ಸಿ, ಎಂ, ಸ್ಥಾನ ನೀಡುವಂತೆ ದಲಿತ ಮುಖಂಡರಿಂದ ಅರೆ ಬೆತ್ತಲೆ ಮೆರವಣಿಗೆ
ತುಮಕೂರು:ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದಾದರೆ ದಲಿತ ಸಮುದಾಯಕ್ಕೆ ಸೇರಿದ ಡಾ.ಜಿ.ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯಾಗಿ ಮಾಡಬೇಕೆಂದು ಒತ್ತಾಯಿಸಿ ಇಂದು ವಿವಿಧ ದಲಿತ ಪರ ಸಂಘಟನೆಗಳ ಮುಖಂಡರು ನಗರದ ಟೌನ್ಹಾಲ್ ವೃತ್ತದಲ್ಲಿ ಅರೆ ಬೆತ್ತಲೆ ಮೆರವಣಿಗೆ ನಡೆಸಿದರು. ದಲಿತ ಮುಖಂಡರಾದ ಟಿ.ಸಿ.ರಾಮಯ್ಯ ನೇತೃತ್ವದಲ್ಲಿ ನೂರಾರು ದಲಿತ ಯುವಜನರು ನಗರದ ಟೌನ್ಹಾಲ್ ಮುಂಭಾಗ ಇರುವ ಅಂಬೇಡ್ಕರ್ ಪ್ರತಿಮೆಯಿಂದ ಬಿಜಿಎಸ್ ವೃತ್ತದವರೆಗೆ ಅರೆಬೆತ್ತಲೆ ಮೆರವಣಿಗೆ ನಡೆಸಿ,ಕೆಲ ಕಾಲ ಮಾನವ ಸರಪಳಿ ನಿರ್ಮಿಸುವ ಮೂಲಕ ಕಾಂಗ್ರೆಸ್ ಪಕ್ಷದ ಮೇಲೆ ಒತ್ತಡ ಹಾಕುವ ಪ್ರಯತ್ನ ನಡೆಸಿದರು….