ಪಿಂಚಣಿ ಯೋಜನೆ ಜಾರಿಗೊಳಿಸಲು ಸರ್ಕಾರಕ್ಕೆ ಒತ್ತಾಯ ಅನುದಾನಿತ ಶಾಲಾಕಾಲೇಜು ಸಿಬ್ಬಂದಿ ಸಂಘದಿಂದ ಹೋರಾಟದ ಎಚ್ಚರಿಕೆ
ತುಮಕೂರು: ಪ್ರಣಾಳಿಕೆಯಲ್ಲಿ ಭರವಸೆ ನೀಡಿರುವ ಪ್ರಕಾರ ಸರ್ಕಾರ ರಾಜ್ಯದ ಎಲ್ಲಾ ಅನುದಾನಿತ ಶಾಲಾಕಾಲೇಜು ಸಿಬ್ಬಂದಿಗೆ ನಿಶ್ಚಿತ ಪಿಂಚಣಿ ಯೋಜನೆ ಜಾರಿ ಮಾಡಲೇಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರವಾದ ಹೋರಾಟ ನಡೆಸುವುದಾಗಿ ರಾಜ್ಯ ಅನುದಾನಿತ ಶಾಲಾಕಾಲೇಜು ನೌಕರರ ಸಂಘದ ಅಧ್ಯಕ್ಷ ಜಿ.ಹನುಮಂತಪ್ಪ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಶನಿವಾರ ನಗರದ ರವೀಂದ್ರ ಕಲಾನಿಕೇತನ ಸಭಾಂಗಣದಲ್ಲಿ ರಾಜ್ಯ ಅನುದಾನಿ ಶಾಲಾಕಾಲೇಜು ಪಿಂಚಣಿ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪಿಂಚಣಿ ಹೋರಾಟದಲ್ಲಿ ತಾವು ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಆಕ್ರೋಶಗೊಂಡು ಭಾವುಕರಾಗಿ ಹೇಳಿದರು….