ಪತ್ರಕರ್ತರಿಗೆ ಗಿಗ್ ಸ್ಟಾರ್ ಖಾತೆ ತೆರೆಯುವ ಅಭಿಯಾನ ಕೆನರಾ ಬ್ಯಾಂಕಿನ ಯೋಜನೆಗೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಚಾಲನೆ
ತುಮಕೂರು: ಜಿಲ್ಲೆಯ ಪತ್ರಕರ್ತರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಕೆನರಾ ಬ್ಯಾಂಕ್ನ ಶೂನ್ಯ ಬ್ಯಾಲೆನ್ಸ್ ಗಿಗ್ ಸ್ಟಾರ್ ಉಳಿತಾಯ ಬ್ಯಾಂಕ್ ಖಾತೆ ತೆರೆಯುವ ಅಭಿಯಾನಕ್ಕೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಚಾಲನೆ ನೀಡಿದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ ಹಾಗೂ ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಗಿಗ್ ಸ್ಟಾರ್ ಉಳಿತಾಯ ಖಾತೆ ತೆರೆಯುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಗಿಗ್ ಸ್ಟಾರ್ ಯೋಜನೆಯಲ್ಲಿ ಖಾತೆದಾರರಿಗೆ ಬ್ಯಾಂಕ್…