ಸಾವಿರಾರು ಹಳೆಯ ವಿದ್ಯಾರ್ಥಿಗಳು ದಶಕಗಳ ನಂತರ ಮಿಲನ
ತುಮಕೂರು:ಸರಕಾರಿ ಶಾಲೆಯೊಂದು,ಅದರಲ್ಲಿಯೂ ಉರ್ದು ಶಾಲೆಯೊಂದು ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಇದಕ್ಕೆ ಕಾರಣರಾದ ಎಲ್ಲರಿಗೂ ಹೃಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಕೌಶಲ್ಯಾಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಸಿ.ಎಸ್.ಪುರ ಹೋಬಳಿಯ ದೊಳ್ಳೇನಹಳ್ಳಿ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತಿದ್ದ ಅವರು,ಒಂದು ಮನೆ ನಿಬಾಯಿಸುವುದೇ ಕಷ್ಟದ ಕೆಲಸವಾಗಿರುವ ಸಂದರ್ಭದಲ್ಲಿ ನೂರು ವರ್ಷಗಳ ಕಾಲ ಶಾಲೆಯನ್ನು ಜೋಪಾನವಾಗಿ ಕಾಪಾಡಿಕೊಂಡು ಬರುವುದು ಕಷ್ಟದ…