ಬಾಬಾಸಾಹೇಬರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವು ನಡೆಯಬೇಕು ಶ್ರೀಮತಿ ಬಿ.ವಿ.ಅಶ್ವಿಜ
ತುಮಕೂರು : ಮಹಾನಗರ ಪಾಲಿಕೆ ಆವರಣದಲ್ಲಿ ಬಾಬಾ ಸಾಹೇಬ್ ಡಾ|| ಬಿ.ಆರ್.ಅಂಬೇಡ್ಕರ್ ರವರ ಪುಣ್ಯಸ್ಮರಣೆಯ 68 ನೇ ಮಹಾಪರಿನಿಬ್ಬಾಣ ಭೀಮ ಸಂಕಲ್ಪ ದಿವಸ್ ಆಚರಣೆಯನ್ನು ಅಖಿಲ ಭಾರತ ಡಾ|| ಅಂಬೇಡ್ಕರ್ ಪ್ರಚಾರ ಸಮಿತಿಯ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ವತಿಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಬಾಬಾ ಸಾಹೇಬ್ ಅಂಬೇಡ್ಕರ್ರವರ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿ ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀಮತಿ ಬಿ.ವಿ.ಅಶ್ವಿಜರವರು ಮಾತನಾಡಿ ಬಾಬಾ ಸಾಹೇಬರು ಯಾವುದೇ ಒಂದು ಜಾತಿ ಅಥವಾ ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಲ್ಲ,…