ಯಕ್ಷ ಎನ್.ಕೆ.ನಿಧಿ ಕುಮಾರ್ ರವರು ಅಧಿಕಾರಿಗಳ ವರ್ತನೆಗೆ ತೀವ್ರ ಆಕ್ರೋಶವನ್ನು ಹೊರ ಹಾಕಿ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ. ಮನವಿ ಸಲ್ಲಿಸಿ ಮಾತನಾಡಿದ ಕಸಬಾ ಹೋಬಳಿ ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿಗಳು ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ವಂಶವೃಕ್ಷ, ವಿಧವಾವೇತನ, ಅಂಗವಿಕಲ ವೇತನ, ವೃದ್ದಾಪ್ಯ ವೇತನ, ವಾಸ ಸ್ಥಳ ದೃಢೀಕರಣ…