ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ನಿಯಮಗಳನ್ನು ಪಾಲಿಸಲು ಮನವಿ
ತುಮಕೂರು: ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸಾರ್ವಜನಿಕರು ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ನರಸಿಂಹಮೂರ್ತಿ ಮನವಿ ಮಾಡಿದರು. ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ-2025ರ ಅಂಗವಾಗಿ ನಗರದ ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಅವರ ಕಚೇರಿ ಆವರಣದಲ್ಲಿಂದು ಏರ್ಪಡಿಸಿದ್ದ ವಿದ್ಯುತ್ ಸುರಕ್ಷತಾ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಅರಿವಿಲ್ಲದೆ ಹಲವಾರು ವಿದ್ಯುತ್ ಅವಘಡಗಳು ಸಂಭವಿಸುತ್ತವೆ. ಈ ನಿಟ್ಟಿನಲ್ಲಿ ವಿದ್ಯುತ್ ಬಳಕೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಈ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯುತ್…